Homeಕರ್ನಾಟಕಮತ್ತೆ ಇಂಧನ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ; ತುಮಕೂರಿನಲ್ಲಿ ಪೆಟ್ರೋಲ್‌ಗೆ ಬರೋಬ್ಬರಿ 2 ರೂ....

ಮತ್ತೆ ಇಂಧನ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ; ತುಮಕೂರಿನಲ್ಲಿ ಪೆಟ್ರೋಲ್‌ಗೆ ಬರೋಬ್ಬರಿ 2 ರೂ. ಏರಿಕೆ!

- Advertisement -
- Advertisement -

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಭಾನುವಾರ ಮತ್ತೊಮ್ಮೆ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಿದೆ. ಕಳೆದ ಹದಿಮೂರು ದಿನಗಳಿಂದ ಇಂಧನ ದರ ಹೆಚ್ಚಳವಾಗುತ್ತಲೆ ಇದ್ದು, ಐದು ರಾಜ್ಯಗಳ ಚುನಾವಣೆ ನಡೆದ ನಂತರ ಲೀಟರ್‌ಗೆ 8 ರೂ. ಇದುವರೆಗೂ ಏರಿಕೆಯಾಗಿದೆ.

ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ದೆಹಲಿಯಲ್ಲಿ ಪೆಟ್ರೋಲ್ ದರವು ನಿನ್ನೆಯ 102.61 ರೂ. ನಿಂದ 103.41 ರೂಗೆ ಏರಿಕೆಯಾಗಿದೆ. ಡೀಸೆಲ್ ದರಗಳು ಲೀಟರ್‌ಗೆ 93.87 ರೂ. ನಿಂದ 94.67 ರೂ.ಗೆ ಏರಿದೆ. ಈ ಬೆಲೆ ಏರಿಕೆಯೊಂದಿಗೆ ರಾಜ್ಯದಲ್ಲೂ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಕ್ರಮವಾಗಿ 88 ಪೈಸೆ ಮತ್ತು 81 ಪೈಸೆ ಏರಿಕೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಬೆಂಗಳೂರಿನಲ್ಲಿ 85 ಪೈಸೆ ಪೆಟ್ರೋಲ್‌ಗೆ ಮತ್ತು 78 ಪೈಸೆ ಡೀಸೆಲ್‌ಗೆ ಏರಿಕೆಯಾಗಿದ್ದು, ಇದರೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ,108.99 ರೂ. ಮತ್ತು 92.83 ರೂ.ಗೆ ತಲುಪಿದೆ.

ಇಂದಿನ ಬೆಲೆ ಏರಿಕೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಬರೋಬ್ಬರಿ 2 ರೂ. ಏರಿಕೆಯಾಗಿದ್ದು, ಡೀಸೆಲ್‌ಗೆ 1.83 ರೂ. ಏರಿಕೆಯಾಗಿದೆ. ಇದು ಇಂದು ರಾಜ್ಯದಲ್ಲೇ ಅತೀ ಹೆಚ್ಚು ಇಂಧನ ದರ ಏರಿಕೆಯಾದ ಜಿಲ್ಲೆಯಾಗಿದೆ. ಇದರೊಂದಿಗೆ ಅಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ, 110.46 ರೂ. ಮತ್ತು 94.17 ರೂ.ಗೆ ತಲುಪಿದೆ.

ಇದನ್ನೂ ಓದಿ: ‘ಹಲಾಲ್‌ ವಿಚಾರದಲ್ಲಿ ನಾವು ಸಂಘಟನೆಗಳ ಪರವಾಗಿದ್ದೇವೆ’: ಕಿಡಿಗೇಡಿ ಕೃತ್ಯಗಳನ್ನು ಸಮರ್ಥಿಸಿಕೊಂಡ ಸಚಿವೆ ಜೊಲ್ಲೆ

ಪ್ರಸ್ತುತ ರಾಜ್ಯದಲ್ಲೇ ಅತೀ ಹೆಚ್ಚು ಪೆಟ್ರೋಲ್‌ ದರ ಇರುವ ಜಿಲ್ಲೆಯಾಗಿ ದಾವಣಗೆರೆ ಹೊರಹೊಮ್ಮಿದೆ. ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 110.95 ರೂ.ಗೆ ತಲುಪಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್‌ ದರ 110 ರೂ. ದಾಟುತ್ತಿದೆ. ಜಿಲ್ಲಾವಾರು ಬೆಲೆ ಏರಿಕೆಯ ಪಟ್ಟಿ ಕೆಳಗಿನಂತಿದೆ.

ಐದು ರಾಜ್ಯಗಳಲ್ಲಿ ಚುನಾವಣೆ ಇದ್ದುದರಿಂದ ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ ನಾಲ್ಕು ತಿಂಗಳ ಕಾಲ ಇಂಧನ ದರಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏರಿಸಿರಲಿಲ್ಲ. ಇದರ ಬಂತರ ದರ ಪರಿಷ್ಕರಣೆ ಮಾರ್ಚ್ 22 ರ ನಂತರ ಮತ್ತೆ ಪ್ರಾರಂಭವಾಗಿತ್ತು.

ಶುಕ್ರವಾರದಂದು ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಿರಲಿಲ್ಲ. ಅದರ ಬದಲಿಗೆ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 KG ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಏಕಾಏಕಿ 250ರೂ.ಗೆ ಏರಿಸಿ, ಗ್ರಾಹಕರ ಕಿಸೆಗೆ ಕನ್ನ ಹಾಕಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...