Homeಮುಖಪುಟಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

ಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

- Advertisement -
- Advertisement -

ಬಿಜೆಪಿ ಸರ್ಕಾರದ ನೀತಿಗಳು ಭಾರತದಲ್ಲಿ ಹಿಂದೆಂದೂ ಕಾಣದಷ್ಟು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಮತ್ತು ಬಹುತ್ವ ಕರ್ನಾಟಕದ ಜಂಟಿ ವರದಿ ಬಹಿರಂಗಪಡಿಸಿದೆ.

‘ಗ್ಯಾರಂಟಿ ಚೆಕ್: ಕಳೆದ ದಶಕದಲ್ಲಿ ಭಾರತದ ಪರಿಸರದ ಸ್ಥಿತಿ – ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟು’ ಎಂಬ ಶೀರ್ಷಿಕೆಯ ವರದಿಯಲ್ಲಿ, ಕೇಂದ್ರ ಸರ್ಕಾರವು, ಪರಿಸರ ಮೌಲ್ಯಮಾಪನಗಳನ್ನು ತಪ್ಪಿಸಿದೆ ಮತ್ತು ಅಭಿವೃದ್ಧಿಯ ಅಸಮರ್ಥತೆಯನ್ನು ಎತ್ತಿ ತೋರಿಸುವ ಪರಿಸರ ಕಾರ್ಯಕರ್ತರ ಬಾಯಿ ಮುಚ್ಚಿಸಿದೆ ಎಂದು ಹೇಳಿದೆ. ವರದಿಯು ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತದ ಸ್ಥಾನವು ಕುಸಿದಿದೆ ಎಂದು ಹೇಳಿದೆ.

ಪರಿಸರ ಸಚಿವಾಲಯವು, ಕರಾವಳಿ ನಿಯಂತ್ರಣ ವಲಯ ಕ್ಲಿಯರೆನ್ಸ್‌, ವನ್ಯಜೀವಿ ಕ್ಲಿಯರೆನ್ಸ್‌, ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್‌ ಸೇರಿದಂತೆ 12,496 ಕ್ಲಿಯರೆನ್ಸ್‌ ನೀಡಿದೆ. ಖಾಸಗಿ ಕೈಗಾರಿಕೋದ್ಯಮಿಗಳಿಗೆ ಲಾಭ ಮಾಡಿಕೊಡಲು ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (ಇಐಎ) ಅಧಿಸೂಚನೆ-2006, ಗಣಿ ಮತ್ತು ಖನಿಜಗಳ ಕಾಯಿದೆ- 2023 ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆ-1980ರಡಿಯಲ್ಲಿನ ಹಲವಾರು ಕಾನೂನುಗಳು ಮತ್ತು ನೀತಿಗಳನ್ನು ಬದಲಾಯಿಸಲಾಗಿದೆ ಎಂದು ವರದಿ ಹೇಳಿದೆ.

ಎನ್ವಿರಾನ್‌ಮೆಂಟ್ ಇಂಪ್ಯಾಕ್ಟ್ ಅಸೆಸ್‌ಮೆಂಟ್ (ಇಐಎ) ಅಧಿಸೂಚನೆ-2006ಕ್ಕೆ ತಿದ್ದುಪಡಿ ಮಾಡಲಾಗಿದೆ. ಖಾಸಗಿ ಕೈಗಾರಿಕೆಗಳಿಗೆ ಅನುಕೂಲವಾಗುವ ಅನುಮತಿಗಳನ್ನು ನೀಡುವ ಮೊದಲು ಸಾರ್ವಜನಿಕ ಸಮಾಲೋಚನೆಯ ಬಗ್ಗೆ ವಿನಾಯಿತಿ ಸೇರಿದಂತೆ ಹಲವಾರು ತಿದ್ದುಪಡಿಗಳಿನ್ನು ಮಾಡಲಾಗಿದೆ ಮತ್ತು ಸಮರ್ಥನೀಯವಲ್ಲದ ಅಭಿವೃದ್ಧಿಯನ್ನು ಉತ್ತೇಜಿಸಿದೆ ಎಂದು ವರದಿ ಹೇಳಿದೆ.

