Homeಮುಖಪುಟಬಿಜೆಪಿ ಸರ್ಕಾರವು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷರಂತೆ ಮಾರ್ಪಟ್ಟಿದೆ: ದೆಹಲಿ ಸಚಿವ ಸೌರಭ್ ಭಾರದ್ವಾಜ್

ಬಿಜೆಪಿ ಸರ್ಕಾರವು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷರಂತೆ ಮಾರ್ಪಟ್ಟಿದೆ: ದೆಹಲಿ ಸಚಿವ ಸೌರಭ್ ಭಾರದ್ವಾಜ್

- Advertisement -
- Advertisement -

“ಬಿಜೆಪಿ ಸರ್ಕಾರವು,  ನಾಯಕರು ಮತ್ತು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷ್ ಆಡಳಿತದಂತೆ ಮಾರ್ಪಟ್ಟಿದೆ” ಎಂದು ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ನರೇಂದ್ರ ಮೋದಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನೇತೃತ್ವದ ಕೇಂದ್ರದ ಆಡಳಿತವನ್ನು ಅವರು ಬ್ರಿಟಿಷ್ ರಾಜ್‌ಗೆ ಹೋಲಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, “ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಮಹಾರ‍್ಯಾಲಿಯಲ್ಲಿ  ಪ್ರತಿಪಕ್ಷದ ಹಿರಿಯ ನಾಯಕರು ಜಮಾಯಿಸುವುದನ್ನು ಮತ್ತು ಜಾರಿ ನಿರ್ದೇಶನಾಲಯದಿಂದ (ಇಡಿ) ಅಕ್ರಮವಾಗಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸುವುದನ್ನು ನೋಡಿ ಬಿಜೆಪಿ ಭಯಗೊಂಡಿತು” ಎಂದು ಹೇಳಿದರು.

“ಮಾರ್ಚ್ 31 ರಂದು ರಾಮಲೀಲಾ ಮೈದಾನದಲ್ಲಿ ಕಂಡುಬಂದದ್ದು ಬಿಜೆಪಿಯನ್ನು ಬೆಚ್ಚಿಬೀಳಿಸಿದೆ. ಇಂಡಿಯಾ ವಿರೋಧ ಪಕ್ಷಗಳ ದೊಡ್ಡ ನಾಯಕರು ಆ ವೇದಿಕೆಯಲ್ಲಿ ಜಮಾಯಿಸಿದರು… ನಮ್ಮ ಪಕ್ಷದ ಎಲ್ಲಾ ಹಿರಿಯ ನಾಯಕರು ಜೈಲಿನಲ್ಲಿದ್ದಾರೆ; ಅತಿಶಿ, ದುರ್ಗೇಶ್ ಪಾಠಕ್, ಸಂದೀಪ್ ಪಾಠಕ್ ಮತ್ತು ನಾನು ಚಿಕ್ಕವನು ಎಂದು ನಾವು ಈ ನಾಯಕರನ್ನು ವೇದಿಕೆಗೆ ಬರಲು ವಿನಂತಿಸಿದ್ದೆವು. ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಎಲ್ಲಾ ನಾಯಕರು ಹೇಳಿದರು” ಎಂದು ಸಚಿವರು ಹೇಳಿದರು.

ಕೇಸರಿ ಪಾಳಯವು ತನ್ನ ಎಲ್ಲಾ ಹಿರಿಯ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಎಎಪಿಯನ್ನು ಹತ್ತಿಕ್ಕಲು ತನ್ನ ಅತ್ಯುತ್ತಮ ಪ್ರಯತ್ನ ಮಾಡಿದೆ. ಜನರು ತಮ್ಮ ವಿರುದ್ಧ ಮತ ಚಲಾಯಿಸಲು ಹೆದರುವುದಿಲ್ಲ ಎಂದು ಬಿಜೆಪಿಗೆ ತಿಳಿದಿರುವುದರಿಂದ ಅವರು ಮತದರರನ್ನು ಹೆದರಿಸಲು ಪ್ರಾರಂಭಿಸಿದರು, ಇದು ದೇಶದ ತೀವ್ರ ಕಳವಳದ ವಿಷಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“ಬಿಜೆಪಿಯವರು ನಮಗೆ ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದರು ಎಂದು ಹೇಳುತ್ತಾರೆ. ಅವರು ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಿದರು ಮತ್ತು ನಮ್ಮ ದೊಡ್ಡ ನಾಯಕರೆಲ್ಲರನ್ನು ಬಂಧಿಸಿದರು. ಆದರೆ, ಪಕ್ಷವು ಇನ್ನೂ ಧೃಡವಾಗಿ ನಿಂತಿದೆ… ಜನರು ಮತ ಹಾಕಲು ಹೆದರುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ. ಇಂದು  ದೇಶದ ಜನರು ಭಯಭೀತರಾಗಿದ್ದಾರೆ ಮತ್ತು ಇದು ದೇಶಕ್ಕೆ ತೀವ್ರ ಕಳವಳಕಾರಿಯಾಗಿದೆ. ಬ್ರಿಟಿಷರ ಆಳ್ವಿಕೆಯಲ್ಲಿ ಜನರು ಹೆದರುತ್ತಿದ್ದರು… ಜೈಲಿನ ಬೆದರಿಕೆಯಿಂದ ಹೆದರಿಸಿ ಬ್ರಿಟಿಷರು ನಮ್ಮನ್ನು ಆಳಿದರು. ಇಂದು ಬಿಜೆಪಿ ನೇತರತ್ವದ ಕೇಂದ್ರ ಸರ್ಕಾರವು ಬಹುತೇಕ ಹಾಗೆ ಮಾರ್ಪಟ್ಟಿದೆ” ಎಂದು ಅವರು ಹೇಳಿದರು.

ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಇದೀಗ ತನಿಖಾ ಸಂಸ್ಥೆಯು ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ರಾಘವ್ ಚಡ್ಡಾ ಅವರನ್ನು ಬಂಧಿಸಲಿದೆ ಎಂದು ಅವರ ಸಹೋದ್ಯೋಗಿ ಅತಿಶಿ ದೊಡ್ಡ ಹೇಳಿಕೆ ನೀಡಿದ ನಂತರ ಅವರ ಹೇಳಿಕೆಗಳು ಹೊರಬಿದ್ದಿವೆ.

“ಶೀಘ್ರದಲ್ಲೇ ನಮ್ಮ ನಿವಾಸದ ಮೇಲೆ ಇಡಿ ದಾಳಿ ನಡೆಯಲಿದೆ ಮತ್ತು ನಂತರ ನಮ್ಮನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ನನಗೆ ತಿಳಿಸಲಾಗಿದೆ. ಬಿಜೆಪಿ ಈಗ ಆಮ್ ಆದ್ಮಿ ಪಕ್ಷದ ಮುಂದಿನ ಸಾಲಿನ ನಾಯಕರನ್ನು ಗುರಿಯಾಗಿಸಿಕೊಂಡಿದೆ” ಎಂದು ಅತಿಶಿ ಹೇಳಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಅವರನ್ನು ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೀಗ ಅವರು ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ; ಬಿಜೆಪಿ ಸೇರ್ಪಡೆಗೊಳ್ಳಿ ಅಥವಾ ಬಂಧನಕ್ಕೆ ಸಿದ್ಧರಾಗಿ: ದೆಹಲಿ ಸಚಿವೆ ಅತಿಶಿಗೆ ಬೆದರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...