Homeಮುಖಪುಟಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

ಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

- Advertisement -
- Advertisement -

ಬಿಜೆಪಿ ಸರ್ಕಾರದ ನೀತಿಗಳು ಭಾರತದಲ್ಲಿ ಹಿಂದೆಂದೂ ಕಾಣದಷ್ಟು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಮತ್ತು ಬಹುತ್ವ ಕರ್ನಾಟಕದ ಜಂಟಿ ವರದಿ ಬಹಿರಂಗಪಡಿಸಿದೆ.

‘ಗ್ಯಾರಂಟಿ ಚೆಕ್: ಕಳೆದ ದಶಕದಲ್ಲಿ ಭಾರತದ ಪರಿಸರದ ಸ್ಥಿತಿ – ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟು’ ಎಂಬ ಶೀರ್ಷಿಕೆಯ ವರದಿಯಲ್ಲಿ, ಕೇಂದ್ರ ಸರ್ಕಾರವು, ಪರಿಸರ ಮೌಲ್ಯಮಾಪನಗಳನ್ನು ತಪ್ಪಿಸಿದೆ ಮತ್ತು ಅಭಿವೃದ್ಧಿಯ ಅಸಮರ್ಥತೆಯನ್ನು ಎತ್ತಿ ತೋರಿಸುವ ಪರಿಸರ ಕಾರ್ಯಕರ್ತರ ಬಾಯಿ ಮುಚ್ಚಿಸಿದೆ ಎಂದು ಹೇಳಿದೆ. ವರದಿಯು ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತದ ಸ್ಥಾನವು ಕುಸಿದಿದೆ ಎಂದು ಹೇಳಿದೆ.

ಪರಿಸರ ಸಚಿವಾಲಯವು, ಕರಾವಳಿ ನಿಯಂತ್ರಣ ವಲಯ ಕ್ಲಿಯರೆನ್ಸ್‌, ವನ್ಯಜೀವಿ ಕ್ಲಿಯರೆನ್ಸ್‌, ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್‌ ಸೇರಿದಂತೆ 12,496 ಕ್ಲಿಯರೆನ್ಸ್‌ ನೀಡಿದೆ. ಖಾಸಗಿ ಕೈಗಾರಿಕೋದ್ಯಮಿಗಳಿಗೆ ಲಾಭ ಮಾಡಿಕೊಡಲು ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (ಇಐಎ) ಅಧಿಸೂಚನೆ-2006, ಗಣಿ ಮತ್ತು ಖನಿಜಗಳ ಕಾಯಿದೆ- 2023 ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆ-1980ರಡಿಯಲ್ಲಿನ ಹಲವಾರು ಕಾನೂನುಗಳು ಮತ್ತು ನೀತಿಗಳನ್ನು ಬದಲಾಯಿಸಲಾಗಿದೆ ಎಂದು ವರದಿ ಹೇಳಿದೆ.

ಎನ್ವಿರಾನ್‌ಮೆಂಟ್ ಇಂಪ್ಯಾಕ್ಟ್ ಅಸೆಸ್‌ಮೆಂಟ್ (ಇಐಎ) ಅಧಿಸೂಚನೆ-2006ಕ್ಕೆ ತಿದ್ದುಪಡಿ ಮಾಡಲಾಗಿದೆ. ಖಾಸಗಿ ಕೈಗಾರಿಕೆಗಳಿಗೆ ಅನುಕೂಲವಾಗುವ ಅನುಮತಿಗಳನ್ನು ನೀಡುವ ಮೊದಲು ಸಾರ್ವಜನಿಕ ಸಮಾಲೋಚನೆಯ ಬಗ್ಗೆ ವಿನಾಯಿತಿ ಸೇರಿದಂತೆ ಹಲವಾರು ತಿದ್ದುಪಡಿಗಳಿನ್ನು ಮಾಡಲಾಗಿದೆ ಮತ್ತು ಸಮರ್ಥನೀಯವಲ್ಲದ ಅಭಿವೃದ್ಧಿಯನ್ನು ಉತ್ತೇಜಿಸಿದೆ ಎಂದು ವರದಿ ಹೇಳಿದೆ.

