Homeಮುಖಪುಟಲೋಕಸಭೆ ಚುನಾವಣೆ: ಅಸಂವಿಧಾನಿಕ 'CAA' ಅಬ್ಬರ

ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಸಿಎಎ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಈ ಚುನಾವಣೆವರೆಗೂ ಸಿಎಎ ಅಬ್ಬರವನ್ನು ಜೋರಾಗಿರಿಸಿ, ಆ ಮೇಲೆ ಮತ್ತೊಮ್ಮೆ ಮರೆಯುವ ತಂತ್ರ ಹೂಡಿದೆಯೆ? ಅಥವಾ ಹಿಂದುತ್ವದ ರಾಜಕಾರಣ ಮಾಡುತ್ತಿರುವ ಬಿಜೆಪಿ ಈ ಅಸಂವಿಧಾನಿಕ ಕಾಯ್ದೆಯನ್ನು ತಂದೇ ಬಿಡುತ್ತಾ ಎನ್ನುವುದು ಅಸ್ಪಷ್ಟ, ಆದರೆ ಇದೀಗ ಕಾಯ್ದೆ ಭಾರೀ ಸದ್ದು ಮಾಡುತ್ತಿದೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಬಳಿಕ ಮೌನವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ 2023ರ ಡಿಸೆಂಬರ್‌ನಲ್ಲಿ ಅಮಿತ್ ಶಾ ಹೇಳಿಕೆ ಮೂಲಕ ಮತ್ತೆ ಮುನ್ನೆಲೆಗೆ ಬಂದಿತ್ತು. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ರಾಮಮಂದಿರ, ಜಮ್ಮು-ಕಾಶ್ಮೀರದ 370ನೇ ವಿಧಿ ರದ್ಧತಿ, ಏಕರೂಪ ನಾಗರಿಕ ಸಂಹಿತೆ ಮುನ್ನೆಲೆಯಲ್ಲಿದೆ. ಈ ಎಲ್ಲಾ ಕಾಯ್ದೆಗಳು ಮತ್ತು ಕ್ರಮಗಳು ಅಲ್ಪಸಂಖ್ಯಾತ ವಿರೋಧಿ, ಅದರಲ್ಲೂ ಮುಸ್ಲಿಂ ವಿರೋಧಿ ಎಂದು ಬಣ್ಣಿಸಲಾಗಿದೆ. ಈ ಭಾವನಾತ್ಮಕ, ಅಸಂವಿಧಾನಿಕ ಮತ್ತು ವಿವಾದಾತ್ಮಕ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಬಿಜೆಪಿ ಮಾಡುತ್ತಿರುವ ತುಷ್ಟೀಕರಣ ರಾಜಕೀಯ ಅದು ಎಷ್ಟರ ಮಟ್ಟಿಗೆ ಫಲ ಪ್ರದವಾಗಲಿದೆ ಎಂದು ಕಾದು ನೋಡಬೇಕಿದೆ.

370ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ. ಹಾಗಾಗಿ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದು ನಾವು ನಂಬುತ್ತೇವೆ ಎಂದು ಖುದ್ದು ಅಮಿತ್‌ ಶಾ ಅವರು ಹೇಳಿದ್ದಾರೆ. ವಿವಾದಾತ್ಮಕ ಸಿಎಎ ಜಾರಿಗೊಳಿಸುವ ಭರವಸೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ.ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಅಸ್ತ್ರವಾಗಿತ್ತು. ಕೇಸರಿ ಪಕ್ಷದ ನಾಯಕರು ಬಂಗಾಳದಲ್ಲಿ ಬಿಜೆಪಿಯ ಉದಯಕ್ಕೆ ಕಾರಣವಾದ ಅಂಶವೆಂದು ಇದನ್ನು ಪರಿಗಣಿಸುತ್ತಾರೆ. ಆದ್ದರಿಂದ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಇದೀಗ ಸಿಎಎಯನ್ನು ಮುನ್ನಲೆಗೆ ತಂದಿದೆ ಎನ್ನಲಾಗಿದೆ.

ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಹೇಳಿದ್ದಾರೆ. ಸಿಎಎ ಜಾರಿಗೊಳಿಸುವ ಭರವಸೆಯಿಂದ ಕಾಂಗ್ರೆಸ್ ಹಿಂದೆ ಸರಿದಿದೆ. ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು ಎಂದು ಇಟಿ ನೌ ಗ್ಲೋಬಲ್ ಶೃಂಗಸಭೆ 2024ರಲ್ಲಿ ಅಮಿತ್‌ ಶಾ ಹೇಳಿದ್ದಾರೆ. ಪೌರತ್ವವನ್ನು ಒದಗಿಸಲು ಸಿಎಎಯನ್ನು ತರಲಾಗಿದೆಯೇ ಹೊರತು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ. ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ CAA ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ನೀಡುವ ಕಾಯಿದೆಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಕೋಲ್ಕತ್ತಾದಲ್ಲಿ ಲೋಕಸಭೆಯ ಚುನಾವಣಾ ಪ್ರಚಾರದ ಭಾಗವಾಗಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದರು.

ಇದಲ್ಲದೆ ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧವಾಗಲಿದೆ  ಎಂದು ಹೇಳಿದ್ದರು.

