Homeಮುಖಪುಟಲೋಕಸಭೆ ಚುನಾವಣೆ: ಅಸಂವಿಧಾನಿಕ 'CAA' ಅಬ್ಬರ

ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಸಿಎಎ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಈ ಚುನಾವಣೆವರೆಗೂ ಸಿಎಎ ಅಬ್ಬರವನ್ನು ಜೋರಾಗಿರಿಸಿ, ಆ ಮೇಲೆ ಮತ್ತೊಮ್ಮೆ ಮರೆಯುವ ತಂತ್ರ ಹೂಡಿದೆಯೆ? ಅಥವಾ ಹಿಂದುತ್ವದ ರಾಜಕಾರಣ ಮಾಡುತ್ತಿರುವ ಬಿಜೆಪಿ ಈ ಅಸಂವಿಧಾನಿಕ ಕಾಯ್ದೆಯನ್ನು ತಂದೇ ಬಿಡುತ್ತಾ ಎನ್ನುವುದು ಅಸ್ಪಷ್ಟ, ಆದರೆ ಇದೀಗ ಕಾಯ್ದೆ ಭಾರೀ ಸದ್ದು ಮಾಡುತ್ತಿದೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಬಳಿಕ ಮೌನವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ 2023ರ ಡಿಸೆಂಬರ್‌ನಲ್ಲಿ ಅಮಿತ್ ಶಾ ಹೇಳಿಕೆ ಮೂಲಕ ಮತ್ತೆ ಮುನ್ನೆಲೆಗೆ ಬಂದಿತ್ತು. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ರಾಮಮಂದಿರ, ಜಮ್ಮು-ಕಾಶ್ಮೀರದ 370ನೇ ವಿಧಿ ರದ್ಧತಿ, ಏಕರೂಪ ನಾಗರಿಕ ಸಂಹಿತೆ ಮುನ್ನೆಲೆಯಲ್ಲಿದೆ. ಈ ಎಲ್ಲಾ ಕಾಯ್ದೆಗಳು ಮತ್ತು ಕ್ರಮಗಳು ಅಲ್ಪಸಂಖ್ಯಾತ ವಿರೋಧಿ, ಅದರಲ್ಲೂ ಮುಸ್ಲಿಂ ವಿರೋಧಿ ಎಂದು ಬಣ್ಣಿಸಲಾಗಿದೆ. ಈ ಭಾವನಾತ್ಮಕ, ಅಸಂವಿಧಾನಿಕ ಮತ್ತು ವಿವಾದಾತ್ಮಕ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಬಿಜೆಪಿ ಮಾಡುತ್ತಿರುವ ತುಷ್ಟೀಕರಣ ರಾಜಕೀಯ ಅದು ಎಷ್ಟರ ಮಟ್ಟಿಗೆ ಫಲ ಪ್ರದವಾಗಲಿದೆ ಎಂದು ಕಾದು ನೋಡಬೇಕಿದೆ.

370ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ. ಹಾಗಾಗಿ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದು ನಾವು ನಂಬುತ್ತೇವೆ ಎಂದು ಖುದ್ದು ಅಮಿತ್‌ ಶಾ ಅವರು ಹೇಳಿದ್ದಾರೆ. ವಿವಾದಾತ್ಮಕ ಸಿಎಎ ಜಾರಿಗೊಳಿಸುವ ಭರವಸೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ.ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಅಸ್ತ್ರವಾಗಿತ್ತು. ಕೇಸರಿ ಪಕ್ಷದ ನಾಯಕರು ಬಂಗಾಳದಲ್ಲಿ ಬಿಜೆಪಿಯ ಉದಯಕ್ಕೆ ಕಾರಣವಾದ ಅಂಶವೆಂದು ಇದನ್ನು ಪರಿಗಣಿಸುತ್ತಾರೆ. ಆದ್ದರಿಂದ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಇದೀಗ ಸಿಎಎಯನ್ನು ಮುನ್ನಲೆಗೆ ತಂದಿದೆ ಎನ್ನಲಾಗಿದೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಹೇಳಿದ್ದಾರೆ. ಸಿಎಎ ಜಾರಿಗೊಳಿಸುವ ಭರವಸೆಯಿಂದ ಕಾಂಗ್ರೆಸ್ ಹಿಂದೆ ಸರಿದಿದೆ. ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು ಎಂದು ಇಟಿ ನೌ ಗ್ಲೋಬಲ್ ಶೃಂಗಸಭೆ 2024ರಲ್ಲಿ ಅಮಿತ್‌ ಶಾ ಹೇಳಿದ್ದಾರೆ. ಪೌರತ್ವವನ್ನು ಒದಗಿಸಲು ಸಿಎಎಯನ್ನು ತರಲಾಗಿದೆಯೇ ಹೊರತು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ. ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ CAA ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ನೀಡುವ ಕಾಯಿದೆಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಕೋಲ್ಕತ್ತಾದಲ್ಲಿ ಲೋಕಸಭೆಯ ಚುನಾವಣಾ ಪ್ರಚಾರದ ಭಾಗವಾಗಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದರು.

