Homeಮುಖಪುಟಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಜಸ್ಟಿಸ್ ನಾಗಮೋಹನ್ ದಾಸ್‌ರವರ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ ಎಸ್‌ಸಿ ಮೀಸಲಾತಿಯನ್ನು 15%  ದಿಂದ 17% ಗೆ ಮತ್ತು ಎಸ್‌ಟಿ ಮೀಸಲಾತಿಯನ್ನು 3% ರಿಂದ 7% ಗೆ ಹೆಚ್ಚಳ ಮಾಡುವುದಾಗಿ ವಿಪಕ್ಷ ಮುಖಂಡರ ಜೊತೆ ಸಿಎಂ ಬಸವರಾಮ ಬೊಮ್ಮಾಯಿ ಘೋಷಿಸಿದ್ದರು. ಆದರೆ ಈ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಮುದಾಯಗಳ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ನೇಮಿಸಿತ್ತು. ಆ ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ, ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ. ಆದರೆ ಈ ಕುರಿತು ಗಮನ ಹರಿಸಬೇಕಾದ ಸರ್ಕಾರ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ಸರಿಯಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಎಸ್ ಸಿ/ಎಸ್ ಟಿ ಸಮುದಾಯದ ಮೀಸಲಾತಿಯ ಹೆಚ್ಚಳವಾಗಬೇಕಾದರೆ ಮೊದಲು ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು. ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ. ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ. 50 ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ ಎಂಬುದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...