Homeಮುಖಪುಟಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಹಲವು ಗುತ್ತಿಗೆಗಳನ್ನು ನೀಡುತ್ತಿರುವ ಬಿಜೆಪಿ ಸರ್ಕಾರಗಳು:...

ಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಹಲವು ಗುತ್ತಿಗೆಗಳನ್ನು ನೀಡುತ್ತಿರುವ ಬಿಜೆಪಿ ಸರ್ಕಾರಗಳು: ವರದಿ

- Advertisement -
- Advertisement -

ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡಿರುವ ಗುಜರಾತ್‌ನ ಅಹಮದಾಬಾದ್‌ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು ಗುತ್ತಿಗೆಗಳನ್ನು ನೀಡುತ್ತಿರುವುದನ್ನು ಮುಂದುವರಿಸುತ್ತಿವೆ. ದಿ ವೈರ್ ಈ ಕುರಿತು ತನಿಖಾ ವರದಿ ಪ್ರಕಟಿಸಿದೆ.

ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಂಸ್ಥಾಪಕ-ನಿರ್ದೇಶಕ, ಸುರೇಶ್‌ಚಂದ್ರ ಆರ್ಯ ‘ಸರ್ವದೇಶಿಕ್ ಆರ್ಯ ಪ್ರತಿನಿಧಿ ಸಭಾ’ ಎಂಬ ಪ್ರಮುಖ ಹಿಂದೂ ಸಂಘಟನೆಯ ಅಧ್ಯಕ್ಷನಾಗಿದ್ದಾನೆ. ಈ ಸಂಸ್ಥೆ ಆಯೋಜಿಸುವ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.

ಹಲವು ರಾಜ್ಯ ಸರ್ಕಾರಗಳು ಈಗಾಗಲೇ ಈ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿವೆ. ಮುಖ್ಯವಾಗಿ, ಸುರೇಶ್‌ಚಂದ್ರ ಅವರ ಪುತ್ರ, ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನೀತ್ ಆರ್ಯ 2017ರಲ್ಲಿ ಬಿಹಾರದ ನೇಮಕಾತಿ ಅಕ್ರಮ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಇಷ್ಟಾದರೂ, ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರದ ಸಂಸ್ಥೆಗಳು ಮತ್ತು ಹಲವು ರಾಜ್ಯಗಳ ಬಿಜೆಪಿ ಸರ್ಕಾರಗಳು ಈ ಕಂಪನಿಗೆ ಪರೀಕ್ಷೆಗಳನ್ನು ನಡೆಸಲು ಗುತ್ತಿಗೆ ನೀಡುವುದನ್ನು ಮುಂದುವರಿಸಿವೆ.

ಉತ್ತರ ಪ್ರದೇಶ ಸರ್ಕಾರದಿಂದ ಕಪ್ಪು ಪಟ್ಟಿಗೆ

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಯುಪಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆ, ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ.

ಜೂನ್ 20 ರಂದು, ಉತ್ತರ ಪ್ರದೇಶ ಸರ್ಕಾರವು ಎಜುಟೆಸ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಫೆಬ್ರವರಿ 17 ಮತ್ತು 18 ರಂದು 63,244 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ಈ ಕಂಪನಿಗೆ ನೀಡಲಾಗಿತ್ತು. 43 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಆದಿತ್ಯನಾಥ್ ಸರ್ಕಾರವು ಅಂತಿಮವಾಗಿ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಗುಜರಾತ್ ಮೂಲದ ಈ ಕಂಪನಿ ವಿವಾದಕ್ಕೆ ಸಿಲುಕಿರುವುದು ಇದೇ ಮೊದಲಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಹಲವು ಅಕ್ರಮಗಳಿಂದಾಗಿ ಈ ಹಿಂದೆಯೂ ಕಪ್ಪು ಪಟ್ಟಿಗೆ ಸೇರಿಸಲಾಗಿತ್ತು. ಆದರೂ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸುವ ಮತ್ತು ಪರೀಕ್ಷೆಗಳನ್ನು ನಡೆಸುವ ಒಪ್ಪಂದಗಳನ್ನು ಪಡೆಯುತ್ತಲೇ ಇದೆ.

