Homeಮುಖಪುಟಬೇರೆ ಯಾವ ಪಕ್ಷಕ್ಕೂ ಹಣ ನೀಡದಂತೆ ದಾನಿಗಳಿಗೆ ಬಿಜೆಪಿಯಿಂದ ಬೆದರಿಕೆ: ಗೆಹ್ಲೋಟ್‌

ಬೇರೆ ಯಾವ ಪಕ್ಷಕ್ಕೂ ಹಣ ನೀಡದಂತೆ ದಾನಿಗಳಿಗೆ ಬಿಜೆಪಿಯಿಂದ ಬೆದರಿಕೆ: ಗೆಹ್ಲೋಟ್‌

ಚುನಾವಣಾ ಬಾಂಡ್‌ಗಳ ಮೂಲಕ ಬರುವ ಒಟ್ಟು ದೇಣಿಗೆಯಲ್ಲಿ ಶೇಕಡಾ 95ರಷ್ಟು ಪಾಲನ್ನು ಬಿಜೆಪಿ ಪಡೆಯುತ್ತಿದೆ ಎಂದು ಅಶೋಕ್ ಗೆಹ್ಲೋಟ್  ಹೇಳಿದ್ದಾರೆ.

- Advertisement -
- Advertisement -

ಚುನಾವಣಾ ಬಾಂಡ್‌ಗಳ ಮೂಲಕ ಬರುವ ಒಟ್ಟು ದೇಣಿಗೆಯಲ್ಲಿ ಶೇಕಡಾ 95ರಷ್ಟು ಪಾಲನ್ನು ಬಿಜೆಪಿ ಪಡೆಯುತ್ತಿದೆ. ಏಕೆಂದರೆ ದಾನಿಗಳು ಭಯಭೀತರಾಗಿ ಇತರ ಪಕ್ಷಗಳಿಗೆ ಹಣವನ್ನು ನೀಡುತ್ತಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಹೇಳಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರದ ಭಾಗವಾಗಿ ಸೂರತ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. “ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಯಸುವ ಕಾರ್ಪೊರೇಟ್‌ಗಳಿಗೆ ಬಿಜೆಪಿಯು ಬೆದರಿಕೆ ಒಡ್ಡುತ್ತಿದೆ” ಎಂದು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನೂ ಟೀಕಿಸಿರುವ ಗೆಹ್ಲೋಟ್‌, “ತಮ್ಮ ವಿರುದ್ಧದ ಯಾವುದೇ ನಕಾರಾತ್ಮಕ ಸುದ್ದಿಗಳನ್ನು ತಡೆಹಿಡಿಯಲು ಕೇಜ್ರಿವಾಲ್‌‌ ಹಣವನ್ನು ಖರ್ಚು ಮಾಡುತ್ತಾರೆ” ಎಂದಿದ್ದಾರೆ.

“ಬೇರೆ ಪಕ್ಷಗಳಿಗೆ ದೇಣಿಗೆ ನೀಡಿದರೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ದಾನಿಗಳ ಬಾಗಿಲು ತಟ್ಟುತ್ತವೆ. ನಮ್ಮ ಪ್ರಜಾಪ್ರಭುತ್ವದಲ್ಲಿ ದೇಣಿಗೆ ಕೂಡ ಒಂದು ಪಕ್ಷಕ್ಕೆ ಮಾತ್ರ ಹೋಗುತ್ತಿದೆ. ಅವರು ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ. ದೇಶದಾದ್ಯಂತ ಪಂಚತಾರಾ ದರ್ಜೆಯಲ್ಲಿ ಪಕ್ಷದ ಕಚೇರಿಗಳನ್ನು ನಿರ್ಮಿಸಲು ಈ ಹಣವನ್ನು ಬಳಸುತ್ತಾರೆ” ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

“ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದ ನಂತರ, ಒಟ್ಟು ದೇಣಿಗೆಯ ಶೇಕಡಾ 95ರಷ್ಟು ಹಣ ಬಿಜೆಪಿಗೆ ಹೋಗುತ್ತಿದೆ. ದಾನಿಗಳು ಭಯದಿಂದ ಇತರ ಪಕ್ಷಗಳಿಗೆ ನೀಡುತ್ತಿಲ್ಲ. ದೇಣಿಗೆ ಮೂಲಕ ಸಂಗ್ರಹಿಸಿದ ಹಣದ ಸಹಾಯದಿಂದ ರಾಜ್ಯ ಸರ್ಕಾರಗಳನ್ನು ಉರುಳಿಸುವ ಮಾದರಿಯನ್ನು ಬಿಜೆಪಿ ಪರಿಚಯಿಸಿದೆ. ಅವರು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಇದನ್ನು ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ‘ಫ್ಯಾಸಿಸ್ಟ್’ ಶಕ್ತಿ ಎಂದು ಕರೆದಿರುವ ಗೆಹ್ಲೋಟ್, “ಬಿಜೆಪಿಯು ಯಾವುದೇ ನೀತಿ, ಕಾರ್ಯಕ್ರಮ ಅಥವಾ ತತ್ವಗಳ ಬದಲಿಗೆ ಧಾರ್ಮಿಕ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಗುಜರಾತ್ ಮಹಾತ್ಮಾ ಗಾಂಧೀಜಿಯವರ ನಾಡು. ಆದರೆ ಇಲ್ಲಿ ಹಿಂಸಾಚಾರ ಮತ್ತು ಅಶಾಂತಿಯ ವಾತಾವರಣವಿದೆ. ಈ ಪರಿಸ್ಥಿತಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಸಮಾಜದ ಎಲ್ಲಾ ವರ್ಗಗಳು ಬಿಜೆಪಿಯಿಂದ ಅಸಮಾಧಾನಗೊಂಡಿವೆ. ಈ ಆಡಳಿತವನ್ನು ಬದಲಾಯಿಸುವ ಸಮಯ ಬಂದಿದೆ. ಕಾಂಗ್ರೆಸ್ ಮುಂದಿನ ಸರ್ಕಾರ ರಚನೆಗೆ ಸಿದ್ಧವಾಗಿದೆ” ಎಂದು ಗುಡುಗಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಹಿರಿಯ ವೀಕ್ಷಕರಾಗಿರುವ ಗೆಹ್ಲೋಟ್, “ಎಎಪಿ ಮತ್ತು ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಹಣದ ಮೂಲಕ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕೇಜ್ರಿವಾಲ್ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೂ ಅಪಾಯಕಾರಿ. ಅವರು ತಮ್ಮ ವಿರುದ್ಧದ ಯಾವುದೇ ನಕಾರಾತ್ಮಕ ಸುದ್ದಿಗಳನ್ನು ಪ್ರಕಟಿಸದಂತೆ ಹಣವನ್ನು ಖರ್ಚು ಮಾಡುತ್ತಾರೆ. ಅವರ ಟಿವಿ ಸಂದರ್ಶನಗಳು ಸಹ ನಕಲಿ. ಕಳೆದ ಮೂರು ತಿಂಗಳ ಅವಧಿಯಲ್ಲಿ ಎಲ್ಲವೂ ಬದಲಾಗಿದೆ ಎಂಬ ವಾತಾವರಣವನ್ನು ಅವರು ಸೃಷ್ಟಿಸಿದರು. ಆದರೆ ಅದು ನಿಜವಲ್ಲ. ಈ ತಂತ್ರಗಳು ಜನರಿಗೆ ತಿಳಿದಿವೆ” ಎಂದಿದ್ದಾರೆ.

ಏನಿದು ಚುನಾವಣಾ ಬಾಂಡ್‌?

ಚುಣಾವಣಾ ಬಾಂಡ್‌ಗಳನ್ನು 2017ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣವನ್ನು ದೇಣಿಗೆ ನೀಡಲು ಬಳಸುವ ಬಡ್ಡಿ ಮುಕ್ತ ವ್ಯವಸ್ಥೆಯಾಗಿದೆ. ಇವುಗಳನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ) ನಿರ್ದಿಷ್ಟ ದಿನಗಳಂದು ವಿತರಣೆ ಮಾಡುತ್ತವೆ. ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ ಮತ್ತು ಒಂದು ಕೋಟಿ ರೂಗಳ ಚುನವಣಾ ಬಾಂಡ್‌ಗಳು ಇರುತ್ತವೆ.

2017 ರ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇದನ್ನು ಮೊದಲು ಘೋಷಿಸಿದ್ದರು. ಆರಂಭದಲ್ಲಿ, ಚುನಾವಣಾ ಬಾಂಡ್‌ಗಳು ಕಂಪನಿಗಳು ತಮ್ಮ ಗುರುತನ್ನು ಬಹಿರಂಗಪಡಿಸದೆ ದೇಣಿಗೆ ನೀಡುವ ಮಾರ್ಗವಾಗಿ ಹೊರಹೊಮ್ಮಿದ್ದವು.

ಇದನ್ನೂ ಓದಿರಿ: ಅಸೆಂಬ್ಲಿ ಎಲೆಕ್ಷನ್: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

ಆದರೆ, ಈಗ ಅನಾಮಧೇಯ ವ್ಯಕ್ತಿಗಳು, ಜನರ ಗುಂಪುಗಳು, ಎನ್‌ಜಿಒಗಳು, ಧಾರ್ಮಿಕ ಮತ್ತು ಇತರ ಟ್ರಸ್ಟ್‌ಗಳು ತಮ್ಮ ವಿವರಗಳನ್ನು ಬಹಿರಂಗಪಡಿಸದೆ ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳಿಗೆ ದೇಣಿಗೆ ನೀಡಲು ಅನುಮತಿಸಲಾಗಿದೆ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು, ಈ ಬಾಂಡ್‌‌ಗಳ ಮೂಲಕ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು 76%ರಷ್ಟು ಹಣವನ್ನು ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ.

ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ ಮೂರನೇ ಎರಡಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...