Homeಕರ್ನಾಟಕಅನರ್ಹ ಶಾಸಕರಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ

ಅನರ್ಹ ಶಾಸಕರಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ

- Advertisement -
- Advertisement -

ಸುಪ್ರೀಂಕೋರ್ಟ್‌ ತೀರ್ಪಿಗಾಗಿ ಕಾಯುತ್ತಿರುವ ಅನರ್ಹ ಶಾಸಕರಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಲಕ್ಷ್ಮಣ್‌ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನೇನು ಉಪಚುನಾವಣೆ ದಿನಗಳು ಹತ್ತಿರವಾಗುತ್ತಿವೆ. ಈಗಾಗಲೇ ಬಿಜೆಪಿಯಲ್ಲಿ ಒಳಬೇಗುದಿ, ಅಸಮಾಧಾನ, ಟಿಕೆಟ್‌ಗಾಗಿ ಕಚ್ಚಾಟ ಶುರುವಾಗಿದೆ. ಅಲ್ಲದೇ ಅನರ್ಹ ಶಾಸಕರಿಗೆ ಟಿಕೆಟ್‌ ನೀಡುತ್ತಿರುವ ಬಗ್ಗೆ ಮೂಲ ಬಿಜೆಪಿಗರು, ಸ್ಥಳೀಯ ಮುಖಂಡರು ಸಿಟ್ಟಾಗಿದ್ದಾರೆ. ಇದರ ಮಧ್ಯೆ ತಮ್ಮ ಭವಿಷ್ಯ ಏನಾಗುತ್ತದೆಯೋ ಎಂಬ ಚಿಂತೆ ಅನರ್ಹ ಶಾಸಕರನ್ನು ಆವರಿಸಿದೆ. ಈಗ ಬಿಜೆಪಿಗೂ, ಅನರ್ಹ ಶಾಸಕರಿಗೂ ಸಂಬಂಧವೇ ಇಲ್ಲ ಎಂದು ಲಕ್ಷ್ಮಣ್‌ ಸವದಿ ಹೇಳುತ್ತಿದ್ದಾರೆ.

ಸುಪ್ರೀಂಕೋರ್ಟ್‌‌ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಸವದಿ ಹೊಸ ಬಾಂಬ್‌ ಹಾಕಿದ್ದಾರೆ. ಅನರ್ಹ ಶಾಸಕರ ಬಗ್ಗೆ ಚಿಂತೆ ಮಾಡುವ ಅಗತ್ಯತೆ ನಮಗಿಲ್ಲ. ಅವರ ಬಗ್ಗೆ ನಾವೇಕೆ ಚಿಂತನೆ ಮಾಡಬೇಕು. ಅನರ್ಹ ಶಾಸಕರ ಬಗ್ಗೆ ಆಲೋಚನೆ ಮಾಡುವ ಅವಶ್ಯಕತೆಯಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಅನರ್ಹ ಶಾಸಕರು ಬಿಜೆಪಿಗೆ ಸೇರುತ್ತೇವೆ ಎಂದು ಎಲ್ಲೂ ಹೇಳಿಕೆ ನೀಡಿಲ್ಲ. ಸ್ಪೀಕರ್‌ ಅವರನ್ನು ಅನರ್ಹಗೊಳಿಸಿದ್ದಕ್ಕೆ ಸುಪ್ರೀಂಕೋರ್ಟ್‌‌ಗೆ ನ್ಯಾಯಕ್ಕಾಗಿ ಮೊರೆ ಹೋಗಿದ್ದಾರೆ. ಇತ್ತ ಕಾಂಗ್ರೆಸ್‌ ಕೂಡ ನ್ಯಾಯ ಬೇಕೆಂದು ಕೇಳುತ್ತಿದೆ. ಇದು ಅನರ್ಹ ಶಾಸಕರು ಮತ್ತು ಕಾಂಗ್ರೆಸ್‌ ನಡುವಿನ ತಿಕ್ಕಾಟ ಮತ್ತು ವ್ಯಾಜ್ಯ. ಇದಕ್ಕೂ ನಮಗೂ ಸಂಬಂಧವಿಲ್ಲ. ಇದಕ್ಕೆ ನಾವ್ಯಾಕೆ ಉತ್ತರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಇಲ್ಲಿಯವರೆಗೂ ಬಿಜೆಪಿಗೂ ಮತ್ತು ಅನರ್ಹ ಶಾಸಕರಿಗೂ ಸಂಬಂಧವಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಹೇಳಿದ್ದು, ಎಲ್ಲರ ಗಮನ ಸೆಳೆದಿದೆ. ಅಧಿಕಾರಕ್ಕಾಗಿ ನಡೆದ ಹಗ್ಗಜಗ್ಗಾಟದಲ್ಲಿ ಅನರ್ಹ ಶಾಸಕರ ಸ್ಥಿತಿ ಅತಂತ್ರವಾಗಿದ್ದು, ಈಗ ಡಿಸಿಎಂ ಸವದಿ ಹೇಳಿಕೆ ಅನರ್ಹ ಶಾಸಕರಿಗೆ ಶಾಕ್‌ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮಗೆ ಬಂದಿರುವ ಅಧಿಕಾರ ಅನರ್ಹ ಶಾಸಕರ ಆಶಿರ್ವಾದ ಹೊರತು ಬಿಜೆಪಿ ಪಕ್ಷದ
    ಯೋಗ್ಯತೆಯಲ್ಲ,,ಸ್ವಲ್ಪ ದಿನ ಕಾಯಿರಿ ಅವರ ನಿಮ್ಮ ಸಂಬಂಧ ಎನು ಎನ್ನುವುದು ಬಯಲಾಗುತ್ತದೆ….

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...