ಗಣಿ ಮತ್ತು ಖನಿಜಗಳ ಕಾಯಿದೆ-2023ರ ಮೂಲಕ ಗಣಿಗಾರಿಕೆಗೆ ಖಾಸಗಿ ವಲಯಕ್ಕೆ ಪರವಾನಗಿಗಳನ್ನು ಪಡೆಯುವ ಹಾದಿ ಸರಳಗೊಳಿಸಲಾಯ್ತು. ಪೂರ್ವ ರಾಜ್ಯಗಳಾದ ಒಡಿಶಾ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ಗಳು ಗಣಿಗಾರಿಕೆಯ ಕಾರಣದಿಂದಾಗಿ ಭಾರಿ ಆಕ್ರಮಣಕ್ಕೆ ಸಾಕ್ಷಿಯಾಗಿವೆ, ಅಲ್ಲಿ ವಾಸಿಸುವ ಆದಿವಾಸಿಗಳ ಮೇಲೆ ಪರಿಣಾಮ ಬೀರಿದೆ ಮತ್ತು ನೂರಾರು ವರ್ಷಗಳ ಹಳೆಯ ಕಾಡುಗಳನ್ನು ನಾಶಪಡಿಸಲಾಗಿದೆ. 2023ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ-1980ಕ್ಕೆ ಮಾಡಿದ ತಿದ್ದುಪಡಿಯನ್ನು ವರದಿಯು ಉಲ್ಲೇಖಿಸಿದೆ, ಇದು ಅರಣ್ಯಗಳ ವ್ಯಾಖ್ಯಾನವನ್ನು ಬದಲಾಯಿಸಲು ಪ್ರಯತ್ನಿಸಿತು ಮತ್ತು ಈ ಹಿಂದೆ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಲಾದ ಹಲವಾರು ಅರಣ್ಯ ಪ್ರದೇಶಗಳಿಗೆ ಹಾನಿಕಾರಕವಾಗಿದೆ ಎಂದು ವರದಿ ಹೇಳಿದೆ.

2014 ಮತ್ತು 2020ರ ನಡುವೆ ಕೇವಲ ಒಂದು ಶೇಕಡಾಕ್ಕಿಂತ ಕಡಿಮೆ ಅರಣ್ಯ ಕ್ಲಿಯರೆನ್ಸ್‌ನ್ನು ಸರ್ಕಾರ ತಿರಸ್ಕರಿಸಿದೆ. 2014 ಮತ್ತು 2023ರ ನಡುವೆ, ಕೈಗಾರಿಕೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ 1.5 ಲಕ್ಷ ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗಿದೆ ಎಂದು ವರದಿ ಹೇಳಿದೆ.

ವರದಿಯು 2011ರ ಕರಾವಳಿ ನಿಯಂತ್ರಣ ವಲಯ (CRZ) ಅಧಿಸೂಚನೆಗೆ ಮಾಡಿದ ತಿದ್ದುಪಡಿಗಳನ್ನು ಎತ್ತಿ ತೋರಿಸಿದೆ. ವಿಮಾನ ನಿಲ್ದಾಣದ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ 130 ಚದರ ಕಿಲೋಮೀಟರ್ ಅರಣ್ಯ ಪ್ರದೇಶವನ್ನು ನಿಯೋಜಿಸುವ ಗುರಿಯನ್ನು ಹೊಂದಿರುವ ಗ್ರೇಟ್ ನಿಕೋಬಾರ್ ಐಲ್ಯಾಂಡ್ (ಜಿಎನ್‌ಐ) ಯೋಜನೆಯಂತಹ ಯೋಜನೆಗಳನ್ನು ಆಳುವ ಸರ್ಕಾರವು ವೇಗವಾಗಿ ಮುನ್ನೆಲೆಗೆ ತಂದಿದೆ ಎಂದು ವರದಿಯು ಉಲ್ಲೇಖಿಸಿದೆ.

ಹ್ಯುಮನ್‌ ರೈಟ್ಸ್ ಡಿಫೆಂಡರ್ಸ್ ಅಲರ್ಟ್-ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ಹೆನ್ರಿ ಟಿಫಾಗ್ನೆ ಮಾತನಾಡುತ್ತಾ, ಪರಿಸರ ಕಾರ್ಯಕರ್ತರು ಅಕ್ರಮ ಬಂಧನಗಳನ್ನು ಎದುರಿಸುತ್ತಿದ್ದಾರೆ ಮತ್ತು ಜಾರ್ಖಂಡ್, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಅವರ ಫೋನ್‌ಗಳನ್ನು ಕಿತ್ತುಕೊಂಡು ದೌರ್ಜನ್ಯ ನಡೆಸಲಾಗಿದೆ. ತಮಿಳುನಾಡಿನ ತೂತುಕುಡಿಯಲ್ಲಿ ವೇದಾಂತ ಸ್ಥಾವರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಆರು ಮಂದಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೆ 2021ರಲ್ಲಿ ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ 22 ವರ್ಷದ ಹವಾಮಾನ ಕಾರ್ಯಕರ್ತೆ ದಿಶಾ ರವಿಯ ಬಂಧನವನ್ನು ಕೂಡ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...