Homeಮುಖಪುಟಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಧೃತರಾಷ್ಟ್ರನಂತೆ ಕುರುಡಾಗಿದೆ: ಉದ್ಭವ್ ಠಾಕ್ರೆ ವಾಗ್ದಾಳಿ

- Advertisement -
- Advertisement -

ಮಣಿಪುರದಲ್ಲಿ ಮೇ 4 ರಂದು ಇಬ್ಬರು ಬುಡುಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ಕುರಿತು ಶಿವಸೇನ (ಯುಬಿಟಿ) ಮುಖ್ಯಸ್ಥ ಉದ್ಭವ್ ಠಾಕ್ರೆ ಶನಿವಾರ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಥಾಣೆ ನಗರದಲ್ಲಿ ಉತ್ತರ ಭಾರತೀಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ ಮಣಿಪುರದಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದಾಗ ದೆಹಲಿಯಲ್ಲಿ ಅಧಿಕಾರದಲ್ಲಿರುವವರು (ಕೇಂದ್ರ ಸರ್ಕಾರ) ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿ ಮಹಾಭಾರತದ ಧೃತರಾಷ್ಟ್ರನಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ಇಂತಹ ಹಲವಾರು ಘಟನೆಗಳು ನಡೆದಿವೆ. ಇದಕ್ಕೆ ಮುಖ್ಯಮಂತ್ರಿಗಳ ಆಡಳಿತ ವ್ಯಫಲ್ಯವೇ ಕಾರಣ ಎಂದು ಎನ್ ಬಿರೇನ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡರು.

ರಾಷ್ಟ್ರ ಪತಿ ದೌಪದಿ ಮುರ್ಮು ಕೂಡ ಒಬ್ಬ ಬುಡಕಟ್ಟು ಮಹಿಳೆ, ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ನೀವು ಏನು ಮಾಡುತ್ತಿದ್ದೀರಿ? ನಿಮಗೆ ಯಾವುದೇ ಸೂಕ್ಷ್ಮತೆ ಇಲ್ಲವೇ? ಎಂದು ಠಾಕ್ರೆ ಪ್ರಶ್ನಿಸಿದರು. ಮಣಿಪುರ ಗವರ್ನರ್ ಅನುಸೂಯಾ ಉಯಿಕ ಜೊಡ ಒಬ್ಬ ಮಹಿಳೆ, ಅವರು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ ಉದ್ಭವ್ ಠಾಕ್ರೆ ನಿಮಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.

ಹಿಂದೂ ಮಹಾಕಾವ್ಯ ಮಹಾಭಾರತದ ರಾಜ ಧೃತರಾಷ್ಟ್ರನಂತೆ ಬಿಜೆಪಿ ಸರ್ಕಾರ ಕುರುಡಾಗಿದೆ ಎಂದು ಹೇಳಿದರು.

”ಮಣಿಪುರ ಹೊತ್ತಿಯುರಿಯುತ್ತಿದೆ ಆ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ? ಮಹಾಭಾರತದಲ್ಲಿ ಧೃತರಾಷ್ಟ್ರನ ಮುಂದೆ ದ್ರೌಪದಿಯ ವಸ್ತ್ರಾಪಹರಣ ಮಾಡಲಾಯಿತು ಆದರೆ ಅವನು ಕುರುಡನಾಗಿದ್ದರಿಂದ ಅವನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅವರಂತೆಯೇ ಬಿಜೆಪಿ ನೇತೃತ್ವದ ಸರ್ಕಾರವೂ ಕುರುಡಾಗಿದೆ” ಎಂದು  ಠಾಕ್ರೆ ಗುಡುಗಿದರು.

