Homeಮುಖಪುಟಲೋಕಸಭೆ ಚುನಾವಣೆ: ಅಸಂವಿಧಾನಿಕ 'CAA' ಅಬ್ಬರ

ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಸಿಎಎ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಈ ಚುನಾವಣೆವರೆಗೂ ಸಿಎಎ ಅಬ್ಬರವನ್ನು ಜೋರಾಗಿರಿಸಿ, ಆ ಮೇಲೆ ಮತ್ತೊಮ್ಮೆ ಮರೆಯುವ ತಂತ್ರ ಹೂಡಿದೆಯೆ? ಅಥವಾ ಹಿಂದುತ್ವದ ರಾಜಕಾರಣ ಮಾಡುತ್ತಿರುವ ಬಿಜೆಪಿ ಈ ಅಸಂವಿಧಾನಿಕ ಕಾಯ್ದೆಯನ್ನು ತಂದೇ ಬಿಡುತ್ತಾ ಎನ್ನುವುದು ಅಸ್ಪಷ್ಟ, ಆದರೆ ಇದೀಗ ಕಾಯ್ದೆ ಭಾರೀ ಸದ್ದು ಮಾಡುತ್ತಿದೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಬಳಿಕ ಮೌನವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ 2023ರ ಡಿಸೆಂಬರ್‌ನಲ್ಲಿ ಅಮಿತ್ ಶಾ ಹೇಳಿಕೆ ಮೂಲಕ ಮತ್ತೆ ಮುನ್ನೆಲೆಗೆ ಬಂದಿತ್ತು. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ರಾಮಮಂದಿರ, ಜಮ್ಮು-ಕಾಶ್ಮೀರದ 370ನೇ ವಿಧಿ ರದ್ಧತಿ, ಏಕರೂಪ ನಾಗರಿಕ ಸಂಹಿತೆ ಮುನ್ನೆಲೆಯಲ್ಲಿದೆ. ಈ ಎಲ್ಲಾ ಕಾಯ್ದೆಗಳು ಮತ್ತು ಕ್ರಮಗಳು ಅಲ್ಪಸಂಖ್ಯಾತ ವಿರೋಧಿ, ಅದರಲ್ಲೂ ಮುಸ್ಲಿಂ ವಿರೋಧಿ ಎಂದು ಬಣ್ಣಿಸಲಾಗಿದೆ. ಈ ಭಾವನಾತ್ಮಕ, ಅಸಂವಿಧಾನಿಕ ಮತ್ತು ವಿವಾದಾತ್ಮಕ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಬಿಜೆಪಿ ಮಾಡುತ್ತಿರುವ ತುಷ್ಟೀಕರಣ ರಾಜಕೀಯ ಅದು ಎಷ್ಟರ ಮಟ್ಟಿಗೆ ಫಲ ಪ್ರದವಾಗಲಿದೆ ಎಂದು ಕಾದು ನೋಡಬೇಕಿದೆ.

370ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ. ಹಾಗಾಗಿ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದು ನಾವು ನಂಬುತ್ತೇವೆ ಎಂದು ಖುದ್ದು ಅಮಿತ್‌ ಶಾ ಅವರು ಹೇಳಿದ್ದಾರೆ. ವಿವಾದಾತ್ಮಕ ಸಿಎಎ ಜಾರಿಗೊಳಿಸುವ ಭರವಸೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ.ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಅಸ್ತ್ರವಾಗಿತ್ತು. ಕೇಸರಿ ಪಕ್ಷದ ನಾಯಕರು ಬಂಗಾಳದಲ್ಲಿ ಬಿಜೆಪಿಯ ಉದಯಕ್ಕೆ ಕಾರಣವಾದ ಅಂಶವೆಂದು ಇದನ್ನು ಪರಿಗಣಿಸುತ್ತಾರೆ. ಆದ್ದರಿಂದ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಇದೀಗ ಸಿಎಎಯನ್ನು ಮುನ್ನಲೆಗೆ ತಂದಿದೆ ಎನ್ನಲಾಗಿದೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಹೇಳಿದ್ದಾರೆ. ಸಿಎಎ ಜಾರಿಗೊಳಿಸುವ ಭರವಸೆಯಿಂದ ಕಾಂಗ್ರೆಸ್ ಹಿಂದೆ ಸರಿದಿದೆ. ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು ಎಂದು ಇಟಿ ನೌ ಗ್ಲೋಬಲ್ ಶೃಂಗಸಭೆ 2024ರಲ್ಲಿ ಅಮಿತ್‌ ಶಾ ಹೇಳಿದ್ದಾರೆ. ಪೌರತ್ವವನ್ನು ಒದಗಿಸಲು ಸಿಎಎಯನ್ನು ತರಲಾಗಿದೆಯೇ ಹೊರತು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ. ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ CAA ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ನೀಡುವ ಕಾಯಿದೆಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಕೋಲ್ಕತ್ತಾದಲ್ಲಿ ಲೋಕಸಭೆಯ ಚುನಾವಣಾ ಪ್ರಚಾರದ ಭಾಗವಾಗಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದರು.

