Homeಮುಖಪುಟಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

ಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

- Advertisement -
- Advertisement -

ಬಿಜೆಪಿ ಸರ್ಕಾರದ ನೀತಿಗಳು ಭಾರತದಲ್ಲಿ ಹಿಂದೆಂದೂ ಕಾಣದಷ್ಟು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಮತ್ತು ಬಹುತ್ವ ಕರ್ನಾಟಕದ ಜಂಟಿ ವರದಿ ಬಹಿರಂಗಪಡಿಸಿದೆ.

‘ಗ್ಯಾರಂಟಿ ಚೆಕ್: ಕಳೆದ ದಶಕದಲ್ಲಿ ಭಾರತದ ಪರಿಸರದ ಸ್ಥಿತಿ – ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟು’ ಎಂಬ ಶೀರ್ಷಿಕೆಯ ವರದಿಯಲ್ಲಿ, ಕೇಂದ್ರ ಸರ್ಕಾರವು, ಪರಿಸರ ಮೌಲ್ಯಮಾಪನಗಳನ್ನು ತಪ್ಪಿಸಿದೆ ಮತ್ತು ಅಭಿವೃದ್ಧಿಯ ಅಸಮರ್ಥತೆಯನ್ನು ಎತ್ತಿ ತೋರಿಸುವ ಪರಿಸರ ಕಾರ್ಯಕರ್ತರ ಬಾಯಿ ಮುಚ್ಚಿಸಿದೆ ಎಂದು ಹೇಳಿದೆ. ವರದಿಯು ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತದ ಸ್ಥಾನವು ಕುಸಿದಿದೆ ಎಂದು ಹೇಳಿದೆ.

ಪರಿಸರ ಸಚಿವಾಲಯವು, ಕರಾವಳಿ ನಿಯಂತ್ರಣ ವಲಯ ಕ್ಲಿಯರೆನ್ಸ್‌, ವನ್ಯಜೀವಿ ಕ್ಲಿಯರೆನ್ಸ್‌, ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್‌ ಸೇರಿದಂತೆ 12,496 ಕ್ಲಿಯರೆನ್ಸ್‌ ನೀಡಿದೆ. ಖಾಸಗಿ ಕೈಗಾರಿಕೋದ್ಯಮಿಗಳಿಗೆ ಲಾಭ ಮಾಡಿಕೊಡಲು ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (ಇಐಎ) ಅಧಿಸೂಚನೆ-2006, ಗಣಿ ಮತ್ತು ಖನಿಜಗಳ ಕಾಯಿದೆ- 2023 ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆ-1980ರಡಿಯಲ್ಲಿನ ಹಲವಾರು ಕಾನೂನುಗಳು ಮತ್ತು ನೀತಿಗಳನ್ನು ಬದಲಾಯಿಸಲಾಗಿದೆ ಎಂದು ವರದಿ ಹೇಳಿದೆ.

ಎನ್ವಿರಾನ್‌ಮೆಂಟ್ ಇಂಪ್ಯಾಕ್ಟ್ ಅಸೆಸ್‌ಮೆಂಟ್ (ಇಐಎ) ಅಧಿಸೂಚನೆ-2006ಕ್ಕೆ ತಿದ್ದುಪಡಿ ಮಾಡಲಾಗಿದೆ. ಖಾಸಗಿ ಕೈಗಾರಿಕೆಗಳಿಗೆ ಅನುಕೂಲವಾಗುವ ಅನುಮತಿಗಳನ್ನು ನೀಡುವ ಮೊದಲು ಸಾರ್ವಜನಿಕ ಸಮಾಲೋಚನೆಯ ಬಗ್ಗೆ ವಿನಾಯಿತಿ ಸೇರಿದಂತೆ ಹಲವಾರು ತಿದ್ದುಪಡಿಗಳಿನ್ನು ಮಾಡಲಾಗಿದೆ ಮತ್ತು ಸಮರ್ಥನೀಯವಲ್ಲದ ಅಭಿವೃದ್ಧಿಯನ್ನು ಉತ್ತೇಜಿಸಿದೆ ಎಂದು ವರದಿ ಹೇಳಿದೆ.