ಇತ್ತೀಚೆಗೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ರಾಜ್ಯಸಚಿವ ಶಾಂತನು ಠಾಕೂರ್, ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದೆ ಮತ್ತು ಮುಂದಿನ 7 ದಿನಗಳಲ್ಲಿ ಸಿಎಎ ದೇಶಾದ್ಯಂತ ಜಾರಿಗೆ ಬರಲಿದೆ. ಇದು ನನ್ನ ಗ್ಯಾರಂಟಿ, ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಿಎಎಯನ್ನು ಒಂದು ವಾರದೊಳಗೆ ಜಾರಿಗೆ ತರಲಾಗುವುದು ಎಂದು ಹೇಳಿದ್ದರು. ಆ ಬಳಿಕ ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದರು.

ಇತ್ತೀಚಿನ ಇಂಡಿಯಾ ಟುಡೇ ವರದಿ ಪ್ರಕಾರ, ಸಿಎಎ ನಿಯಮಾವಳಿಗಳ ಬಗ್ಗೆ ಸರಕಾರ ಅಧಿಸೂಚನೆ ಹೊರಡಿಸಲಿದೆ. ನಿಯಮಗಳನ್ನು ಹೊರಡಿಸಿದ ನಂತರ ಕಾನೂನನ್ನು ಜಾರಿಗೆ ತರಬಹುದು ಮತ್ತು ಅರ್ಹರಿಗೆ ಭಾರತೀಯ ಪೌರತ್ವವನ್ನು ನೀಡಬಹುದು ಎಂದು ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಉಲ್ಲೇಖಿಸಿದೆ.

ದಿ ಇಂಡಿಯನ್ ವರದಿಯ ಎಕ್ಸ್‌ಪ್ರೆಸ್ ವರದಿಯು, ಸಿಎಎ ನಿಯಮಗಳು ಈಗ ಸಿದ್ಧವಾಗಿವೆ ಮತ್ತು ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ಪೋರ್ಟಲ್ ಸಹ ಸಿದ್ದವಾಗಿದೆ. ಇದು ಸಂಪೂರ್ಣವಾಗಿ ಆನ್‌ಲೈನ್‌ ಪ್ರಕ್ರಿಯೆಯಾಗಿದೆ ಎಂದು ಹೇಳಿತ್ತು.

ಸಿಎಎ ಕುರಿತು ಎಲ್ಲಾ ವಿಷಯಗಳು ಸಿದ್ದವಾಗಿದೆ ಮತ್ತು ಚುನಾವಣೆಯ ಮೊದಲು ಅವುಗಳನ್ನು ಕಾರ್ಯಗತಗೊಳಿಸುವ ಸಾಧ್ಯತೆಯಿದೆ. ಅರ್ಜಿದಾರರು ಪ್ರಯಾಣ ದಾಖಲೆಗಳಿಲ್ಲದಿದ್ದರೂ, ಭಾರತವನ್ನು ಪ್ರವೇಶಿಸಿದ ವರ್ಷವನ್ನು ತಿಳಿಸಬೇಕಾಗುತ್ತದೆ. ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. 2014ರ ನಂತರ ಅರ್ಜಿ ಸಲ್ಲಿಸಿದ ಅರ್ಜಿದಾರರ ಅರ್ಜಿ ಹೊಸ ನಿಯಮಗಳ ಪ್ರಕಾರ ವಿಲೇವಾರಿ ಮಾಡಲಾಗುತ್ತದೆ. ಇದಲ್ಲದೆ ಡಿ.31, 2014ರ ಮೊದಲು ಭಾರತಕ್ಕೆ ಬಂದವರಿಗೆ ಮಾತ್ರ ಸೀಮಿತವಾಗಿದ್ದ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಕನಾಮಿಕ್ ಟೈಮ್ಸ್ ಕೂಡ ವರದಿ ಮಾಡಿತ್ತು.

ಏನಿದು ಕಾಯ್ದೆ:

2019ರಲ್ಲಿ ಮೋದಿ ಸರ್ಕಾರವು ಪರಿಚಯಿಸಿದ ಪೌರತ್ವ ತಿದ್ದುಪಡಿ ಕಾಯ್ದೆ, ಡಿಸೆಂಬರ್ 31, 2014ಕ್ಕಿಂತ ಮೊದಲು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ. ಈ ಪೌರತ್ವದಿಂದ ಮುಸ್ಲಿಮರನ್ನು ಹೊರಗಿಡಲಾಗಿದೆ. ಧರ್ಮದ ಆಧಾರದಲ್ಲಿ ಇದು ಪೌರತ್ವವನ್ನು ನೀಡುವುದನ್ನು ಉದ್ದೇಶಿಸಿರುವ ಕಾರಣ ಇದು ಅಸಂವಿಧಾನಿಕವಾಗಿದೆ.

CAAನ್ನು ಡಿ.10, 2019ರಂದು ಲೋಕಸಭೆಯಲ್ಲಿ ಮತ್ತು ಎರಡು ದಿನಗಳ ನಂತರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ ನಂತರ ಅಂಗೀಕರಿಸಲಾಯಿತು. ಈ ಪ್ರಸ್ತಾವಿತ ಕಾಯ್ದೆ ದೇಶದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...