Homeಕರ್ನಾಟಕಬಿಜೆಪಿ ಸರ್ಕಾರದ ಹೊಸ ವಿವಾದ: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ

ಬಿಜೆಪಿ ಸರ್ಕಾರದ ಹೊಸ ವಿವಾದ: ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದಕ್ಕೆ ವಿರೋಧ

- Advertisement -
- Advertisement -

ಪಠ್ಯ ಪರಿಷ್ಕರಣೆ, ಆರ್‌ಎಸ್‌ಎಸ್‌ ಸ್ಥಾಪಕ ಹೆಡಗೆವಾರ್ ಭಾಷಣ ಸೇರ್ಪಡೆ, ಭಗವದ್ಗೀತೆ ಬೋಧನೆಗೆ ಆದೇಶ, ಕನ್ನಡದ ಮೇರು ಚಿಂತಕರಿಗೆ ಅವಮಾನ, ವೇದಗಣಿತ ಕಲಿಕೆ ದಲಿತರ ಹಣ ದುರ್ಬಳಕೆ, ಸರ್ಕಾರ ಶಾಲಾ ಮಕ್ಕಳ ಪೋಷಕರಿಂದ ದೇಣಿಗೆ ವಸೂಲಿ ಮತ್ತು ನಿತ್ಯ ಧ್ಯಾನ ಮಾಡಿಸಬೇಕೆಂಬ ನಿರ್ಧಾರಗಳಿಂದ ವಿವಾದಕ್ಕೆ ಕಾರಣವಾಗಿದ್ದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವ ಯೋಜನೆ ಘೋಷಿಸಿ ಮತ್ತೊಂದು ಹೊಸ ವಿವಾದ ಸೃಷ್ಟಿಸಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ 8000 ಶಾಲಾ ಕೊಠಡಿಗಳೀಗೆ ವಿವೇಕ ಎಂದು ಹೆಸರಿಡಲಾಗಿದ್ದು, ಆ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಇಂದು ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಸರಿ ಬಣ್ಣವಲ್ಲವೇ? ಆರ್ಕಿಟೆಕ್ಟ್ ಏನಾದರೂ ಕೇಸರಿ ಬಣ್ಣ ಚೆನ್ನಾಗಿದೆ ಹಾಕಿ ಎಂದರೆ ನಾನು ಹಾಕುವವನೆ, ಅವರು ಕೊಡುವ ಡಿಸೈನ್ ಅನ್ನು ಹಾಕುತ್ತೇವೆ. ಒಂದಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ. ಅವರ ಧ್ವಜದಲ್ಲಿಯೂ ಕೇಸರಿ ಇದೆ. ಅದನ್ನು ಯಾಕೆ ಬಿಟ್ಟುಕೊಂಡಿದ್ದಾರೆ. ಅದನ್ನು ತೆಗೆದು ಹಾಕಿಬಿಡಲಿ” ಎಂದಿದ್ದಾರೆ.

ಇನ್ನೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿಯವರು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ “ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು. ಕೇಸರಿ ಕಂಡರೆ ಏಕೆ ಸಿಟ್ಟು? ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಅದನ್ನು ಕಲಿಯಲಿ” ಎಂದಿದ್ದಾರೆ.

“ಇದೊಂದು ಕೇಸರಿಕರಣ ಮಾಡುತ್ತಿರುವ ಹುನ್ನಾರ. ಸರ್ಕಾರದ ಬಳಿ ಇರುವ ದುಡ್ಡು ಜನರ ದುಡ್ಡೇ ಹೊರತು, ಬಿಜೆಪಿಯ ದುಡ್ಡಲ್ಲ. ಜನರು ಕೇಸರಿಕರಣ ಮಾಡಲು ಇವರನ್ನು ಆಯ್ಕೆ ಮಾಡಿದ್ದಾರೆಯೇ? ಇವರು ಹಿಂಬಾಗಿಲಿನಿಂದ ಅಧಿಕಾರ ಹಿಡಿದವರು. ಜನರ ಪರವಾಗಿ ಕೆಲಸ ಮಾಡುವುದು ಬಿಟ್ಟು ಮನಸ್ಸಿಗೆ ಬಂದ ಹಾಗೆ ಮಾಡುತ್ತಿದ್ದಾರೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ಸರ್ಕಾರಿ ಶಾಲಾ-ಕಾಲೇಜುಗಳು ತೆರಿಗೆದಾರರ ಹಣದಿಂದ ನಡೆಯುತ್ತಿದ್ದು, ಅದನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವ ಕೆಲಸವನ್ನು ಶಿಕ್ಷಣ ಸಚಿವರು ಮಾಡುತ್ತಿದ್ದಾರೆ. ಅವರು ರಾಜ್ಯದಲ್ಲಿ ಶಿಕ್ಷಣವನ್ನು ಕೋಮುವಾದೀಕರಣ ಮಾಡಲು ಮತ್ತು ಧ್ರುವೀಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ, ಅದು ಸ್ವೀಕಾರಾರ್ಹವಲ್ಲ” ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.


ಇದನ್ನೂ ಓದಿ: ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ ನಾಗೇಶ್ ಹೊಸ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಸರಿ ಬಣ್ಣವನ್ನು ಬಳಿಯಲೇಬೇಕು ಎಂದಿದ್ದರೆ, ಕೇಸರಿ, ಬಿಳಿ ಮತ್ತು ಹಸಿರು, ಮೂರೂ ಬಣ್ಣಗಳನ್ನು ಬಳಿಯಲಿ. ಕೇಸರಿ ಒಂದೇ ಬೇಡ.

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...