Homeಮುಖಪುಟಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಜಸ್ಟಿಸ್ ನಾಗಮೋಹನ್ ದಾಸ್‌ರವರ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ ಎಸ್‌ಸಿ ಮೀಸಲಾತಿಯನ್ನು 15%  ದಿಂದ 17% ಗೆ ಮತ್ತು ಎಸ್‌ಟಿ ಮೀಸಲಾತಿಯನ್ನು 3% ರಿಂದ 7% ಗೆ ಹೆಚ್ಚಳ ಮಾಡುವುದಾಗಿ ವಿಪಕ್ಷ ಮುಖಂಡರ ಜೊತೆ ಸಿಎಂ ಬಸವರಾಮ ಬೊಮ್ಮಾಯಿ ಘೋಷಿಸಿದ್ದರು. ಆದರೆ ಈ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಮುದಾಯಗಳ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ನೇಮಿಸಿತ್ತು. ಆ ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ, ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ. ಆದರೆ ಈ ಕುರಿತು ಗಮನ ಹರಿಸಬೇಕಾದ ಸರ್ಕಾರ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ಸರಿಯಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಎಸ್ ಸಿ/ಎಸ್ ಟಿ ಸಮುದಾಯದ ಮೀಸಲಾತಿಯ ಹೆಚ್ಚಳವಾಗಬೇಕಾದರೆ ಮೊದಲು ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು. ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ. ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ. 50 ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ ಎಂಬುದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...