”ಒಂದು ವೀಡಿಯೊದಿಂದ ನಾವು ಆ ಇಬ್ಬರು ಮಹಿಳೆಯರ ಬಗ್ಗೆ ತಿಳಿದುಕೊಂಡಿದ್ದೇವೆ ಆದರೆ ಮಣಿಪುರದಲ್ಲಿ ಇಂತಹ ಘಟನೆಗಳು ಸಾಕಷ್ಟು ನಡೆಯುತ್ತವೆ” ಎಂದು ಮಣಿಪುರದ ಮುಖ್ಯಮಂತ್ರಿ ಹೇಳಿದರು… ಇದು ನಾಚಿಕೆಗೇಡಿನ ಸಂಗತಿ!” ಎಂದು ಠಾಕ್ರೆ ಕಿಡಿಕಾರಿದರು.

”ಶ್ರೀಕೃಷ್ಣನು ದ್ರೌಪದಿಯನ್ನು ವಸ್ತ್ರಾಪಹರಣದಿಂದ ರಕ್ಷಿಸಲು ಬಂದಿದ್ದನು, ಆದರೆ ಇಂದು ಮಹಿಳೆಯರನ್ನು ರಕ್ಷಿಸಲು ಯಾರೂ ಬರುವುದಿಲ್ಲ.” ನಂತರ ಪುಷ್ಯಮಿತ್ರ ಉಪಾಧ್ಯಾಯ ಅವರ ಸುನೋ ದ್ರೌಪದಿ ಶಾಸ್ತ್ರ ಉತಾ ಲೋ (ದ್ರೌಪದಿಯನ್ನು ಆಲಿಸಿ, ನಿಮ್ಮನ್ನು ತೋಳು ಮಾಡಿಕೊಳ್ಳಿ) ಎಂಬ ಕವಿತೆಯನ್ನು ಠಾಕ್ರೆ ಉಲ್ಲೇಖಿಸಿದರು.

”ಪ್ರಧಾನಿಗೆ ಮಣಿಪುರಿಗಳ ಬಗ್ಗೆ ಕಾಳಜಿಯಿಲ್ಲ, ಆದರೆ ರಾಮಮಂದಿರ ನಿರ್ಮಾಣದ ಬಗ್ಗೆ ಮಾತ್ರ ಕಾಳಜಿ ಇದೆ. ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಸುಪ್ರೀಂ ಕೋರ್ಟ್‌ನ ಆದೇಶದಿಂದ ಹೊರತು ಅವರಿಂದ ಅಲ್ಲ ಎಂಬುದನ್ನು ಅವರು ಅರಿತುಕೊಳ್ಳಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು.

ವಿರೋಧ ಪಕ್ಷಗಳ ಒಕ್ಕೂಟವನ್ನು ಭಯೋತ್ಪಾದಕ ಸಂಘಟನೆಯೊಂದಿಗೆ ಹೋಲಿಸಿದ ಪ್ರಧಾನಿ ವಿರುದ್ಧ ಹರಿಹಾಯ್ದ ಠಾಕ್ರೆ, ”ಪ್ರಧಾನಿ ಅವರು INDIA [ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ]ಅನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯಲ್ಲೂ INDIA ಇದೆ ಎಂದು ಹೇಳಿದರು. ಭ್ರಷ್ಟಾಚಾರದ ಆರೋಪ ಹೊತ್ತಿರುವವರ ಜೊತೆ ಕೈಜೋಡಿಸಿರುವುದು ನಿಮ್ಮದೆಂತಹ ಹಿಂದುತ್ವ. ನಾನು ಅವರಿಗೆ ನೆನಪಿಸಲು ಬಯಸುತ್ತೇನೆ, ನೀವು ವಿದೇಶಕ್ಕೆ ಹೋದಾಗ, ನೀವು ನಮ್ಮ ಭಾರತವನ್ನು ಪ್ರತಿನಿಧಿಸುತ್ತೀರಿ, ಇಂಡಿಯನ್ ಮುಜಾಹಿದೀನ್ ಅಲ್ಲ” ಎಂದು ತಿವಿದಿದ್ದಾರೆ.

ಇದನ್ನೂ ಓದಿ: ಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...