ನಿಷೇಧಕ್ಕೆ ಒಂದು ದಿನ ಮುಂಚಿತವಾಗಿ, ಅಂದರೆ ಅಕ್ಟೋಬರ್ 19 2023 ರಂದು, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್‌) ಸೆಕ್ಷನ್ ಆಫೀಸರ್ ಹುದ್ದೆಗಳಿಗೆ(ಎಎಸ್‌ಒ) ನೇಮಕಾತಿ ಪರೀಕ್ಷೆಯನ್ನು ನಡೆಸಲು ಎಜುಟೆಸ್ಟ್ 8 ಕೋಟಿ ರೂಗಳ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಸಿಎಸ್‌ಐಆರ್‌ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಇನ್ನೊಂದು ಪ್ರಮುಖ ವಿಷಯವೆಂದರೆ ಸಿಎಸ್‌ಐಆರ್‌ನ ಅಧ್ಯಕ್ಷರು ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ಬಿಹಾರದಿಂದ ಕಪ್ಪು ಪಟ್ಟಿಗೆ ಸೇರ್ಪಡೆ

ಅಕ್ಟೋಬರ್ 20, 2023 ರಂದು, ಬಿಹಾರದ ಶಾಲಾ ಪರೀಕ್ಷಾ ಮಂಡಳಿಯ (ಪಾಟ್ನಾ) ಪರೀಕ್ಷಾ ನಿಯಂತ್ರಕರು ಎಜುಟೆಸ್ಟ್ ಸೊಲ್ಯೂಷನ್ಸ್‌ಗೆ ಪತ್ರ ಬರೆದ್ದರು. ಕಂಪನಿಯ ಯೋಜನಾ ವ್ಯವಸ್ಥಾಪಕನ “ತೀವ್ರ ನಿರ್ಲಕ್ಷ್ಯ ಧೋರಣೆ” ಮತ್ತು “ವೃತ್ತಿಪರವಲ್ಲದ ನಡವಳಿಕೆ” ಯ ಕಾರಣ ಬಿಹಾರ ಶಾಲಾ ಪರೀಕ್ಷಾ ಮಂಡಳಿಯ ಸಮಿತಿಯು ನಿಮ್ಮ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸುತ್ತಿದೆ ಎಂದು ತಿಳಿಸಿದ್ದರು.

ಬಿಹಾರದ ಮಾಧ್ಯಮಿಕ ಶಿಕ್ಷಕರ ಅರ್ಹತಾ ಪರೀಕ್ಷೆ ಸೇರಿದಂತೆ ಹಲವು ಪ್ರವೇಶ ಪರೀಕ್ಷೆಯಲ್ಲಿ ಎಜುಟೆಸ್ಟ್ ಸೊಲ್ಯೂಷನ್ಸ್‌ ಅಕ್ರಮವೆಸಗಿತ್ತು. ಕಡಿಮೆ ಅಂಕ ಗಳಿಸಿದ್ದರೂ ಉತ್ತೀರ್ಣ ಎಂದು ಘೋಷಿಸಲಾಗಿತ್ತು. ಈ ಕಾರಣದಿಂದ ಎಜುಟೆಸ್ಟ್ ಅನ್ನು ಮೂರು ವರ್ಷಗಳ ಕಾಲ ನಿಷೇಧಿಸಿ ಕಪ್ಪುಪಟ್ಟಿಗೆ ಸೇರಿಸಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಒಪ್ಪಂದ

ಬಿಹಾರ ಕಪ್ಪು ಪಟ್ಟಿಗೆ ಸೇರಿಸುವ ಒಂದು ದಿನ ಮುಂಚಿತವಾಗಿ, ಅಂದರೆ ಅಕ್ಟೋಬರ್ 19, 2023 ರಂದು, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್‌) ಸೆಕ್ಷನ್ ಆಫೀಸರ್ ಹುದ್ದೆಗಳಿಗೆ (ಎಎಸ್‌ಒ) ನೇಮಕಾತಿ ಪರೀಕ್ಷೆಯನ್ನು ನಡೆಸಲು ಎಜುಟೆಸ್ಟ್ 8 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಸಿಎಸ್‌ಐಆರ್‌ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಇನ್ನೊಂದು ಪ್ರಮುಖ ವಿಷಯವೆಂದರೆ ಸಿಎಸ್‌ಐಆರ್‌ನ ಅಧ್ಯಕ್ಷರು ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆದ ಹಿನ್ನೆಲೆ, ಉತ್ತರಾಖಂಡದ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪರೀಕ್ಷೆಯಲ್ಲಿ ಹಲವು ಅಕ್ರಮಗಳು ನಡೆದರೂ, ಸಿಎಸ್‌ಐಆರ್‌ ಆರೋಪಗಳನ್ನು ನಿರಾಕರಿಸಿದೆ.

ಅಕ್ರಮಗಳ ಹಿನ್ನೆಲೆ ಹೆಸರು ಬದಲಿಸಿರುವ ಕಂಪನಿ

ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ತಾನು 1981 ರಿಂದ ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ಹೇಳಿಕೊಂಡಿದೆ. ಕಂಪನಿಯ ವೆಬ್‌ಸೈಟ್ ಪ್ರಕಾರ, ಇದು ಕಳೆದ 40 ವರ್ಷಗಳಲ್ಲಿ ಸಾವಿರಾರು ಪರೀಕ್ಷೆಗಳನ್ನು ನಡೆಸಿದೆ ಮತ್ತು ಇವೆಲ್ಲವೂ ದೋಷ ರಹಿತವಾಗಿವೆ.

