Homeಮುಖಪುಟಬೇರೆ ಯಾವ ಪಕ್ಷಕ್ಕೂ ಹಣ ನೀಡದಂತೆ ದಾನಿಗಳಿಗೆ ಬಿಜೆಪಿಯಿಂದ ಬೆದರಿಕೆ: ಗೆಹ್ಲೋಟ್‌

ಬೇರೆ ಯಾವ ಪಕ್ಷಕ್ಕೂ ಹಣ ನೀಡದಂತೆ ದಾನಿಗಳಿಗೆ ಬಿಜೆಪಿಯಿಂದ ಬೆದರಿಕೆ: ಗೆಹ್ಲೋಟ್‌

ಚುನಾವಣಾ ಬಾಂಡ್‌ಗಳ ಮೂಲಕ ಬರುವ ಒಟ್ಟು ದೇಣಿಗೆಯಲ್ಲಿ ಶೇಕಡಾ 95ರಷ್ಟು ಪಾಲನ್ನು ಬಿಜೆಪಿ ಪಡೆಯುತ್ತಿದೆ ಎಂದು ಅಶೋಕ್ ಗೆಹ್ಲೋಟ್  ಹೇಳಿದ್ದಾರೆ.

- Advertisement -
- Advertisement -

ಚುನಾವಣಾ ಬಾಂಡ್‌ಗಳ ಮೂಲಕ ಬರುವ ಒಟ್ಟು ದೇಣಿಗೆಯಲ್ಲಿ ಶೇಕಡಾ 95ರಷ್ಟು ಪಾಲನ್ನು ಬಿಜೆಪಿ ಪಡೆಯುತ್ತಿದೆ. ಏಕೆಂದರೆ ದಾನಿಗಳು ಭಯಭೀತರಾಗಿ ಇತರ ಪಕ್ಷಗಳಿಗೆ ಹಣವನ್ನು ನೀಡುತ್ತಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಹೇಳಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರದ ಭಾಗವಾಗಿ ಸೂರತ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. “ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಯಸುವ ಕಾರ್ಪೊರೇಟ್‌ಗಳಿಗೆ ಬಿಜೆಪಿಯು ಬೆದರಿಕೆ ಒಡ್ಡುತ್ತಿದೆ” ಎಂದು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನೂ ಟೀಕಿಸಿರುವ ಗೆಹ್ಲೋಟ್‌, “ತಮ್ಮ ವಿರುದ್ಧದ ಯಾವುದೇ ನಕಾರಾತ್ಮಕ ಸುದ್ದಿಗಳನ್ನು ತಡೆಹಿಡಿಯಲು ಕೇಜ್ರಿವಾಲ್‌‌ ಹಣವನ್ನು ಖರ್ಚು ಮಾಡುತ್ತಾರೆ” ಎಂದಿದ್ದಾರೆ.

“ಬೇರೆ ಪಕ್ಷಗಳಿಗೆ ದೇಣಿಗೆ ನೀಡಿದರೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ದಾನಿಗಳ ಬಾಗಿಲು ತಟ್ಟುತ್ತವೆ. ನಮ್ಮ ಪ್ರಜಾಪ್ರಭುತ್ವದಲ್ಲಿ ದೇಣಿಗೆ ಕೂಡ ಒಂದು ಪಕ್ಷಕ್ಕೆ ಮಾತ್ರ ಹೋಗುತ್ತಿದೆ. ಅವರು ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ. ದೇಶದಾದ್ಯಂತ ಪಂಚತಾರಾ ದರ್ಜೆಯಲ್ಲಿ ಪಕ್ಷದ ಕಚೇರಿಗಳನ್ನು ನಿರ್ಮಿಸಲು ಈ ಹಣವನ್ನು ಬಳಸುತ್ತಾರೆ” ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

“ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದ ನಂತರ, ಒಟ್ಟು ದೇಣಿಗೆಯ ಶೇಕಡಾ 95ರಷ್ಟು ಹಣ ಬಿಜೆಪಿಗೆ ಹೋಗುತ್ತಿದೆ. ದಾನಿಗಳು ಭಯದಿಂದ ಇತರ ಪಕ್ಷಗಳಿಗೆ ನೀಡುತ್ತಿಲ್ಲ. ದೇಣಿಗೆ ಮೂಲಕ ಸಂಗ್ರಹಿಸಿದ ಹಣದ ಸಹಾಯದಿಂದ ರಾಜ್ಯ ಸರ್ಕಾರಗಳನ್ನು ಉರುಳಿಸುವ ಮಾದರಿಯನ್ನು ಬಿಜೆಪಿ ಪರಿಚಯಿಸಿದೆ. ಅವರು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಇದನ್ನು ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ‘ಫ್ಯಾಸಿಸ್ಟ್’ ಶಕ್ತಿ ಎಂದು ಕರೆದಿರುವ ಗೆಹ್ಲೋಟ್, “ಬಿಜೆಪಿಯು ಯಾವುದೇ ನೀತಿ, ಕಾರ್ಯಕ್ರಮ ಅಥವಾ ತತ್ವಗಳ ಬದಲಿಗೆ ಧಾರ್ಮಿಕ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಗುಜರಾತ್ ಮಹಾತ್ಮಾ ಗಾಂಧೀಜಿಯವರ ನಾಡು. ಆದರೆ ಇಲ್ಲಿ ಹಿಂಸಾಚಾರ ಮತ್ತು ಅಶಾಂತಿಯ ವಾತಾವರಣವಿದೆ. ಈ ಪರಿಸ್ಥಿತಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಸಮಾಜದ ಎಲ್ಲಾ ವರ್ಗಗಳು ಬಿಜೆಪಿಯಿಂದ ಅಸಮಾಧಾನಗೊಂಡಿವೆ. ಈ ಆಡಳಿತವನ್ನು ಬದಲಾಯಿಸುವ ಸಮಯ ಬಂದಿದೆ. ಕಾಂಗ್ರೆಸ್ ಮುಂದಿನ ಸರ್ಕಾರ ರಚನೆಗೆ ಸಿದ್ಧವಾಗಿದೆ” ಎಂದು ಗುಡುಗಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಹಿರಿಯ ವೀಕ್ಷಕರಾಗಿರುವ ಗೆಹ್ಲೋಟ್, “ಎಎಪಿ ಮತ್ತು ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಹಣದ ಮೂಲಕ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕೇಜ್ರಿವಾಲ್ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೂ ಅಪಾಯಕಾರಿ. ಅವರು ತಮ್ಮ ವಿರುದ್ಧದ ಯಾವುದೇ ನಕಾರಾತ್ಮಕ ಸುದ್ದಿಗಳನ್ನು ಪ್ರಕಟಿಸದಂತೆ ಹಣವನ್ನು ಖರ್ಚು ಮಾಡುತ್ತಾರೆ. ಅವರ ಟಿವಿ ಸಂದರ್ಶನಗಳು ಸಹ ನಕಲಿ. ಕಳೆದ ಮೂರು ತಿಂಗಳ ಅವಧಿಯಲ್ಲಿ ಎಲ್ಲವೂ ಬದಲಾಗಿದೆ ಎಂಬ ವಾತಾವರಣವನ್ನು ಅವರು ಸೃಷ್ಟಿಸಿದರು. ಆದರೆ ಅದು ನಿಜವಲ್ಲ. ಈ ತಂತ್ರಗಳು ಜನರಿಗೆ ತಿಳಿದಿವೆ” ಎಂದಿದ್ದಾರೆ.

ಏನಿದು ಚುನಾವಣಾ ಬಾಂಡ್‌?

ಚುಣಾವಣಾ ಬಾಂಡ್‌ಗಳನ್ನು 2017ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣವನ್ನು ದೇಣಿಗೆ ನೀಡಲು ಬಳಸುವ ಬಡ್ಡಿ ಮುಕ್ತ ವ್ಯವಸ್ಥೆಯಾಗಿದೆ. ಇವುಗಳನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ) ನಿರ್ದಿಷ್ಟ ದಿನಗಳಂದು ವಿತರಣೆ ಮಾಡುತ್ತವೆ. ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ ಮತ್ತು ಒಂದು ಕೋಟಿ ರೂಗಳ ಚುನವಣಾ ಬಾಂಡ್‌ಗಳು ಇರುತ್ತವೆ.

2017 ರ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇದನ್ನು ಮೊದಲು ಘೋಷಿಸಿದ್ದರು. ಆರಂಭದಲ್ಲಿ, ಚುನಾವಣಾ ಬಾಂಡ್‌ಗಳು ಕಂಪನಿಗಳು ತಮ್ಮ ಗುರುತನ್ನು ಬಹಿರಂಗಪಡಿಸದೆ ದೇಣಿಗೆ ನೀಡುವ ಮಾರ್ಗವಾಗಿ ಹೊರಹೊಮ್ಮಿದ್ದವು.

ಇದನ್ನೂ ಓದಿರಿ: ಅಸೆಂಬ್ಲಿ ಎಲೆಕ್ಷನ್: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

ಆದರೆ, ಈಗ ಅನಾಮಧೇಯ ವ್ಯಕ್ತಿಗಳು, ಜನರ ಗುಂಪುಗಳು, ಎನ್‌ಜಿಒಗಳು, ಧಾರ್ಮಿಕ ಮತ್ತು ಇತರ ಟ್ರಸ್ಟ್‌ಗಳು ತಮ್ಮ ವಿವರಗಳನ್ನು ಬಹಿರಂಗಪಡಿಸದೆ ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳಿಗೆ ದೇಣಿಗೆ ನೀಡಲು ಅನುಮತಿಸಲಾಗಿದೆ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು, ಈ ಬಾಂಡ್‌‌ಗಳ ಮೂಲಕ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು 76%ರಷ್ಟು ಹಣವನ್ನು ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ.

ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ ಮೂರನೇ ಎರಡಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...