ಇದಲ್ಲದೆ ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧವಾಗಲಿದೆ  ಎಂದು ಹೇಳಿದ್ದರು.

ಇತ್ತೀಚೆಗೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ, ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಆ ಬಳಿಕ ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದರು.

ಇತ್ತೀಚಿನ ಇಂಡಿಯಾ ಟುಡೇ ವರದಿ ಪ್ರಕಾರ, ಸಿಎಎ ನಿಯಮಾವಳಿಗಳ ಬಗ್ಗೆ ಸರಕಾರ ಅಧಿಸೂಚನೆ ಹೊರಡಿಸಲಿದೆ. ನಿಯಮಗಳನ್ನು ಹೊರಡಿಸಿದ ನಂತರ ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಉಲ್ಲೇಖಿಸಿದೆ.

ದಿ ಇಂಡಿಯನ್ ವರದಿಯ ಎಕ್ಸ್‌ಪ್ರೆಸ್ ವರದಿಯು, ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು.

ಸಿಎಎ ಕುರಿತು ಎಲ್ಲಾ ವಿಷಯಗಳು ಸಿದ್ದವಾಗಿದೆ ಮತ್ತು ಚುನಾವಣೆಯ ಮೊದಲು ಅವುಗಳನ್ನು ಕಾರ್ಯಗತಗೊಳಿಸುವ ಸಾಧ್ಯತೆಯಿದೆ. ಅರ್ಜಿದಾರರು ಪ್ರಯಾಣ ದಾಖಲೆಗಳಿಲ್ಲದಿದ್ದರೂ, ಭಾರತವನ್ನು ಪ್ರವೇಶಿಸಿದ ವರ್ಷವನ್ನು ತಿಳಿಸಬೇಕಾಗುತ್ತದೆ. ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. 2014ರ ನಂತರ ಅರ್ಜಿ ಸಲ್ಲಿಸಿದ ಅರ್ಜಿದಾರರ ಅರ್ಜಿ ಹೊಸ ನಿಯಮಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ. ಇದಲ್ಲದೆ ಡಿ.31, 2014ರ ಮೊದಲು ಭಾರತಕ್ಕೆ ಬಂದವರಿಗೆ ಮಾತ್ರ ಸೀಮಿತವಾಗಿದ್ದ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಕನಾಮಿಕ್ ಟೈಮ್ಸ್ ಕೂಡ ವರದಿ ಮಾಡಿತ್ತು.

ಏನಿದು ಕಾಯ್ದೆ:

2019ರಲ್ಲಿ ಮೋದಿ ಸರ್ಕಾರವು ಪರಿಚಯಿಸಿದ ಪೌರತ್ವ ತಿದ್ದುಪಡಿ ಕಾಯ್ದೆ, ಡಿಸೆಂಬರ್ 31, 2014ಕ್ಕಿಂತ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ. ಈ ಪೌರತ್ವದಿಂದ ಮುಸ್ಲಿಮರನ್ನು ಹೊರಗಿಡಲಾಗಿದೆ. ಧರ್ಮದ ಆಧಾರದಲ್ಲಿ ಇದು ಪೌರತ್ವವನ್ನು ನೀಡುವುದನ್ನು ಉದ್ದೇಶಿಸಿರುವ ಕಾರಣ ಇದು ಅಸಂವಿಧಾನಿಕವಾಗಿದೆ.

CAAನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಈ ಪ್ರಸ್ತಾವಿತ ಕಾಯ್ದೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...