Homeರಾಜಕೀಯಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!

ಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!

- Advertisement -
- Advertisement -

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಹೆಸರಿನ ರಾಷ್ಟ್ರೀಯ ಪ್ರಶಸ್ತಿಯನ್ನು ಬಿಜೆಪಿ ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರ ಕಳೆದ ಏಳು ವರ್ಷಗಳ ಅಧಿಕಾರವಧಿಯಲ್ಲಿ ಒಮ್ಮೆಯೂ ನೀಡಿಲ್ಲ. ಡಾ. ಅಂಬೇಡ್ಕರ್‌ ದಿನಾಚರಣೆ ಅಂಗವಾಗಿ ವಿತರಿಸಲಾಗುತ್ತಿದ್ದ ʼಅಂಬೇಡ್ಕರ್‌ ರಾಷ್ಟ್ರೀಯ ಪ್ರಶಸ್ತಿʼಯನ್ನು ನೀಡದೆ ಕಡೆಗಣಿಸುವ ನೀತಿಯನ್ನು ಮೋದಿ ಸರ್ಕಾರ ಅಳವಡಿಸಿಕೊಂಡಿದೆ.

ತಮಾಷೆಯ ಸಂಗತಿಯೆಂದರೆ ಅಂಬೇಡ್ಕರ್‌ ಹೆಸರಿನ ಯಾವುದೇ ಪ್ರಶಸ್ತಿಯನ್ನು ಕೊಡದಿದ್ದರೂ ಕೂಡ ಪ್ರತಿ ವರ್ಷ ಈ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸುವ ಜಾಹೀರಾತುಗಳು ಮಾತ್ರ ವಾಡಿಕೆಯಂತೆ ಎಲ್ಲೆಡೆ ರಾರಾಜಿಸುತ್ತವೆ. ಇದಕ್ಕಾಗಿ ಪ್ರತಿವರ್ಷ ಸುಮಾರು 50 ಲಕ್ಷ ರೂಪಾಯಿಗಳ ಬೊಕ್ಕಸದ ಹಣವೂ ವೆಚ್ಚವಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ನಿರ್ದೇಶಕ ವಿಕಾಸ್‌ ತ್ರಿವೇದಿಯವರನ್ನು ‘ದ ವೈರ್‌’ನ ವರದಿಗಾರರು ಸಂಪರ್ಕಿಸಿದಾಗ, ಈ ವರ್ಷ ಕೂಡ ಪ್ರಶಸ್ತಿಗಳನ್ನು ಕೊಡಲಾಗುತ್ತಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಅದಕ್ಕೆ ‘ಆಡಳಿತಾತ್ಮಕ’ ತೊಡಕುಗಳು ಕಾರಣವಂತೆ! ಕಳೆದ ಏಳು ವರ್ಷಗಳಿಂದಲೂ ಇದೇ ‘ಆಡಳಿತಾತ್ಮಕ’ ತೊಡಕುಗಳ ಕಾರಣ ಒಡ್ಡಿ ಪ್ರಶಸ್ತಿಯನ್ನು ಮೂಲೆಗುಂಪು ಮಾಡಲಾಗಿದೆ. ಈ ಫೌಂಡೇಷನ್‌ನ ಆಂತರಿಕ ಮಾಹಿತಿಯ ಪ್ರಕಾರ ಈ ಪ್ರಶಸ್ತಿಗಳನ್ನೇ ಮರುಪರಿಶೀಲಿಸಲಾಗುತ್ತಿದೆ!

ಇದನ್ನೂ ಓದಿ: ಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

ವಿಪರ್ಯಾಸವೆಂದರೆ, ಅರ್ಜಿ ಆಹ್ವಾನಿಸಿ ಜಾಹೀರಾತು ಕೊಟ್ಟಿರುವ ಫೌಂಡೇಷನ್‌ನಿಂದ ಪ್ರಶಸ್ತಿ ಕೊಡದಿರುವ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ ಅಥವಾ ಅವರ ಜಾಲತಾಣದಲ್ಲಿ ಜಾಲಾಡಿದರೂ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ‘ದ ವೈರ್‌’ನಲ್ಲಿ ವರದಿಯಾಗಿರುವಂತೆ, ಜಾಹೀರಾತು ಪ್ರಕಟಿಸಿದ ನಂತರ ಪ್ರಧಾನ ಮಂತ್ರಿಯ ಕಚೇರಿಯು ಪ್ರಶಸ್ತಿಗಳಿಗೆ ಸಂಬಂಧಿಸಿ ಹೆಚ್ಚುವರಿ ಮಾಹಿತಿ ಕೋರಿದೆ.

