Homeಕರ್ನಾಟಕನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ...

ನಾಡ ಧ್ವಜ, ನಾಡಗೀತೆಗೆ ಅವಮಾನ ಮಾಡಿದವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ: ತೀವ್ರ ತರಾಟೆ…

- Advertisement -
- Advertisement -

ನಿನ್ನೆ ಸರ್ಕಾರ ವಿವಿಧ ಪ್ರಾಧಿಕಾರ ಮತ್ತು ಅಕಾಡೆಮಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಅದರಲ್ಲಿ ಕನ್ನಡ ಧ್ವಜ ಮತ್ತು ನಾಡಗೀತೆಗೆ ಸೋಷಿಯಲ್ ಮೀಡಿಯಾದಲ್ಲಿ ಅವಮಾನ ಮಾಡಿದ ಅರೋಪ ಹೊತ್ತಿರುವ ರೋಹಿತ್‌ ಚಕ್ರತೀರ್ಥ ಎನ್ನುವವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನ ನೀಡಲಾಗಿದೆ.

ಪಟ್ಟಿ ಹೊರಬೀಳುತ್ತಿದ್ದಂತೆಯೇ ಹಲವು ಕನ್ನಡಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರವನ್ನು ಮನಸೋಇಚ್ಛೆ ತರಾಟೆಗೆ ತೆಗೆದುಕೊಂಡಿದ್ದಾರೆ. ಆಯ್ದ ಕೆಲವನ್ನು ಇಲ್ಲಿ ಪ್ರಕಟಿಸಲಾಗಿದೆ.

ಎಲ್ಲಾರ್ನೂ ಗಂಜಿ ಗಿರಾಕಿ ಅಂತಿದ್ದ ಈ ಶಿಷ್ಯ. ನಾಡಗೀತೆ & ಕುವೆಂಪು ಅಂತವರನ್ನು ಅವಮಾನಿಸಿದ್ದ ಇಂತಹವರಿಗೆ ಕನ್ನಡಾಭಿವೃದ್ದಿ ಪ್ರಾಧಿಕಾರದ ಸದಸ್ಯಗಿರಿಯೇ? ಕನ್ನಡಕ್ಕೆ ಇಂತಾ ದುರ್ಗತಿ ಬಂತಲ್ಲಪ್ಪ ಛೆ ! ಎಂದು ರಮೇಶ್ ಹೆಚ್ಕೆ ವ್ಯಂಗ್ಯವಾಡಿದ್ದಾರೆ.

ಹಿಂದೊಮ್ಮೆ ನಾಡಗೀತೆಗೆ ಅವಮಾನ ಮಾಡಿ ಎಲ್ಲರ ಕೈಯಿಂದ ಉಗಿಸಿಕೊಂಡು ಕರ್ನಾಟಕ ರಣಧೀರ ಪಡೆ ವತಿಯಿಂದ ಕೇಸನ್ನೂ ಹಾಕಿಸಿಕೊಂಡಿದ್ದ ಕಿಡಿಗೇಡಿಗೆ ರಾಜ್ಯ ಸರ್ಕಾರದಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಪಟ್ಟ. Chief Minister of Karnataka ನಿಮಗೆ ನಾಚಿಕೆಯಾಗಬೇಕು ಎಂದು ಕರ್ನಾಟಕ ರಣಧೀರ ಪಡೆಯ ಹರೀಶ್‌ ಕುಮಾರ್‌ ಬಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ನಾಡಗೀತೆಗೆ ಅವಮಾನ ಮಾಡಿದವನು, ಕನ್ನಡ ಬಾವುಟ ಬೇಡ ಎಂದವನು, ಹಿಂದಿ ಹೇರಿಕೆ ಸಮರ್ಥಿಸಿಕೊಂಡವನು ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ. ಕರ್ಮ, ಇನ್ನು ಏನೇನು ನೋಡಬೇಕೊ…..! ಎಂದೂ ಸಹ ಬೇಸರ ವ್ಯಕ್ತಪಡಿಸಿದ್ದಾರೆ.

“ಗಂಜಿ…ಗಂಜಿ ಎಂದು ಜೊಲ್ಲು ಸುರಿಸುತ್ತಾ,
ಹೊಟ್ಟೆ ಉರ್ಕೊಂಡು ರೋದಿಸುತ್ತಿದ್ದ ಗಂಜಲ‌ ಗಿರಾಕಿಯ ಅತೃಪ್ತ ಆತ್ಮ,

ಪ್ರಾಧಿಕಾರದ ಪುಟಗೋಸಿ ಸದಸ್ಯತ್ವದ ‘ಚರಂಡಿತೀರ್ಥ’
ಕುಡಿದು ಶಾಂತವಾಯಿತಂತೆ.” ಎಂಬ ದಿನೇಶ್ ಅಮೀನ್ ಮಟ್ಟುರವರ ಫೇಸ್‌ಬುಕ್ ಪೋಸ್ಟ್‌ ವೈರಲ್‌ ಆಗಿದೆ.

“ಅಂತೂ ಇಷ್ಟು ದಿನ ಗಂಜಿಗಿರಾಕಿಗಳನ್ನು ಟಾರ್ಗೆಟ್ ಮಾಡಿದ್ದಕ್ಕೆ ಕೆಲವರಿಗೆ ಪಂಚಗವ್ಯ ಸಿಕ್ತು.

(ಪಂಚಗವ್ಯ= ಗಂಜಲ+ಸಗಣಿ+ಇತ್ಯಾದಿ ಸೇರಿದ ದ್ರವ)” ಎಂದು ಎನ್‌ ಶಂಕರರವರು ವ್ಯಂಗ್ಯವಾಡಿದ್ದಾರೆ.

“ಈ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಮಾಡಲಾಗಿರುವ ನೇಮಕಗಳು ನಿಜಕ್ಕೂ ಕನ್ನಡದ ಸಾಂಸ್ಕೃತಿಕ ಜೀವಂತಿಕೆಗೆ ಕೊಡಲಿ ಪೆಟ್ಟು. ಹೀಗೆ ಮುಂದುವರೆದರೆ ….” ಎಂದು ವೀರಣ್ಣ ಮಡಿವಾಳರರವರು ಆತಂಕ ವ್ಯಕ್ತಪಡಿಸಿದ್ದಾರೆ..

“Chief Minister of Karnataka  ಕನ್ನಡ ನಾಡಗೀತೆಗೆ ಮತ್ತು ನಾಡಿಗೆ ಅಗೌರವ ಮತ್ತು ಅವಮಾನ ಮಾಡಿದ್ದ ವ್ಯಕ್ತಿಯನ್ನೆ ನಿಮ್ಮ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯನಾಗಿ ಮಾಡಿದೆ.

ನಿಮ್ಮ ಈ ತೀರ್ಮಾನ ಕನ್ನಡ ತಾಯಿ ಭುವನೇಶ್ವರಿಗೇ ಬಗೆದ ದ್ರೋಹ ಅಲ್ಲವೇ.?” ಎಂದು ನಾಗೇಗೌಡ ಕೀಲಾರ ಶಿವಲಿಂಗಯ್ಯನವರು ಪ್ರಶ್ನಿಸಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರಕಾರವೇ ವಕ್ರ ಆಗಿರುವಾಗ ಇಂತವು ಸಹಜ. ಬೇರೆ ಅಕಾಡಮಿಗಳನ್ನೂ ನೋಡಿ!

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...