Homeಮುಖಪುಟಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

ಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

- Advertisement -
- Advertisement -

ಬಿಜೆಪಿ ಸರ್ಕಾರದ ನೀತಿಗಳು ಭಾರತದಲ್ಲಿ ಹಿಂದೆಂದೂ ಕಾಣದಷ್ಟು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಮತ್ತು ಬಹುತ್ವ ಕರ್ನಾಟಕದ ಜಂಟಿ ವರದಿ ಬಹಿರಂಗಪಡಿಸಿದೆ.

‘ಗ್ಯಾರಂಟಿ ಚೆಕ್: ಕಳೆದ ದಶಕದಲ್ಲಿ ಭಾರತದ ಪರಿಸರದ ಸ್ಥಿತಿ – ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟು’ ಎಂಬ ಶೀರ್ಷಿಕೆಯ ವರದಿಯಲ್ಲಿ, ಕೇಂದ್ರ ಸರ್ಕಾರವು, ಪರಿಸರ ಮೌಲ್ಯಮಾಪನಗಳನ್ನು ತಪ್ಪಿಸಿದೆ ಮತ್ತು ಅಭಿವೃದ್ಧಿಯ ಅಸಮರ್ಥತೆಯನ್ನು ಎತ್ತಿ ತೋರಿಸುವ ಪರಿಸರ ಕಾರ್ಯಕರ್ತರ ಬಾಯಿ ಮುಚ್ಚಿಸಿದೆ ಎಂದು ಹೇಳಿದೆ. ವರದಿಯು ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತದ ಸ್ಥಾನವು ಕುಸಿದಿದೆ ಎಂದು ಹೇಳಿದೆ.

ಪರಿಸರ ಸಚಿವಾಲಯವು, ಕರಾವಳಿ ನಿಯಂತ್ರಣ ವಲಯ ಕ್ಲಿಯರೆನ್ಸ್‌, ವನ್ಯಜೀವಿ ಕ್ಲಿಯರೆನ್ಸ್‌, ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್‌ ಸೇರಿದಂತೆ 12,496 ಕ್ಲಿಯರೆನ್ಸ್‌ ನೀಡಿದೆ. ಖಾಸಗಿ ಕೈಗಾರಿಕೋದ್ಯಮಿಗಳಿಗೆ ಲಾಭ ಮಾಡಿಕೊಡಲು ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (ಇಐಎ) ಅಧಿಸೂಚನೆ-2006, ಗಣಿ ಮತ್ತು ಖನಿಜಗಳ ಕಾಯಿದೆ- 2023 ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆ-1980ರಡಿಯಲ್ಲಿನ ಹಲವಾರು ಕಾನೂನುಗಳು ಮತ್ತು ನೀತಿಗಳನ್ನು ಬದಲಾಯಿಸಲಾಗಿದೆ ಎಂದು ವರದಿ ಹೇಳಿದೆ.

ಎನ್ವಿರಾನ್‌ಮೆಂಟ್ ಇಂಪ್ಯಾಕ್ಟ್ ಅಸೆಸ್‌ಮೆಂಟ್ (ಇಐಎ) ಅಧಿಸೂಚನೆ-2006ಕ್ಕೆ ತಿದ್ದುಪಡಿ ಮಾಡಲಾಗಿದೆ. ಖಾಸಗಿ ಕೈಗಾರಿಕೆಗಳಿಗೆ ಅನುಕೂಲವಾಗುವ ಅನುಮತಿಗಳನ್ನು ನೀಡುವ ಮೊದಲು ಸಾರ್ವಜನಿಕ ಸಮಾಲೋಚನೆಯ ಬಗ್ಗೆ ವಿನಾಯಿತಿ ಸೇರಿದಂತೆ ಹಲವಾರು ತಿದ್ದುಪಡಿಗಳಿನ್ನು ಮಾಡಲಾಗಿದೆ ಮತ್ತು ಸಮರ್ಥನೀಯವಲ್ಲದ ಅಭಿವೃದ್ಧಿಯನ್ನು ಉತ್ತೇಜಿಸಿದೆ ಎಂದು ವರದಿ ಹೇಳಿದೆ.