ಗಣಿ ಮತ್ತು ಖನಿಜಗಳ ಕಾಯಿದೆ-2023ರ ಮೂಲಕ ಗಣಿಗಾರಿಕೆಗೆ ಖಾಸಗಿ ವಲಯಕ್ಕೆ ಪರವಾನಗಿಗಳನ್ನು ಪಡೆಯುವ ಹಾದಿ ಸರಳಗೊಳಿಸಲಾಯ್ತು. ಪೂರ್ವ ರಾಜ್ಯಗಳಾದ ಒಡಿಶಾ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ಗಳು ಗಣಿಗಾರಿಕೆಯ ಕಾರಣದಿಂದಾಗಿ ಭಾರಿ ಆಕ್ರಮಣಕ್ಕೆ ಸಾಕ್ಷಿಯಾಗಿವೆ, ಅಲ್ಲಿ ವಾಸಿಸುವ ಆದಿವಾಸಿಗಳ ಮೇಲೆ ಪರಿಣಾಮ ಬೀರಿದೆ ಮತ್ತು ನೂರಾರು ವರ್ಷಗಳ ಹಳೆಯ ಕಾಡುಗಳನ್ನು ನಾಶಪಡಿಸಲಾಗಿದೆ. 2023ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ-1980ಕ್ಕೆ ಮಾಡಿದ ತಿದ್ದುಪಡಿಯನ್ನು ವರದಿಯು ಉಲ್ಲೇಖಿಸಿದೆ, ಇದು ಅರಣ್ಯಗಳ ವ್ಯಾಖ್ಯಾನವನ್ನು ಬದಲಾಯಿಸಲು ಪ್ರಯತ್ನಿಸಿತು ಮತ್ತು ಈ ಹಿಂದೆ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಲಾದ ಹಲವಾರು ಅರಣ್ಯ ಪ್ರದೇಶಗಳಿಗೆ ಹಾನಿಕಾರಕವಾಗಿದೆ ಎಂದು ವರದಿ ಹೇಳಿದೆ.

2014 ಮತ್ತು 2020ರ ನಡುವೆ ಕೇವಲ ಒಂದು ಶೇಕಡಾಕ್ಕಿಂತ ಕಡಿಮೆ ಅರಣ್ಯ ಕ್ಲಿಯರೆನ್ಸ್‌ನ್ನು ಸರ್ಕಾರ ತಿರಸ್ಕರಿಸಿದೆ. 2014 ಮತ್ತು 2023ರ ನಡುವೆ, ಕೈಗಾರಿಕೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ 1.5 ಲಕ್ಷ ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗಿದೆ ಎಂದು ವರದಿ ಹೇಳಿದೆ.

ವರದಿಯು 2011ರ ಕರಾವಳಿ ನಿಯಂತ್ರಣ ವಲಯ (CRZ) ಅಧಿಸೂಚನೆಗೆ ಮಾಡಿದ ತಿದ್ದುಪಡಿಗಳನ್ನು ಎತ್ತಿ ತೋರಿಸಿದೆ. ವಿಮಾನ ನಿಲ್ದಾಣದ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ 130 ಚದರ ಕಿಲೋಮೀಟರ್ ಅರಣ್ಯ ಪ್ರದೇಶವನ್ನು ನಿಯೋಜಿಸುವ ಗುರಿಯನ್ನು ಹೊಂದಿರುವ ಗ್ರೇಟ್ ನಿಕೋಬಾರ್ ಐಲ್ಯಾಂಡ್ (ಜಿಎನ್‌ಐ) ಯೋಜನೆಯಂತಹ ಯೋಜನೆಗಳನ್ನು ಆಳುವ ಸರ್ಕಾರವು ವೇಗವಾಗಿ ಮುನ್ನೆಲೆಗೆ ತಂದಿದೆ ಎಂದು ವರದಿಯು ಉಲ್ಲೇಖಿಸಿದೆ.

ಹ್ಯುಮನ್‌ ರೈಟ್ಸ್ ಡಿಫೆಂಡರ್ಸ್ ಅಲರ್ಟ್-ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ಹೆನ್ರಿ ಟಿಫಾಗ್ನೆ ಮಾತನಾಡುತ್ತಾ, ಪರಿಸರ ಕಾರ್ಯಕರ್ತರು ಅಕ್ರಮ ಬಂಧನಗಳನ್ನು ಎದುರಿಸುತ್ತಿದ್ದಾರೆ ಮತ್ತು ಜಾರ್ಖಂಡ್, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಅವರ ಫೋನ್‌ಗಳನ್ನು ಕಿತ್ತುಕೊಂಡು ದೌರ್ಜನ್ಯ ನಡೆಸಲಾಗಿದೆ. ತಮಿಳುನಾಡಿನ ತೂತುಕುಡಿಯಲ್ಲಿ ವೇದಾಂತ ಸ್ಥಾವರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಆರು ಮಂದಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೆ 2021ರಲ್ಲಿ ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ 22 ವರ್ಷದ ಹವಾಮಾನ ಕಾರ್ಯಕರ್ತೆ ದಿಶಾ ರವಿಯ ಬಂಧನವನ್ನು ಕೂಡ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...