ಇದಲ್ಲದೆ ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧವಾಗಲಿದೆ  ಎಂದು ಹೇಳಿದ್ದರು.

ಇತ್ತೀಚೆಗೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ, ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಆ ಬಳಿಕ ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದರು.

ಇತ್ತೀಚಿನ ಇಂಡಿಯಾ ಟುಡೇ ವರದಿ ಪ್ರಕಾರ, ಸಿಎಎ ನಿಯಮಾವಳಿಗಳ ಬಗ್ಗೆ ಸರಕಾರ ಅಧಿಸೂಚನೆ ಹೊರಡಿಸಲಿದೆ. ನಿಯಮಗಳನ್ನು ಹೊರಡಿಸಿದ ನಂತರ ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಉಲ್ಲೇಖಿಸಿದೆ.

ದಿ ಇಂಡಿಯನ್ ವರದಿಯ ಎಕ್ಸ್‌ಪ್ರೆಸ್ ವರದಿಯು, ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು.

ಸಿಎಎ ಕುರಿತು ಎಲ್ಲಾ ವಿಷಯಗಳು ಸಿದ್ದವಾಗಿದೆ ಮತ್ತು ಚುನಾವಣೆಯ ಮೊದಲು ಅವುಗಳನ್ನು ಕಾರ್ಯಗತಗೊಳಿಸುವ ಸಾಧ್ಯತೆಯಿದೆ. ಅರ್ಜಿದಾರರು ಪ್ರಯಾಣ ದಾಖಲೆಗಳಿಲ್ಲದಿದ್ದರೂ, ಭಾರತವನ್ನು ಪ್ರವೇಶಿಸಿದ ವರ್ಷವನ್ನು ತಿಳಿಸಬೇಕಾಗುತ್ತದೆ. ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. 2014ರ ನಂತರ ಅರ್ಜಿ ಸಲ್ಲಿಸಿದ ಅರ್ಜಿದಾರರ ಅರ್ಜಿ ಹೊಸ ನಿಯಮಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ. ಇದಲ್ಲದೆ ಡಿ.31, 2014ರ ಮೊದಲು ಭಾರತಕ್ಕೆ ಬಂದವರಿಗೆ ಮಾತ್ರ ಸೀಮಿತವಾಗಿದ್ದ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಕನಾಮಿಕ್ ಟೈಮ್ಸ್ ಕೂಡ ವರದಿ ಮಾಡಿತ್ತು.

ಏನಿದು ಕಾಯ್ದೆ:

2019ರಲ್ಲಿ ಮೋದಿ ಸರ್ಕಾರವು ಪರಿಚಯಿಸಿದ ಪೌರತ್ವ ತಿದ್ದುಪಡಿ ಕಾಯ್ದೆ, ಡಿಸೆಂಬರ್ 31, 2014ಕ್ಕಿಂತ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ. ಈ ಪೌರತ್ವದಿಂದ ಮುಸ್ಲಿಮರನ್ನು ಹೊರಗಿಡಲಾಗಿದೆ. ಧರ್ಮದ ಆಧಾರದಲ್ಲಿ ಇದು ಪೌರತ್ವವನ್ನು ನೀಡುವುದನ್ನು ಉದ್ದೇಶಿಸಿರುವ ಕಾರಣ ಇದು ಅಸಂವಿಧಾನಿಕವಾಗಿದೆ.

CAAನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಈ ಪ್ರಸ್ತಾವಿತ ಕಾಯ್ದೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....