Homeಮುಖಪುಟಬಿಜೆಪಿ ಸರ್ಕಾರವು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷರಂತೆ ಮಾರ್ಪಟ್ಟಿದೆ: ದೆಹಲಿ ಸಚಿವ ಸೌರಭ್ ಭಾರದ್ವಾಜ್

ಬಿಜೆಪಿ ಸರ್ಕಾರವು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷರಂತೆ ಮಾರ್ಪಟ್ಟಿದೆ: ದೆಹಲಿ ಸಚಿವ ಸೌರಭ್ ಭಾರದ್ವಾಜ್

- Advertisement -
- Advertisement -

“ಬಿಜೆಪಿ ಸರ್ಕಾರವು,  ನಾಯಕರು ಮತ್ತು ಜನರನ್ನು ಹೆದರಿಸುತ್ತಿದ್ದ ಬ್ರಿಟಿಷ್ ಆಡಳಿತದಂತೆ ಮಾರ್ಪಟ್ಟಿದೆ” ಎಂದು ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ನರೇಂದ್ರ ಮೋದಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನೇತೃತ್ವದ ಕೇಂದ್ರದ ಆಡಳಿತವನ್ನು ಅವರು ಬ್ರಿಟಿಷ್ ರಾಜ್‌ಗೆ ಹೋಲಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರದ್ವಾಜ್, “ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಮಹಾರ‍್ಯಾಲಿಯಲ್ಲಿ  ಪ್ರತಿಪಕ್ಷದ ಹಿರಿಯ ನಾಯಕರು ಜಮಾಯಿಸುವುದನ್ನು ಮತ್ತು ಜಾರಿ ನಿರ್ದೇಶನಾಲಯದಿಂದ (ಇಡಿ) ಅಕ್ರಮವಾಗಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸುವುದನ್ನು ನೋಡಿ ಬಿಜೆಪಿ ಭಯಗೊಂಡಿತು” ಎಂದು ಹೇಳಿದರು.

“ಮಾರ್ಚ್ 31 ರಂದು ರಾಮಲೀಲಾ ಮೈದಾನದಲ್ಲಿ ಕಂಡುಬಂದದ್ದು ಬಿಜೆಪಿಯನ್ನು ಬೆಚ್ಚಿಬೀಳಿಸಿದೆ. ಇಂಡಿಯಾ ವಿರೋಧ ಪಕ್ಷಗಳ ದೊಡ್ಡ ನಾಯಕರು ಆ ವೇದಿಕೆಯಲ್ಲಿ ಜಮಾಯಿಸಿದರು… ನಮ್ಮ ಪಕ್ಷದ ಎಲ್ಲಾ ಹಿರಿಯ ನಾಯಕರು ಜೈಲಿನಲ್ಲಿದ್ದಾರೆ; ಅತಿಶಿ, ದುರ್ಗೇಶ್ ಪಾಠಕ್, ಸಂದೀಪ್ ಪಾಠಕ್ ಮತ್ತು ನಾನು ಚಿಕ್ಕವನು ಎಂದು ನಾವು ಈ ನಾಯಕರನ್ನು ವೇದಿಕೆಗೆ ಬರಲು ವಿನಂತಿಸಿದ್ದೆವು. ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಎಲ್ಲಾ ನಾಯಕರು ಹೇಳಿದರು” ಎಂದು ಸಚಿವರು ಹೇಳಿದರು.