1992ರಲ್ಲಿ ‘ಡಾ.ಅಂಬೇಡ್ಕರ್‌ ರಾಷ್ಟ್ರೀಯ ಪ್ರಶಸ್ತಿ’ಯನ್ನು ಹಾಗೂ 1995ರಲ್ಲಿ ‘ಡಾ.ಅಂಬೇಡ್ಕರ್‌ ಅಂತಾರಾಷ್ಟ್ರೀಯ ಪ್ರಶಸ್ತಿ’ಯನ್ನು ಸ್ಥಾಪಿಸಲಾಗಿತ್ತು. ಅಂಬೇಡ್ಕರ್‌ ಅವರ ಆಶಯಗಳ ಈಡೇರಿಕೆಗಾಗಿ ಕೆಲಸ ಮಾಡುವ ವ್ಯಕ್ತಿಗಳು ಅಥವಾ ಸಂಘಟನೆಗಳಿಗೆ ಈ ರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತದೆ. ಹಾಗೆಯೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಸಮಾನತೆ ಮತ್ತು ಅನ್ಯಾಯಗಳ ವಿರುದ್ಧ ಗಮನಾರ್ಹ ಕೆಲಸ ಮಾಡಿದವರಿಗೆ ಈ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುತ್ತದೆ. ರಾಷ್ಟ್ರೀಯ ಪ್ರಶಸ್ತಿಯು ₹10 ಲಕ್ಷ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಯು ₹15 ಲಕ್ಷ ನಗದು ಬಹುಮಾನ ಒಳಗೊಂಡಿವೆ.

ಕಳೆದ ಏಳು ವರ್ಷಗಳಿಂದ ಅಂಬೇಂಡ್ಕರ್‌ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಗಳನ್ನು ನೀಡದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ!
ಡಾ. ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ, 2015 ರ ಪೋಸ್ಟರ್.

ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯಡಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಅಂಬೇಡ್ಕರ್‌ ಫೌಂಡೇಷನ್‌ ಈ ಪ್ರಶಸ್ತಿ ಪ್ರಧಾನ ಪ್ರಕ್ರಿಯೆಯ ಉಸ್ತುವಾರಿ ಹೊತ್ತಿದೆ. ಇಲಾಖೆಯ ಸಚಿವರು ಈ ಸಂಸ್ಥೆಯ ಚೇರ್ಮನ್‌ ಆಗಿದ್ದು, ಕೆಲವು ಉನ್ನತ ಅಧಿಕಾರಿಗಳು ಹಾಗೂ ಕೆಲವು ನಾಮಾಂಕಿತ ಸದಸ್ಯರು ಕೂಡ ಈ ಸಂಸ್ಥೆಯ ಸದಸ್ಯರಾಗಿರುತ್ತಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ರಾಜಕೀಯ ಲಾಭಕ್ಕಾಗಿ ಅಂಬೇಡ್ಕರ್‌ ಅವರ ಹೆಸರನ್ನು ಬಳಸಿಕೊಳ್ಳುವಲ್ಲಿ ನರೇಂದ್ರ ಮೋದಿಯವರು ಹಿಂದೆ ಬಿದ್ದಿಲ್ಲ. ಸಂದರ್ಭ ಒದಗಿದಾಗೆಲ್ಲಾ ಅಂಬೇಡ್ಕರ್‌ ಪ್ರತಿಮೆಗೆ ಹಾರ ಹಾಕಿ ಫೋಟೋ ತೆಗೆಸಿಕೊಳ್ಳುವುದು, ಬಣ್ಣದ ಮಾತುಗಳಲ್ಲಿ ಹೊಗಳುವುದನ್ನು ಒಂದು ಸಂಪ್ರದಾಯದಂತೆ ಪಾಲಿಸುತ್ತಾ ಬಂದಿದ್ದಾರೆ. ಈ ನಡೆಗಳು ಅಂಬೇಡ್ಕರ್‌ರನ್ನು ದೈವೀಕರಿಸಿ, ಕೇವಲ ಮೂರ್ತಿ ಪೂಜೆಗೆ ಸೀಮಿತಗೊಳಿಸುವ ಹುನ್ನಾರದ ಭಾಗ ಎನ್ನಬಹುದು.

