HomeUncategorizedಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ನಂತರ 8,350 ಕೋಟಿ ರೂ. ಮೊತ್ತದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದ...

ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ನಂತರ 8,350 ಕೋಟಿ ರೂ. ಮೊತ್ತದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದ ಬಿಜೆಪಿ ಸರ್ಕಾರ: ಆರ್‌ಟಿಐನಿಂದ ಬಹಿರಂಗ

- Advertisement -
- Advertisement -

ಚುನಾವಣಾ ಬಾಂಡ್ ಯೋಜನೆಯ ಸಾಂವಿಧಾನಿಕ ಮಾನ್ಯತೆಯ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದ ನಂತರ ನರೇಂದ್ರ ಮೋದಿ ಸರ್ಕಾರವು 2024 ರಲ್ಲಿ ತಲಾ 1 ಕೋಟಿ ರೂಪಾಯಿಗಳ 8,350 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಿದೆ ಎಂಬುವುದು ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಸಾಮಾಜಿಕ ಕಾರ್ಯಕರ್ತ ಕಮೊಡೊರ್ ಲೋಕೇಶ್ ಬಾತ್ರಾ ಅವರು ಮಾಹಿತಿ ಹಕ್ಕು (ಆರ್‌ಟಿಐ) ಅಡಿ ಸಲ್ಲಿಸಿದ್ದ ಅರ್ಜಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೀಡಿದ ಪ್ರತಿಕ್ರಿಯೆಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ಈ ವರ್ಷ ಮುದ್ರಿಸಲಾದ 8,350 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಯೋಜನೆಯ ಪ್ರಾರಂಭದಿಂದಲೂ ಸಂಗ್ರಹಿಸಿದ್ದಕ್ಕಿಂತ ಮೊತ್ತಕ್ಕಿಂತ ಹೆಚ್ಚಿದೆ.

ಚುನಾವಣಾ ಆಯೋಗವು ಪ್ರಕಟಿಸಿದ ಅಂಕಿ ಅಂಶಗಳ ಪ್ರಕಾರ, 2018 ರಿಂದೀಚೆಗೆ ಬಿಜೆಪಿಯು ಚುನಾವಣಾ ಬಾಂಡ್‌ಗಳ ಮೂಲಕ 8,251.8 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಈ ಅವಧಿಯಲ್ಲಿ ಮಾರಾಟವಾದ ಬಾಂಡ್‌ಗಳ ಒಟ್ಟು ಮೌಲ್ಯ 16,518 ಕೋಟಿ ರೂಪಾಯಿಗಳು. ಇದರರ್ಥ ಬಿಜೆಪಿಯು ಮಾರಾಟವಾದ ಎಲ್ಲಾ ಬಾಂಡ್‌ಗಳಲ್ಲಿ ಸುಮಾರು 50% ಅನ್ನು ಪುನಃ ಪಡೆದುಕೊಂಡಿದೆ.

ಬಾತ್ರಾ ಅವರು ಸಲ್ಲಿಸಿದ ಹಿಂದಿನ ಆರ್‌ಟಿಐ ಅರ್ಜಿಯಲ್ಲಿ ಚುನಾವಣಾ ಬಾಂಡ್‌ಗಳ ಮುದ್ರಣ ಮತ್ತು ನಿರ್ವಹಣೆಯ ಬಿಲ್ ಅನ್ನು ತೆರಿಗೆದಾರರೇ ಪಾವತಿಸಬೇಕೆ ಹೊರತು ದಾನಿಗಳು ಅಥವಾ ರಾಜಕೀಯ ಪಕ್ಷಗಳಲ್ಲ ಎಂದು ಹೇಳಲಾಗಿತ್ತು.

ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಅಧಿಕಾರ ಹೊಂದಿದ್ದ ಎಸ್‌ಬಿಐ 2018-2023ರ ನಡುವೆ “ಚುನಾವಣಾ ಬಾಂಡ್‌ ಯೋಜನೆಯನ್ನು ನಿರ್ವಹಿಸಲು ಮತ್ತು ಸರ್ಕಾರದಿಂದ 13.50 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಈ ವರ್ಷ ಹೆಚ್ಚುವರಿ 8,350 ಬಾಂಡ್‌ಗಳ ಮುದ್ರಣ ಮತ್ತು ನಿರ್ವಹಣೆಯ ವೆಚ್ಚ ಇನ್ನೂ ತಿಳಿದು ಬಂದಿಲ್ಲ. ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದು, ಇದು ಅಸಂವಿಧಾನಿಕ ಮತ್ತು ಈ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ : ಬಿಹಾರ: ‘ಜನ್ ಅಧಿಕಾರ್ ಪಕ್ಷ’ವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದ ಪಪ್ಪು ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...