ಎಜುಟೆಸ್ಟ್ ಕಂಪನಿಯು ಉತ್ತರ ಪ್ರದೇಶ ಅಧೀನ ಸೇವೆಗಳ ಆಯ್ಕೆ ಆಯೋಗ, ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ, ಭಾರತ್ ಎಲೆಕ್ಟ್ರಾನಿಕ್ಸ್, ಛತ್ತೀಸ್‌ಗಢ ಸರ್ಕಾರ, ಹರಿಯಾಣ ಎಸ್‌ಎಸ್‌ಸಿ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ತಿರುಚಿರಾಪಳ್ಳಿ), ಪವರ್ ಸಿಸ್ಟಮ್ ಆಪರೇಷನ್, ರಾಜಸ್ಥಾನ ಕೇಂದ್ರ ವಿಶ್ವವಿದ್ಯಾಲಯ, ಆಯಿಲ್ ಇಂಡಿಯಾ ಲಿಮಿಟೆಡ್‌ನಂತಹ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಕೆಲಸ ಮಾಡಿದೆ.

ಈ ಮೊದಲು ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಅನ್ನು ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ ಎಂದು ಎಂದು ಕರೆಯಲಾಗುತ್ತಿತ್ತು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತೊಡಗಿಸಿಕೊಂಡ ನಂತರ, ಅದು ತನ್ನ ಹೆಸರನ್ನು ಬದಲಿಸಿಕೊಂಡಿದೆ.

2017ರಲ್ಲಿ ಕಂಪನಿಯ ನಿರ್ದೇಶಕನ ಬಂಧನ

2017ರಲ್ಲಿ ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಬಿಎಸ್‌ಎಸ್‌ಸಿ) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಬಿಹಾರ ಪೊಲೀಸರು ಬಿಎಸ್‌ಎಸ್‌ಸಿ ಅಧ್ಯಕ್ಷ ಮತ್ತು ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಜೊತೆಗೆ ಪ್ರಶ್ನೆ ಪತ್ರಿಕೆಯನ್ನು ಮುದ್ರಿಸಿದ ಹಳೆಯ ಮೂಲ ಹೆಸರಿನ ಕಂಪನಿ ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ವಿನೀತ್ ಆರ್ಯನನ್ನು ಫೆಬ್ರವರಿ 2017 ರಲ್ಲಿ ಬಂಧಿಸಿದ್ದರು. ನಂತರ ಆತ ಸ್ವಲ್ಪ ಸಮಯದ ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಈಗಲೂ ಹಲವು ಆರೋಗ್ಯದ ಸುಳ್ಳುಗಳನ್ನು ಹೇಳಿ ಜಾಮೀನಿನ ಮೇಲೆ ಇದ್ದಾನೆ.

ಬಿಎಸ್‌ಎಸ್‌ಸಿ ಪೇಪರ್ ಸೋರಿಕೆ ಹಗರಣವು ಕಾನ್ಫಿಸೆಕ್ ಪ್ರೈವೇಟ್ ಲಿಮಿಟೆಡ್‌ಗೆ ಬಹಳಷ್ಟು ಅಪಖ್ಯಾತಿ ತಂದಿತು. ವಿನೀತ್ ಪಾತ್ರದ ಬಗ್ಗೆ ದೇಶದ ಪ್ರಮುಖ ನಗರಗಳಲ್ಲಿ ಹಲವು ಸುದ್ದಿಗಳು ಪ್ರಕಟವಾಗಿದ್ದವು. ಇದಾದ ನಂತರದಲ್ಲಿ ಆಗಸ್ಟ್ 23,2018 ರಂದು ನೀಡಲಾದ ಜಿಎಸ್‌ಟಿ ದಾಖಲೆಯಲ್ಲಿ, ಕಂಪನಿಯ ಹೆಸರನ್ನು ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂದು ಬದಲಾಯಿಸಲಾಗಿದೆ.

ಎಜುಟೆಸ್ಟ್ ಸೊಲ್ಯೂಷನ್ಸ್ ಕಂಪನಿಯ ಸಂಸ್ಥಾಪಕರು ಹಮ್ಮಿಕೊಳ್ಳುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್‌, ಕಿಶನ್‌ ರೆಡ್ಡಿ, ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್‌ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳುತ್ತಿರುವುದು ಅಕ್ರಮಗಳಲ್ಲಿ ಬಿಜೆಪಿ ಸರ್ಕಾರಗಳ ಪರೋಕ್ಷ ಸಹಕಾರವಿದೆ ಎಂದು ಹೇಳಲಾಗುತ್ತಿದೆ.

ಕೃಪೆ : ದಿ ವೈರ್ 

ಇದನ್ನೂ ಓದಿ : ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ನಂತರ 12ನೇ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...