ವಾಸ್ತವದಲ್ಲಿ ಅವರು ಪ್ರತಿನಿಧಿಸುವ ಭಾರತೀಯ ಜನತಾ ಪಕ್ಷ ಹಾಗೂ ಅದರ ಹಿಂದಿನ ಆರೆಸ್ಸೆಸ್‌ ಕೂಟ ಅಂಬೇಡ್ಕರ್‌ ಅವರ ವಿಚಾರಗಳಿಗೆ ಕಳಂಕ ಹಚ್ಚಲು, ಅವರ ನೆನಪನ್ನು ಮರೆಮಾಡಲು ನಿರಂತರವಾಗಿ ಪ್ರಯತ್ನಿಸುತ್ತಲೇ ಇದೆ. ಯಾಕೆಂದರೆ ಅಂಬೇಡ್ಕರ್‌ ಅವರು ಪ್ರತಿಪಾದಿಸುವ ಸ್ವಾತಂತ್ರ್ಯ, ಸಮಾನತೆಯ ವಿಚಾರಗಳು ಆರೆಸ್ಸೆಸ್‌ ಪ್ರತಿಪಾದಿಸುವ ಮನುವಾದಿ ವಿಚಾರಗಳಿಗೆ ತದ್ವಿರುದ್ಧವಾಗಿವೆ. ಹೀಗಾಗಿ ಅಂಬೇಡ್ಕರ್‌ ಅವರ ವಿಚಾರವನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಲೇ ಬಂದಿದ್ದಾರೆ.

ಉದಾಹರಣೆಗೆ ಭಾರತ ತನ್ನ ಸಂವಿಧಾನವನ್ನು ಅಂಗೀಕರಿಸಿದ ಬೆನ್ನಹಿಂದೆಯೇ ಅಂದರೆ 1949ರ ನವಂಬರ್‌ 30ರಂದು ಆರೆಸ್ಸೆಸ್‌ ತನ್ನ ಮುಖವಾಣಿ ‘ಆರ್ಗನೈಸರ್‌’ನಲ್ಲಿ ಹೀಗೆಂದು ಬರೆದಿತ್ತು: “ಭಾರತದ ಸಂವಿಧಾನದ ಹೀನಾಯ ಸಂಗತಿಯೆಂದರೆ ಇದರಲ್ಲಿ ಭಾರತೀಯ ಎಂಬುದು ಏನೂ ಇಲ್ಲ…ಇದರಲ್ಲಿ ಪ್ರಾಚೀನ ಭಾರತೀಯ ಸಾಂವಿಧಾನಿಕ ಕಾನೂನುಗಳು ಎಲ್ಲಿಯೂ ಕಾಣಿಸುವುದಿಲ್ಲ…ಮನುವಿನ ಕಾನೂನುಗಳು ಬಹಳ ಹಿಂದೆಯೇ ರಚಿತವಾಗಿವೆ. ಮನುಸ್ಮೃತಿಯಲ್ಲಿ ಹೇಳಲಾಗಿರುವ ಈ ಕಾನೂನುಗಳು ಇಂದಿಗೂ ಮಾನ್ಯವಾಗಿವೆ…ಆದರೆ ನಮ್ಮ ಸಂವಿಧಾನದ ಪಂಡಿತರು ಈ ಅಂಶಗಳನ್ನು ಲೆಕ್ಕಕ್ಕೇ ತೆಗೆದುಕೊಂಡಿಲ್ಲ”

ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ಈ ಶಕ್ತಿಗಳು ಅಂಬೇಡ್ಕರ್‌ ಹಾಗೂ ಸಂವಿಧಾನದ ಮೇಲೆ ಅಂದಿನಿಂದಲೂ ದಾಳಿ ಮಾಡುತ್ತಿದ್ದವು ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಾಬಾ ಸಾಹೇಬರು ನಮ್ಮ ಸಂವಿಧಾನವನ್ನು ರಚಿಸುವ ಎಷ್ಟೋ ವರ್ಷಗಳ ಮುಂಚೆಯೇ ಮನುಸ್ಮೃತಿಯನ್ನು ಬಹಿರಂಗವಾಗಿಯೇ ಸುಟ್ಟುಹಾಕಿ ಪ್ರತಿಭಟಿಸಿದ್ದರು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬೇಕು.

