Homeಮುಖಪುಟಬೇರೆ ಯಾವ ಪಕ್ಷಕ್ಕೂ ಹಣ ನೀಡದಂತೆ ದಾನಿಗಳಿಗೆ ಬಿಜೆಪಿಯಿಂದ ಬೆದರಿಕೆ: ಗೆಹ್ಲೋಟ್‌

ಬೇರೆ ಯಾವ ಪಕ್ಷಕ್ಕೂ ಹಣ ನೀಡದಂತೆ ದಾನಿಗಳಿಗೆ ಬಿಜೆಪಿಯಿಂದ ಬೆದರಿಕೆ: ಗೆಹ್ಲೋಟ್‌

ಚುನಾವಣಾ ಬಾಂಡ್‌ಗಳ ಮೂಲಕ ಬರುವ ಒಟ್ಟು ದೇಣಿಗೆಯಲ್ಲಿ ಶೇಕಡಾ 95ರಷ್ಟು ಪಾಲನ್ನು ಬಿಜೆಪಿ ಪಡೆಯುತ್ತಿದೆ ಎಂದು ಅಶೋಕ್ ಗೆಹ್ಲೋಟ್  ಹೇಳಿದ್ದಾರೆ.

- Advertisement -
- Advertisement -

ಚುನಾವಣಾ ಬಾಂಡ್‌ಗಳ ಮೂಲಕ ಬರುವ ಒಟ್ಟು ದೇಣಿಗೆಯಲ್ಲಿ ಶೇಕಡಾ 95ರಷ್ಟು ಪಾಲನ್ನು ಬಿಜೆಪಿ ಪಡೆಯುತ್ತಿದೆ. ಏಕೆಂದರೆ ದಾನಿಗಳು ಭಯಭೀತರಾಗಿ ಇತರ ಪಕ್ಷಗಳಿಗೆ ಹಣವನ್ನು ನೀಡುತ್ತಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಹೇಳಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರದ ಭಾಗವಾಗಿ ಸೂರತ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. “ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಬಯಸುವ ಕಾರ್ಪೊರೇಟ್‌ಗಳಿಗೆ ಬಿಜೆಪಿಯು ಬೆದರಿಕೆ ಒಡ್ಡುತ್ತಿದೆ” ಎಂದು ದೂರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನೂ ಟೀಕಿಸಿರುವ ಗೆಹ್ಲೋಟ್‌, “ತಮ್ಮ ವಿರುದ್ಧದ ಯಾವುದೇ ನಕಾರಾತ್ಮಕ ಸುದ್ದಿಗಳನ್ನು ತಡೆಹಿಡಿಯಲು ಕೇಜ್ರಿವಾಲ್‌‌ ಹಣವನ್ನು ಖರ್ಚು ಮಾಡುತ್ತಾರೆ” ಎಂದಿದ್ದಾರೆ.

“ಬೇರೆ ಪಕ್ಷಗಳಿಗೆ ದೇಣಿಗೆ ನೀಡಿದರೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ದಾನಿಗಳ ಬಾಗಿಲು ತಟ್ಟುತ್ತವೆ. ನಮ್ಮ ಪ್ರಜಾಪ್ರಭುತ್ವದಲ್ಲಿ ದೇಣಿಗೆ ಕೂಡ ಒಂದು ಪಕ್ಷಕ್ಕೆ ಮಾತ್ರ ಹೋಗುತ್ತಿದೆ. ಅವರು ಕೋಟ್ಯಂತರ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ. ದೇಶದಾದ್ಯಂತ ಪಂಚತಾರಾ ದರ್ಜೆಯಲ್ಲಿ ಪಕ್ಷದ ಕಚೇರಿಗಳನ್ನು ನಿರ್ಮಿಸಲು ಈ ಹಣವನ್ನು ಬಳಸುತ್ತಾರೆ” ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

“ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದ ನಂತರ, ಒಟ್ಟು ದೇಣಿಗೆಯ ಶೇಕಡಾ 95ರಷ್ಟು ಹಣ ಬಿಜೆಪಿಗೆ ಹೋಗುತ್ತಿದೆ. ದಾನಿಗಳು ಭಯದಿಂದ ಇತರ ಪಕ್ಷಗಳಿಗೆ ನೀಡುತ್ತಿಲ್ಲ. ದೇಣಿಗೆ ಮೂಲಕ ಸಂಗ್ರಹಿಸಿದ ಹಣದ ಸಹಾಯದಿಂದ ರಾಜ್ಯ ಸರ್ಕಾರಗಳನ್ನು ಉರುಳಿಸುವ ಮಾದರಿಯನ್ನು ಬಿಜೆಪಿ ಪರಿಚಯಿಸಿದೆ. ಅವರು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಇದನ್ನು ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ‘ಫ್ಯಾಸಿಸ್ಟ್’ ಶಕ್ತಿ ಎಂದು ಕರೆದಿರುವ ಗೆಹ್ಲೋಟ್, “ಬಿಜೆಪಿಯು ಯಾವುದೇ ನೀತಿ, ಕಾರ್ಯಕ್ರಮ ಅಥವಾ ತತ್ವಗಳ ಬದಲಿಗೆ ಧಾರ್ಮಿಕ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಗುಜರಾತ್ ಮಹಾತ್ಮಾ ಗಾಂಧೀಜಿಯವರ ನಾಡು. ಆದರೆ ಇಲ್ಲಿ ಹಿಂಸಾಚಾರ ಮತ್ತು ಅಶಾಂತಿಯ ವಾತಾವರಣವಿದೆ. ಈ ಪರಿಸ್ಥಿತಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ. ಸಮಾಜದ ಎಲ್ಲಾ ವರ್ಗಗಳು ಬಿಜೆಪಿಯಿಂದ ಅಸಮಾಧಾನಗೊಂಡಿವೆ. ಈ ಆಡಳಿತವನ್ನು ಬದಲಾಯಿಸುವ ಸಮಯ ಬಂದಿದೆ. ಕಾಂಗ್ರೆಸ್ ಮುಂದಿನ ಸರ್ಕಾರ ರಚನೆಗೆ ಸಿದ್ಧವಾಗಿದೆ” ಎಂದು ಗುಡುಗಿದ್ದಾರೆ.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ಹಿರಿಯ ವೀಕ್ಷಕರಾಗಿರುವ ಗೆಹ್ಲೋಟ್, “ಎಎಪಿ ಮತ್ತು ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಹಣದ ಮೂಲಕ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕೇಜ್ರಿವಾಲ್ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೂ ಅಪಾಯಕಾರಿ. ಅವರು ತಮ್ಮ ವಿರುದ್ಧದ ಯಾವುದೇ ನಕಾರಾತ್ಮಕ ಸುದ್ದಿಗಳನ್ನು ಪ್ರಕಟಿಸದಂತೆ ಹಣವನ್ನು ಖರ್ಚು ಮಾಡುತ್ತಾರೆ. ಅವರ ಟಿವಿ ಸಂದರ್ಶನಗಳು ಸಹ ನಕಲಿ. ಕಳೆದ ಮೂರು ತಿಂಗಳ ಅವಧಿಯಲ್ಲಿ ಎಲ್ಲವೂ ಬದಲಾಗಿದೆ ಎಂಬ ವಾತಾವರಣವನ್ನು ಅವರು ಸೃಷ್ಟಿಸಿದರು. ಆದರೆ ಅದು ನಿಜವಲ್ಲ. ಈ ತಂತ್ರಗಳು ಜನರಿಗೆ ತಿಳಿದಿವೆ” ಎಂದಿದ್ದಾರೆ.

ಏನಿದು ಚುನಾವಣಾ ಬಾಂಡ್‌?

ಚುಣಾವಣಾ ಬಾಂಡ್‌ಗಳನ್ನು 2017ರ ಒಕ್ಕೂಟ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಈ ಚುನಾವಣಾ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣವನ್ನು ದೇಣಿಗೆ ನೀಡಲು ಬಳಸುವ ಬಡ್ಡಿ ಮುಕ್ತ ವ್ಯವಸ್ಥೆಯಾಗಿದೆ. ಇವುಗಳನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌(ಎಸ್‌ಬಿಐ) ನಿರ್ದಿಷ್ಟ ದಿನಗಳಂದು ವಿತರಣೆ ಮಾಡುತ್ತವೆ. ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ ಮತ್ತು ಒಂದು ಕೋಟಿ ರೂಗಳ ಚುನವಣಾ ಬಾಂಡ್‌ಗಳು ಇರುತ್ತವೆ.

2017 ರ ಬಜೆಟ್ ಭಾಷಣದಲ್ಲಿ ಆಗಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇದನ್ನು ಮೊದಲು ಘೋಷಿಸಿದ್ದರು. ಆರಂಭದಲ್ಲಿ, ಚುನಾವಣಾ ಬಾಂಡ್‌ಗಳು ಕಂಪನಿಗಳು ತಮ್ಮ ಗುರುತನ್ನು ಬಹಿರಂಗಪಡಿಸದೆ ದೇಣಿಗೆ ನೀಡುವ ಮಾರ್ಗವಾಗಿ ಹೊರಹೊಮ್ಮಿದ್ದವು.

ಇದನ್ನೂ ಓದಿರಿ: ಅಸೆಂಬ್ಲಿ ಎಲೆಕ್ಷನ್: ಚುನಾವಣಾ ಬಾಂಡ್ ತಡೆಗೆ ಸುಪ್ರೀಂಗೆ ಅರ್ಜಿ

ಆದರೆ, ಈಗ ಅನಾಮಧೇಯ ವ್ಯಕ್ತಿಗಳು, ಜನರ ಗುಂಪುಗಳು, ಎನ್‌ಜಿಒಗಳು, ಧಾರ್ಮಿಕ ಮತ್ತು ಇತರ ಟ್ರಸ್ಟ್‌ಗಳು ತಮ್ಮ ವಿವರಗಳನ್ನು ಬಹಿರಂಗಪಡಿಸದೆ ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳಿಗೆ ದೇಣಿಗೆ ನೀಡಲು ಅನುಮತಿಸಲಾಗಿದೆ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು, ಈ ಬಾಂಡ್‌‌ಗಳ ಮೂಲಕ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು 76%ರಷ್ಟು ಹಣವನ್ನು ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ.

ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ ಮೂರನೇ ಎರಡಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...