Homeಮುಖಪುಟಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಜಸ್ಟಿಸ್ ನಾಗಮೋಹನ್ ದಾಸ್‌ರವರ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ ಎಸ್‌ಸಿ ಮೀಸಲಾತಿಯನ್ನು 15%  ದಿಂದ 17% ಗೆ ಮತ್ತು ಎಸ್‌ಟಿ ಮೀಸಲಾತಿಯನ್ನು 3% ರಿಂದ 7% ಗೆ ಹೆಚ್ಚಳ ಮಾಡುವುದಾಗಿ ವಿಪಕ್ಷ ಮುಖಂಡರ ಜೊತೆ ಸಿಎಂ ಬಸವರಾಮ ಬೊಮ್ಮಾಯಿ ಘೋಷಿಸಿದ್ದರು. ಆದರೆ ಈ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಮುದಾಯಗಳ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯನ್ನು ನೇಮಿಸಿತ್ತು. ಆ ಸಮಿತಿಯ ಶಿಫಾರಸುಗಳಿಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ, ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ. ಆದರೆ ಈ ಕುರಿತು ಗಮನ ಹರಿಸಬೇಕಾದ ಸರ್ಕಾರ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ಸರಿಯಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಎಸ್ ಸಿ/ಎಸ್ ಟಿ ಸಮುದಾಯದ ಮೀಸಲಾತಿಯ ಹೆಚ್ಚಳವಾಗಬೇಕಾದರೆ ಮೊದಲು ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು. ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಮೀಸಲಾತಿ ಹೆಚ್ಚಳದ ಈ ಪ್ರಕ್ರಿಯೆ ಸುಲಭದ ಕೆಲಸ ಅಲ್ಲ. ರಾಜ್ಯದಲ್ಲಿ ಈಗ ಹಿಂದುಳಿದ ಜಾತಿಗಳಿಗೆ ಶೇ.32, ಪರಿಶಿಷ್ಟ ಜಾತಿಗಳಿಗೆ ಶೇ.15 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.3ರಷ್ಟು ಅಂದರೆ ಒಟ್ಟು ಶೇ.50ರಷ್ಟು ಮೀಸಲಾತಿ ಇದೆ. ಎಸ್ ಸಿ/ಎಸ್ ಟಿ ಮೀಸಲು ಹೆಚ್ಚಳದಿಂದ ಈ ಪ್ರಮಾಣ ಶೇ.56ರಷ್ಟು ಆಗಲಿದೆ.
ಸುಪ್ರೀಂ ಕೋರ್ಟ್ (ಇಂದಿರಾ ಸಹಾನಿ ಪ್ರಕರಣದ) ತೀರ್ಪಿನ ಪ್ರಕಾರ ಒಟ್ಟು ಮೀಸಲಾತಿ ಶೇ. 50 ಮೀರುವಂತಿಲ್ಲ. ಈ ಮಿತಿಯನ್ನು ಮೀರದೆ ಎಸ್ ಸಿ/ಎಸ್ ಟಿ ಮೀಸಲಾತಿಯನ್ನು ಒಟ್ಟು ಶೇ.ಆರರಷ್ಟು ಹೆಚ್ಚಿಸಲು ಹೇಗೆ ಸಾಧ್ಯ ಎಂಬುದರ ಬಗ್ಗೆ ತನ್ನ ನಿಲುವನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಸರ್ಕಾರಗಳು ಹಿಂಜರಿಯುತ್ತಿರುವುದೇಕೆ? ಕರ್ನಾಟಕದ ವರದಿ ಬಿಡುಗಡೆಯಾಗಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...