ಬಿಜೆಪಿ ಮತ್ತು ಆರೆಸ್ಸೆಸ್‌ ಕೂಟ ಅಂಬೇಡ್ಕರ್‌ ಅವರ ನೆನಪನ್ನು ಮರೆಮಾಡಲು ಅಥವಾ ಅವರನ್ನು ಕಡೆಗಣಿಸಲು ಅನಾದಿಯಿಂದಲೂ ನಾನಾ ತಂತ್ರಗಳನ್ನು ಹೆಣೆಯುತ್ತಾ ಬಂದಿದೆ. ಅಂಬೇಡ್ಕರ್‌ ಅವರು ನಮ್ಮನ್ನಗಲಿದ ಡಿಸೆಂಬರ್‌ 6ನೇ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಅಂದು ಲಕ್ಷಾಂತರ ಅಂಬೇಡ್ಕರ್‌ ಅಭಿಮಾನಿಗಳು ಅವರ ಸಮಾಧಿ ಸ್ಥಳವಿರುವ ಚೈತ್ಯಭೂಮಿಗೆ ಭೇಟಿ ನೀಡುತ್ತಾರೆ. ಅಂಬೇಡ್ಕರ್‌ ಅವರ ಬದುಕು ಮತ್ತು ಹೋರಾಟವನ್ನು ನೆನೆಯುತ್ತಾರೆ. ಅವರ ವಿಚಾರಗಳಿಂದ ಸ್ಫೂರ್ತಿ ಪಡೆಯುತ್ತಾರೆ.

1992ರಲ್ಲಿ ಬಾಬ್ರಿ ಮಸೀದಿಯನ್ನು ಕೆಡವಲು ಆರೆಸ್ಸೆಸ್‌ ಕೂಟ ಆರಿಸಿಕೊಂಡಿದ್ದು ಇದೇ ಡಿಸೆಂಬರ್ ಆರನೇ ದಿನವನ್ನು. ತದನಂತರದಲ್ಲಿ ವಿಶ್ವ ಹಿಂದೂ ಪರಿಷತ್‌, ಭಜರಂಗದಳ ಮುಂತಾದ ಕೇಸರಿ ಕೂಟದ ಸಂಘಟನೆಗಳು ಡಿಸೆಂಬರ್‌ ಆರರಂದು ‘ಶೌರ್ಯ ದಿವಸ್‌’ ಅಥವಾ ‘ವಿಜಯ್‌ ದಿವಸ್‌’ ಆಗಿ ಆಚರಿಸುತ್ತಾ ಬಂದಿದ್ದಾರೆ. ಇದು ಕಾಕತಾಳೀಯವೇನಲ್ಲ; ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ನಿಪುಣ ತಂತ್ರ.

ಇದನ್ನೂ ಓದಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ಅಂಬೇಡ್ಕರ್‌ ಅವರ ನೆನಪುಗಳನ್ನು ಮಸುಕುಗೊಳಿಸಿ, ಅವರನ್ನು ನೇಪಥ್ಯಕ್ಕೆ ಸರಿಸುವ ಉದ್ದೇಶ ಒಂದು ಕಾರ್ಯಸೂಚಿಯಾದರೆ, ಅಂಬೇಡ್ಕರ್‌ ಅವರ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಪ್ರಜಾತಂತ್ರದ ವಿಚಾರಗಳನ್ನು ಬದಿಗೆ ಸರಿಸಿ ಒಡೆದು ಆಳುವ ದ್ವೇಷರಾಜಕಾರಣವನ್ನು ಜನಮಾನಸದಲ್ಲಿ ಬಿತ್ತುವುದು ಮತ್ತೊಂದು ಕಾರ್ಯಸೂಚಿ. ಹಾಗೆಯೇ ನಾವು ಸಂವಿಧಾನ ಅಳವಡಿಸಿಕೊಂಡ ನವಂಬರ್‌ 26 ರ ಸುತ್ತಮುತ್ತ ಹಿಂಸೆಗೆ ಪ್ರಚೋದನೆ ನೀಡುವ, ದ್ವೇಷ ಭಾಷಣಗಳಿಗೆ ಕುಖ್ಯಾತವಾಗಿರುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇವುಗಳನ್ನು ‘ಧರ್ಮ ಸಂಸತ್‌’ ಎಂದು ಕರೆಯಲಾಗುತ್ತದೆ. ಈ ಸಂಸತ್‌ ಎಂಬ ಪದವನ್ನೂ ಕೂಡ ಬಹಳ ತಂತ್ರಗಾರಿಕೆಯಿಂದ ಧರ್ಮದ ಜೊತೆ ಜೋಡಿಸಲಾಗಿದೆ. ದೇಶದ ಪ್ರಜಾತಂತ್ರ ಪ್ರೇಮಿಗಳು ಇನ್ನಾದರೂ ಎಚ್ಚೆತ್ತುಕೊಳ್ಳುವರೆ? ಇನ್‌ಪುಟ್‌‌: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...