ಕೇಸರಿ ಪಾಳಯವು ತನ್ನ ಎಲ್ಲಾ ಹಿರಿಯ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಎಎಪಿಯನ್ನು ಹತ್ತಿಕ್ಕಲು ತನ್ನ ಅತ್ಯುತ್ತಮ ಪ್ರಯತ್ನ ಮಾಡಿದೆ. ಜನರು ತಮ್ಮ ವಿರುದ್ಧ ಮತ ಚಲಾಯಿಸಲು ಹೆದರುವುದಿಲ್ಲ ಎಂದು ಬಿಜೆಪಿಗೆ ತಿಳಿದಿರುವುದರಿಂದ ಅವರು ಮತದರರನ್ನು ಹೆದರಿಸಲು ಪ್ರಾರಂಭಿಸಿದರು, ಇದು ದೇಶದ ತೀವ್ರ ಕಳವಳದ ವಿಷಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“ಬಿಜೆಪಿಯವರು ನಮಗೆ ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದರು ಎಂದು ಹೇಳುತ್ತಾರೆ. ಅವರು ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಿದರು ಮತ್ತು ನಮ್ಮ ದೊಡ್ಡ ನಾಯಕರೆಲ್ಲರನ್ನು ಬಂಧಿಸಿದರು. ಆದರೆ, ಪಕ್ಷವು ಇನ್ನೂ ಧೃಡವಾಗಿ ನಿಂತಿದೆ… ಜನರು ಮತ ಹಾಕಲು ಹೆದರುವುದಿಲ್ಲ ಎಂದು ಬಿಜೆಪಿಗೆ ತಿಳಿದಿದೆ. ಇಂದು  ದೇಶದ ಜನರು ಭಯಭೀತರಾಗಿದ್ದಾರೆ ಮತ್ತು ಇದು ದೇಶಕ್ಕೆ ತೀವ್ರ ಕಳವಳಕಾರಿಯಾಗಿದೆ. ಬ್ರಿಟಿಷರ ಆಳ್ವಿಕೆಯಲ್ಲಿ ಜನರು ಹೆದರುತ್ತಿದ್ದರು… ಜೈಲಿನ ಬೆದರಿಕೆಯಿಂದ ಹೆದರಿಸಿ ಬ್ರಿಟಿಷರು ನಮ್ಮನ್ನು ಆಳಿದರು. ಇಂದು ಬಿಜೆಪಿ ನೇತರತ್ವದ ಕೇಂದ್ರ ಸರ್ಕಾರವು ಬಹುತೇಕ ಹಾಗೆ ಮಾರ್ಪಟ್ಟಿದೆ” ಎಂದು ಅವರು ಹೇಳಿದರು.

ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಇದೀಗ ತನಿಖಾ ಸಂಸ್ಥೆಯು ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ರಾಘವ್ ಚಡ್ಡಾ ಅವರನ್ನು ಬಂಧಿಸಲಿದೆ ಎಂದು ಅವರ ಸಹೋದ್ಯೋಗಿ ಅತಿಶಿ ದೊಡ್ಡ ಹೇಳಿಕೆ ನೀಡಿದ ನಂತರ ಅವರ ಹೇಳಿಕೆಗಳು ಹೊರಬಿದ್ದಿವೆ.

“ಶೀಘ್ರದಲ್ಲೇ ನಮ್ಮ ನಿವಾಸದ ಮೇಲೆ ಇಡಿ ದಾಳಿ ನಡೆಯಲಿದೆ ಮತ್ತು ನಂತರ ನಮ್ಮನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ನನಗೆ ತಿಳಿಸಲಾಗಿದೆ. ಬಿಜೆಪಿ ಈಗ ಆಮ್ ಆದ್ಮಿ ಪಕ್ಷದ ಮುಂದಿನ ಸಾಲಿನ ನಾಯಕರನ್ನು ಗುರಿಯಾಗಿಸಿಕೊಂಡಿದೆ” ಎಂದು ಅತಿಶಿ ಹೇಳಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಅವರನ್ನು ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೀಗ ಅವರು ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ; ಬಿಜೆಪಿ ಸೇರ್ಪಡೆಗೊಳ್ಳಿ ಅಥವಾ ಬಂಧನಕ್ಕೆ ಸಿದ್ಧರಾಗಿ: ದೆಹಲಿ ಸಚಿವೆ ಅತಿಶಿಗೆ ಬೆದರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...