ಗಣಿ ಮತ್ತು ಖನಿಜಗಳ ಕಾಯಿದೆ-2023ರ ಮೂಲಕ ಗಣಿಗಾರಿಕೆಗೆ ಖಾಸಗಿ ವಲಯಕ್ಕೆ ಪರವಾನಗಿಗಳನ್ನು ಪಡೆಯುವ ಹಾದಿ ಸರಳಗೊಳಿಸಲಾಯ್ತು. ಪೂರ್ವ ರಾಜ್ಯಗಳಾದ ಒಡಿಶಾ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ಗಳು ಗಣಿಗಾರಿಕೆಯ ಕಾರಣದಿಂದಾಗಿ ಭಾರಿ ಆಕ್ರಮಣಕ್ಕೆ ಸಾಕ್ಷಿಯಾಗಿವೆ, ಅಲ್ಲಿ ವಾಸಿಸುವ ಆದಿವಾಸಿಗಳ ಮೇಲೆ ಪರಿಣಾಮ ಬೀರಿದೆ ಮತ್ತು ನೂರಾರು ವರ್ಷಗಳ ಹಳೆಯ ಕಾಡುಗಳನ್ನು ನಾಶಪಡಿಸಲಾಗಿದೆ. 2023ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ-1980ಕ್ಕೆ ಮಾಡಿದ ತಿದ್ದುಪಡಿಯನ್ನು ವರದಿಯು ಉಲ್ಲೇಖಿಸಿದೆ, ಇದು ಅರಣ್ಯಗಳ ವ್ಯಾಖ್ಯಾನವನ್ನು ಬದಲಾಯಿಸಲು ಪ್ರಯತ್ನಿಸಿತು ಮತ್ತು ಈ ಹಿಂದೆ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಲಾದ ಹಲವಾರು ಅರಣ್ಯ ಪ್ರದೇಶಗಳಿಗೆ ಹಾನಿಕಾರಕವಾಗಿದೆ ಎಂದು ವರದಿ ಹೇಳಿದೆ.

2014 ಮತ್ತು 2020ರ ನಡುವೆ ಕೇವಲ ಒಂದು ಶೇಕಡಾಕ್ಕಿಂತ ಕಡಿಮೆ ಅರಣ್ಯ ಕ್ಲಿಯರೆನ್ಸ್‌ನ್ನು ಸರ್ಕಾರ ತಿರಸ್ಕರಿಸಿದೆ. 2014 ಮತ್ತು 2023ರ ನಡುವೆ, ಕೈಗಾರಿಕೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ 1.5 ಲಕ್ಷ ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗಿದೆ ಎಂದು ವರದಿ ಹೇಳಿದೆ.

ವರದಿಯು 2011ರ ಕರಾವಳಿ ನಿಯಂತ್ರಣ ವಲಯ (CRZ) ಅಧಿಸೂಚನೆಗೆ ಮಾಡಿದ ತಿದ್ದುಪಡಿಗಳನ್ನು ಎತ್ತಿ ತೋರಿಸಿದೆ. ವಿಮಾನ ನಿಲ್ದಾಣದ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ 130 ಚದರ ಕಿಲೋಮೀಟರ್ ಅರಣ್ಯ ಪ್ರದೇಶವನ್ನು ನಿಯೋಜಿಸುವ ಗುರಿಯನ್ನು ಹೊಂದಿರುವ ಗ್ರೇಟ್ ನಿಕೋಬಾರ್ ಐಲ್ಯಾಂಡ್ (ಜಿಎನ್‌ಐ) ಯೋಜನೆಯಂತಹ ಯೋಜನೆಗಳನ್ನು ಆಳುವ ಸರ್ಕಾರವು ವೇಗವಾಗಿ ಮುನ್ನೆಲೆಗೆ ತಂದಿದೆ ಎಂದು ವರದಿಯು ಉಲ್ಲೇಖಿಸಿದೆ.

ಹ್ಯುಮನ್‌ ರೈಟ್ಸ್ ಡಿಫೆಂಡರ್ಸ್ ಅಲರ್ಟ್-ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ಹೆನ್ರಿ ಟಿಫಾಗ್ನೆ ಮಾತನಾಡುತ್ತಾ, ಪರಿಸರ ಕಾರ್ಯಕರ್ತರು ಅಕ್ರಮ ಬಂಧನಗಳನ್ನು ಎದುರಿಸುತ್ತಿದ್ದಾರೆ ಮತ್ತು ಜಾರ್ಖಂಡ್, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಅವರ ಫೋನ್‌ಗಳನ್ನು ಕಿತ್ತುಕೊಂಡು ದೌರ್ಜನ್ಯ ನಡೆಸಲಾಗಿದೆ. ತಮಿಳುನಾಡಿನ ತೂತುಕುಡಿಯಲ್ಲಿ ವೇದಾಂತ ಸ್ಥಾವರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಆರು ಮಂದಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೆ 2021ರಲ್ಲಿ ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ 22 ವರ್ಷದ ಹವಾಮಾನ ಕಾರ್ಯಕರ್ತೆ ದಿಶಾ ರವಿಯ ಬಂಧನವನ್ನು ಕೂಡ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...