ಗಣಿ ಮತ್ತು ಖನಿಜಗಳ ಕಾಯಿದೆ-2023ರ ಮೂಲಕ ಗಣಿಗಾರಿಕೆಗೆ ಖಾಸಗಿ ವಲಯಕ್ಕೆ ಪರವಾನಗಿಗಳನ್ನು ಪಡೆಯುವ ಹಾದಿ ಸರಳಗೊಳಿಸಲಾಯ್ತು. ಪೂರ್ವ ರಾಜ್ಯಗಳಾದ ಒಡಿಶಾ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ಗಳು ಗಣಿಗಾರಿಕೆಯ ಕಾರಣದಿಂದಾಗಿ ಭಾರಿ ಆಕ್ರಮಣಕ್ಕೆ ಸಾಕ್ಷಿಯಾಗಿವೆ, ಅಲ್ಲಿ ವಾಸಿಸುವ ಆದಿವಾಸಿಗಳ ಮೇಲೆ ಪರಿಣಾಮ ಬೀರಿದೆ ಮತ್ತು ನೂರಾರು ವರ್ಷಗಳ ಹಳೆಯ ಕಾಡುಗಳನ್ನು ನಾಶಪಡಿಸಲಾಗಿದೆ. 2023ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ-1980ಕ್ಕೆ ಮಾಡಿದ ತಿದ್ದುಪಡಿಯನ್ನು ವರದಿಯು ಉಲ್ಲೇಖಿಸಿದೆ, ಇದು ಅರಣ್ಯಗಳ ವ್ಯಾಖ್ಯಾನವನ್ನು ಬದಲಾಯಿಸಲು ಪ್ರಯತ್ನಿಸಿತು ಮತ್ತು ಈ ಹಿಂದೆ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಲಾದ ಹಲವಾರು ಅರಣ್ಯ ಪ್ರದೇಶಗಳಿಗೆ ಹಾನಿಕಾರಕವಾಗಿದೆ ಎಂದು ವರದಿ ಹೇಳಿದೆ.

2014 ಮತ್ತು 2020ರ ನಡುವೆ ಕೇವಲ ಒಂದು ಶೇಕಡಾಕ್ಕಿಂತ ಕಡಿಮೆ ಅರಣ್ಯ ಕ್ಲಿಯರೆನ್ಸ್‌ನ್ನು ಸರ್ಕಾರ ತಿರಸ್ಕರಿಸಿದೆ. 2014 ಮತ್ತು 2023ರ ನಡುವೆ, ಕೈಗಾರಿಕೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ 1.5 ಲಕ್ಷ ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗಿದೆ ಎಂದು ವರದಿ ಹೇಳಿದೆ.

ವರದಿಯು 2011ರ ಕರಾವಳಿ ನಿಯಂತ್ರಣ ವಲಯ (CRZ) ಅಧಿಸೂಚನೆಗೆ ಮಾಡಿದ ತಿದ್ದುಪಡಿಗಳನ್ನು ಎತ್ತಿ ತೋರಿಸಿದೆ. ವಿಮಾನ ನಿಲ್ದಾಣದ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ 130 ಚದರ ಕಿಲೋಮೀಟರ್ ಅರಣ್ಯ ಪ್ರದೇಶವನ್ನು ನಿಯೋಜಿಸುವ ಗುರಿಯನ್ನು ಹೊಂದಿರುವ ಗ್ರೇಟ್ ನಿಕೋಬಾರ್ ಐಲ್ಯಾಂಡ್ (ಜಿಎನ್‌ಐ) ಯೋಜನೆಯಂತಹ ಯೋಜನೆಗಳನ್ನು ಆಳುವ ಸರ್ಕಾರವು ವೇಗವಾಗಿ ಮುನ್ನೆಲೆಗೆ ತಂದಿದೆ ಎಂದು ವರದಿಯು ಉಲ್ಲೇಖಿಸಿದೆ.

ಹ್ಯುಮನ್‌ ರೈಟ್ಸ್ ಡಿಫೆಂಡರ್ಸ್ ಅಲರ್ಟ್-ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ಹೆನ್ರಿ ಟಿಫಾಗ್ನೆ ಮಾತನಾಡುತ್ತಾ, ಪರಿಸರ ಕಾರ್ಯಕರ್ತರು ಅಕ್ರಮ ಬಂಧನಗಳನ್ನು ಎದುರಿಸುತ್ತಿದ್ದಾರೆ ಮತ್ತು ಜಾರ್ಖಂಡ್, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಅವರ ಫೋನ್‌ಗಳನ್ನು ಕಿತ್ತುಕೊಂಡು ದೌರ್ಜನ್ಯ ನಡೆಸಲಾಗಿದೆ. ತಮಿಳುನಾಡಿನ ತೂತುಕುಡಿಯಲ್ಲಿ ವೇದಾಂತ ಸ್ಥಾವರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಆರು ಮಂದಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೆ 2021ರಲ್ಲಿ ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ 22 ವರ್ಷದ ಹವಾಮಾನ ಕಾರ್ಯಕರ್ತೆ ದಿಶಾ ರವಿಯ ಬಂಧನವನ್ನು ಕೂಡ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...