Homeಮುಖಪುಟಕರ್ನಾಟಕವನ್ನು ಬಿಜೆಪಿ ಗೂಂಡಾ ರಾಜ್ಯವನ್ನಾಗಿಸುತ್ತಿದೆ: ರಾಕೇಶ್ ಟಿಕಾಯತ್ ಮೇಲಿನ ಹಲ್ಲೆಗೆ ಸಿದ್ದರಾಮಯ್ಯ ಕಿಡಿ

ಕರ್ನಾಟಕವನ್ನು ಬಿಜೆಪಿ ಗೂಂಡಾ ರಾಜ್ಯವನ್ನಾಗಿಸುತ್ತಿದೆ: ರಾಕೇಶ್ ಟಿಕಾಯತ್ ಮೇಲಿನ ಹಲ್ಲೆಗೆ ಸಿದ್ದರಾಮಯ್ಯ ಕಿಡಿ

- Advertisement -
- Advertisement -

ಸಹನೆ-ಸಜ್ಜನಿಕೆಗೆ ಹೆಸರಾದ ಕರ್ನಾಟಕವನ್ನು ಬಿಜೆಪಿ ಪಕ್ಷವು ಗೂಂಡಾ ರಾಜ್ಯವನ್ನಾಗಿಸುತ್ತಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು, ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆಯನ್ನು ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,” ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆಯು ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತ ನಾಯಕ‌ ರಾಕೇಶ್ ಟಿಕಾಯತ್ ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ. ಮುಖ್ಯಮಂತ್ರಿಗಳೆ ನೆನಪಿರಲಿ, ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ. ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟದಿದ್ದರೆ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂರುವ ನೈತಿಕತೆ ನಿಮಗಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಸಂಘದ ಸಮಾಲೋಚನಾ ಸಭೆಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ, ರೈತ ಹೋರಾಟಗಾರರಾದ ರಾಕೇಶ್ ಟಿಕಾಯತ್, ಅನಸೂಯಮ್ಮ, ಚುಕ್ಕಿ ನಂಜುಂಡಸ್ವಾಮಿಯವರ ಮೇಲೆ ಹಲ್ಲೆ ನಡೆಸಿ ಮಸಿ ಬಳಿದಿರುವ ಘಟನೆ ಜರುಗಿದೆ.

ಕವಿತಾ ಕುರುಗಂಟಿಯವರು ಮಾತನಾಡುತ್ತಿದ್ದಾಗ ಕೆಲವರು ತೆಲುಗಿನಲ್ಲಿ ಮಾತನಾಡುವುದಕ್ಕೆ ಆಕ್ಷೇಪಣೆ ಮಾಡಿ ಜಗಳ ಶುರು ಮಾಡಿದರು. ನಂತರ ಮೋದಿಗೆ ಜೈಕಾರ ಹಾಕುತ್ತ ಏಕಾಏಕಿ ನುಗ್ಗಿದ ಹಿಂದುತ್ವ ಗೂಂಡಾಗಳು ಸಿಕ್ಕ ಸಿಕ್ಕವರ ಮೇಲೆ ಮಸಿ ಎರಚಿದರು. ವೇದಿಕೆಯ ಮೇಲಿದ್ದ ಮುಖಂಡರಿಗೆ ಹಲ್ಲೆ ನಡೆಸಿದರು. ಕುರ್ಚಿ ಎಸೆದು ದಾಂಧಲೆ ನಡೆಸಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ ಮೇಲೆ ಹಲ್ಲೆ: ಮೂವರು ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...