Homeಮುಖಪುಟಮಾರ್ಚ್‌ ಹೊತ್ತಿಗೆ ಮಹಾರಾಷ್ಟ್ರದಲ್ಲಿ BJP ಸರ್ಕಾರ ರಚಿಸಲಿದೆ: ಒಕ್ಕೂಟ ಸರ್ಕಾರದ ಸಚಿವ

ಮಾರ್ಚ್‌ ಹೊತ್ತಿಗೆ ಮಹಾರಾಷ್ಟ್ರದಲ್ಲಿ BJP ಸರ್ಕಾರ ರಚಿಸಲಿದೆ: ಒಕ್ಕೂಟ ಸರ್ಕಾರದ ಸಚಿವ

- Advertisement -
- Advertisement -

ಮುಂದಿನ ಮಾರ್ಚ್‌ ತಿಂಗಳಿನಲ್ಲಿ ಬಿಜೆಪಿ ಪಕ್ಷವು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಒಕ್ಕೂಟ ಸರ್ಕಾರದ ಸಚಿವ ನಾರಾಯಣ ರಾಣೆ ಶುಕ್ರವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ನಾಯಕರಾದ ದೇವೇಂದ್ರ ಫಡ್ನವೀಸ್ ಮತ್ತು ಚಂದ್ರಕಾಂತ್ ಪಾಟೀಲ್ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಪ್ರಫುಲ್ ಪಟೇಲ್ ಅವರು ದೆಹಲಿಯಲ್ಲಿ ಇದ್ದ ದಿನವೇ ಸಚಿವ ನಾರಾಯಣ ರಾಣೆ ಅವರ ಈ ಹೇಳಿಕೆ ಹೊರ ಬಿದ್ದಿದ್ದು ರಾಜಕೀಯ ಅಂಗಳದಲ್ಲಿ ಭಾರಿ ಊಹಾಪೋಹಗಳಿಗೆ ಕಾರಣವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಫಡ್ನವೀಸ್ ಅವರು ದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಶನಿವಾರಕ್ಕೆ ಎರಡು ವರ್ಷಗಳನ್ನು ಪೂರೈಸುತ್ತದೆ. ಈ ಹಿಂದಿನಿಂದಲೂ ಬಿಜೆಪಿಯ ಮಿತ್ರ ಪಕ್ಷವಾಗಿದ್ದ ಶಿವಸೇನೆ ಕಳೆದ ಬಾರಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಸೇರಿ ‘ಮಹಾ ವಿಕಾಸ್‌ ಅಘಾಡಿ’ ಎಂಬ ಹೆಸರಿನ ಮೈತ್ರಿ ಸರ್ಕಾವನ್ನು ರಚಿಸಿತ್ತು.

ಜೈಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಣೆ, ಮಾರ್ಚ್‌ನಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ. ಆದರೆ ಅವರು ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. ಸರ್ಕಾರಗಳನ್ನು ಉರುಳಿಸುವುದು ಮತ್ತು ರಚಿಸುವುದು ಗೌಪ್ಯವಾಗಿ ಮಾಡಲಾಗುತ್ತದೆ. ಅದನ್ನು ಸಾರ್ವಜನಿಕವಾಗಿ ಚರ್ಚಿಸಲಾಗುವುದಿಲ್ಲ ಎಂದು ನಾರಾಯಣ ರಾಣೆ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

“ರಾಜ್ಯದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಇದು ನಿಜವಾಗಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ನಾರಾಯಣ ರಾಣೆ ಹೇಳಿದ್ದಾರೆ.

ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರವು ಪೂರ್ಣಾವಧಿಯನ್ನು ಪೂರ್ಣಗೊಳಿಸಲಿದೆ ಎಂದು ಹೇಳಿದ್ದಾರೆ.

“ಬಿಜೆಪಿ ದೊಡ್ಡ ದೊಡ್ಡ ಭವಿಷ್ಯ ಹೇಳುತ್ತದೆ. ಆದರೆ ಅವು ನಿಜವಾಗುವುದಿಲ್ಲ, ಬಿಜೆಪಿಯನ್ನುಯಾರೂ ನಂಬುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಎನ್‌ಸಿಪಿ ಮತ್ತು ಬಿಜೆಪಿ ಪಕ್ಷಗಳ ಮೂಲಗಳು ಒಂದೇ ಸಮಯದಲ್ಲಿ ತಮ್ಮ ನಾಯಕರು ದೆಹಲಿಯಲ್ಲಿ ಇರುವುದರ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳನ್ನು ಅಲ್ಲಗೆಳೆದಿದ್ದಾರೆ.

ರಾಜ್ಯ ಬಿಜೆಪಿ ನಾಯಕರಾದ ದೇವೇಂದ್ರ ಫಡ್ನವೀಸ್ ಮತ್ತು ಚಂದ್ರಕಾಂತ್ ಪಾಟೀಲ್‌ ಅವರು ಕೇಂದ್ರ ನಾಯಕತ್ವದೊಂದಿಗೆ “ಸಾಂಸ್ಥಿಕ ವಿಷಯಗಳ” ಬಗ್ಗೆ ಚರ್ಚಿಸಲು ದೆಹಲಿಯಲ್ಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ರಕ್ಷಣಾ ಕುರಿತ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ಶರದ್‌ ಪವಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಮತ್ತು ಅವರ ವೇಳಾಪಟ್ಟಿಯನ್ನು ಒಂದು ವಾರದ ಹಿಂದೆಯೇ ಯೋಜಿಸಲಾಗಿತ್ತು ಎಂದು ಎನ್‌ಸಿಪಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕರಾಳ ಕೃಷಿ ಕಾಯ್ದೆಗಳ ವಿರುದ್ಧ ರೈತ ಹೋರಾಟಕ್ಕೆ ಐತಿಹಾಸಿಕ ಗೆಲುವು ಸವೆಸಿದ ಹಾದಿಯ ಕ್ರೊನಾಲಜಿ ಹೀಗಿತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...