Homeಮುಖಪುಟಬೇರೆ ಯಾವ ಪಕ್ಷಕ್ಕೂ ಹಣ ನೀಡದಂತೆ ದಾನಿಗಳಿಗೆ ಬಿಜೆಪಿಯಿಂದ ಬೆದರಿಕೆ: ಗೆಹ್ಲೋಟ್‌

ಬೇರೆ ಯಾವ ಪಕ್ಷಕ್ಕೂ ಹಣ ನೀಡದಂತೆ ದಾನಿಗಳಿಗೆ ಬಿಜೆಪಿಯಿಂದ ಬೆದರಿಕೆ: ಗೆಹ್ಲೋಟ್‌

ಚುನಾವಣಾ ಬಾಂಡ್‌ಗಳ ಮೂಲಕ ಬರುವ ಒಟ್ಟು ದೇಣಿಗೆಯಲ್ಲಿ ಶೇಕಡಾ 95ರಷ್ಟು ಪಾಲನ್ನು ಬಿಜೆಪಿ ಪಡೆಯುತ್ತಿದೆ ಎಂದು ಅಶೋಕ್ ಗೆಹ್ಲೋಟ್  ಹೇಳಿದ್ದಾರೆ.

- Advertisement -
- Advertisement -

ಚುನಾವಣಾ ಬಾಂಡ್‌ಗಳ ಮೂಲಕ ಬರುವ ಒಟ್ಟು ದೇಣಿಗೆಯಲ್ಲಿ ಶೇಕಡಾ 95ರಷ್ಟು ಪಾಲನ್ನು ಬಿಜೆಪಿ ಪಡೆಯುತ್ತಿದೆ. ಏಕೆಂದರೆ ದಾನಿಗಳು ಭಯಭೀತರಾಗಿ ಇತರ ಪಕ್ಷಗಳಿಗೆ ಹಣವನ್ನು ನೀಡುತ್ತಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಹೇಳಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರದ ಭಾಗವಾಗಿ ಸೂರತ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. “ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಯಸುವ ಕಾರ್ಪೊರೇಟ್‌ಗಳಿಗೆ ಬಿಜೆಪಿಯು ಬೆದರಿಕೆ ಒಡ್ಡುತ್ತಿದೆ” ಎಂದು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನೂ ಟೀಕಿಸಿರುವ ಗೆಹ್ಲೋಟ್‌, “ತಮ್ಮ ವಿರುದ್ಧದ ಯಾವುದೇ ನಕಾರಾತ್ಮಕ ಸುದ್ದಿಗಳನ್ನು ತಡೆಹಿಡಿಯಲು ಕೇಜ್ರಿವಾಲ್‌‌ ಹಣವನ್ನು ಖರ್ಚು ಮಾಡುತ್ತಾರೆ” ಎಂದಿದ್ದಾರೆ.

“ಬೇರೆ ಪಕ್ಷಗಳಿಗೆ ದೇಣಿಗೆ ನೀಡಿದರೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ದಾನಿಗಳ ಬಾಗಿಲು ತಟ್ಟುತ್ತವೆ. ನಮ್ಮ ಪ್ರಜಾಪ್ರಭುತ್ವದಲ್ಲಿ ದೇಣಿಗೆ ಕೂಡ ಒಂದು ಪಕ್ಷಕ್ಕೆ ಮಾತ್ರ ಹೋಗುತ್ತಿದೆ. ಅವರು ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ. ದೇಶದಾದ್ಯಂತ ಪಂಚತಾರಾ ದರ್ಜೆಯಲ್ಲಿ ಪಕ್ಷದ ಕಚೇರಿಗಳನ್ನು ನಿರ್ಮಿಸಲು ಈ ಹಣವನ್ನು ಬಳಸುತ್ತಾರೆ” ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

“ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದ ನಂತರ, ಒಟ್ಟು ದೇಣಿಗೆಯ ಶೇಕಡಾ 95ರಷ್ಟು ಹಣ ಬಿಜೆಪಿಗೆ ಹೋಗುತ್ತಿದೆ. ದಾನಿಗಳು ಭಯದಿಂದ ಇತರ ಪಕ್ಷಗಳಿಗೆ ನೀಡುತ್ತಿಲ್ಲ. ದೇಣಿಗೆ ಮೂಲಕ ಸಂಗ್ರಹಿಸಿದ ಹಣದ ಸಹಾಯದಿಂದ ರಾಜ್ಯ ಸರ್ಕಾರಗಳನ್ನು ಉರುಳಿಸುವ ಮಾದರಿಯನ್ನು ಬಿಜೆಪಿ ಪರಿಚಯಿಸಿದೆ. ಅವರು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಇದನ್ನು ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ‘ಫ್ಯಾಸಿಸ್ಟ್’ ಶಕ್ತಿ ಎಂದು ಕರೆದಿರುವ ಗೆಹ್ಲೋಟ್, “ಬಿಜೆಪಿಯು ಯಾವುದೇ ನೀತಿ, ಕಾರ್ಯಕ್ರಮ ಅಥವಾ ತತ್ವಗಳ ಬದಲಿಗೆ ಧಾರ್ಮಿಕ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಗುಜರಾತ್ ಮಹಾತ್ಮಾ ಗಾಂಧೀಜಿಯವರ ನಾಡು. ಆದರೆ ಇಲ್ಲಿ ಹಿಂಸಾಚಾರ ಮತ್ತು ಅಶಾಂತಿಯ ವಾತಾವರಣವಿದೆ. ಈ ಪರಿಸ್ಥಿತಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಸಮಾಜದ ಎಲ್ಲಾ ವರ್ಗಗಳು ಬಿಜೆಪಿಯಿಂದ ಅಸಮಾಧಾನಗೊಂಡಿವೆ. ಈ ಆಡಳಿತವನ್ನು ಬದಲಾಯಿಸುವ ಸಮಯ ಬಂದಿದೆ. ಕಾಂಗ್ರೆಸ್ ಮುಂದಿನ ಸರ್ಕಾರ ರಚನೆಗೆ ಸಿದ್ಧವಾಗಿದೆ” ಎಂದು ಗುಡುಗಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಹಿರಿಯ ವೀಕ್ಷಕರಾಗಿರುವ ಗೆಹ್ಲೋಟ್, “ಎಎಪಿ ಮತ್ತು ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಹಣದ ಮೂಲಕ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕೇಜ್ರಿವಾಲ್ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೂ ಅಪಾಯಕಾರಿ. ಅವರು ತಮ್ಮ ವಿರುದ್ಧದ ಯಾವುದೇ ನಕಾರಾತ್ಮಕ ಸುದ್ದಿಗಳನ್ನು ಪ್ರಕಟಿಸದಂತೆ ಹಣವನ್ನು ಖರ್ಚು ಮಾಡುತ್ತಾರೆ. ಅವರ ಟಿವಿ ಸಂದರ್ಶನಗಳು ಸಹ ನಕಲಿ. ಕಳೆದ ಮೂರು ತಿಂಗಳ ಅವಧಿಯಲ್ಲಿ ಎಲ್ಲವೂ ಬದಲಾಗಿದೆ ಎಂಬ ವಾತಾವರಣವನ್ನು ಅವರು ಸೃಷ್ಟಿಸಿದರು. ಆದರೆ ಅದು ನಿಜವಲ್ಲ. ಈ ತಂತ್ರಗಳು ಜನರಿಗೆ ತಿಳಿದಿವೆ” ಎಂದಿದ್ದಾರೆ.

ಏನಿದು ಚುನಾವಣಾ ಬಾಂಡ್‌?

ಚುಣಾವಣಾ ಬಾಂಡ್‌ಗಳನ್ನು 2017ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣವನ್ನು ದೇಣಿಗೆ ನೀಡಲು ಬಳಸುವ ಬಡ್ಡಿ ಮುಕ್ತ ವ್ಯವಸ್ಥೆಯಾಗಿದೆ. ಇವುಗಳನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ) ನಿರ್ದಿಷ್ಟ ದಿನಗಳಂದು ವಿತರಣೆ ಮಾಡುತ್ತವೆ. ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ ಮತ್ತು ಒಂದು ಕೋಟಿ ರೂಗಳ ಚುನವಣಾ ಬಾಂಡ್‌ಗಳು ಇರುತ್ತವೆ.

2017 ರ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇದನ್ನು ಮೊದಲು ಘೋಷಿಸಿದ್ದರು. ಆರಂಭದಲ್ಲಿ, ಚುನಾವಣಾ ಬಾಂಡ್‌ಗಳು ಕಂಪನಿಗಳು ತಮ್ಮ ಗುರುತನ್ನು ಬಹಿರಂಗಪಡಿಸದೆ ದೇಣಿಗೆ ನೀಡುವ ಮಾರ್ಗವಾಗಿ ಹೊರಹೊಮ್ಮಿದ್ದವು.

ಇದನ್ನೂ ಓದಿರಿ: ಅಸೆಂಬ್ಲಿ ಎಲೆಕ್ಷನ್: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

ಆದರೆ, ಈಗ ಅನಾಮಧೇಯ ವ್ಯಕ್ತಿಗಳು, ಜನರ ಗುಂಪುಗಳು, ಎನ್‌ಜಿಒಗಳು, ಧಾರ್ಮಿಕ ಮತ್ತು ಇತರ ಟ್ರಸ್ಟ್‌ಗಳು ತಮ್ಮ ವಿವರಗಳನ್ನು ಬಹಿರಂಗಪಡಿಸದೆ ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳಿಗೆ ದೇಣಿಗೆ ನೀಡಲು ಅನುಮತಿಸಲಾಗಿದೆ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು, ಈ ಬಾಂಡ್‌‌ಗಳ ಮೂಲಕ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು 76%ರಷ್ಟು ಹಣವನ್ನು ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ.

ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ ಮೂರನೇ ಎರಡಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...