Homeಕರ್ನಾಟಕಅನರ್ಹ ಶಾಸಕರಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ

ಅನರ್ಹ ಶಾಸಕರಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಲಕ್ಷ್ಮಣ್ ಸವದಿ

- Advertisement -
- Advertisement -

ಸುಪ್ರೀಂಕೋರ್ಟ್‌ ತೀರ್ಪಿಗಾಗಿ ಕಾಯುತ್ತಿರುವ ಅನರ್ಹ ಶಾಸಕರಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಲಕ್ಷ್ಮಣ್‌ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನೇನು ಉಪಚುನಾವಣೆ ದಿನಗಳು ಹತ್ತಿರವಾಗುತ್ತಿವೆ. ಈಗಾಗಲೇ ಬಿಜೆಪಿಯಲ್ಲಿ ಒಳಬೇಗುದಿ, ಅಸಮಾಧಾನ, ಟಿಕೆಟ್‌ಗಾಗಿ ಕಚ್ಚಾಟ ಶುರುವಾಗಿದೆ. ಅಲ್ಲದೇ ಅನರ್ಹ ಶಾಸಕರಿಗೆ ಟಿಕೆಟ್‌ ನೀಡುತ್ತಿರುವ ಬಗ್ಗೆ ಮೂಲ ಬಿಜೆಪಿಗರು, ಸ್ಥಳೀಯ ಮುಖಂಡರು ಸಿಟ್ಟಾಗಿದ್ದಾರೆ. ಇದರ ಮಧ್ಯೆ ತಮ್ಮ ಭವಿಷ್ಯ ಏನಾಗುತ್ತದೆಯೋ ಎಂಬ ಚಿಂತೆ ಅನರ್ಹ ಶಾಸಕರನ್ನು ಆವರಿಸಿದೆ. ಈಗ ಬಿಜೆಪಿಗೂ, ಅನರ್ಹ ಶಾಸಕರಿಗೂ ಸಂಬಂಧವೇ ಇಲ್ಲ ಎಂದು ಲಕ್ಷ್ಮಣ್‌ ಸವದಿ ಹೇಳುತ್ತಿದ್ದಾರೆ.

ಸುಪ್ರೀಂಕೋರ್ಟ್‌‌ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಸವದಿ ಹೊಸ ಬಾಂಬ್‌ ಹಾಕಿದ್ದಾರೆ. ಅನರ್ಹ ಶಾಸಕರ ಬಗ್ಗೆ ಚಿಂತೆ ಮಾಡುವ ಅಗತ್ಯತೆ ನಮಗಿಲ್ಲ. ಅವರ ಬಗ್ಗೆ ನಾವೇಕೆ ಚಿಂತನೆ ಮಾಡಬೇಕು. ಅನರ್ಹ ಶಾಸಕರ ಬಗ್ಗೆ ಆಲೋಚನೆ ಮಾಡುವ ಅವಶ್ಯಕತೆಯಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಅನರ್ಹ ಶಾಸಕರು ಬಿಜೆಪಿಗೆ ಸೇರುತ್ತೇವೆ ಎಂದು ಎಲ್ಲೂ ಹೇಳಿಕೆ ನೀಡಿಲ್ಲ. ಸ್ಪೀಕರ್‌ ಅವರನ್ನು ಅನರ್ಹಗೊಳಿಸಿದ್ದಕ್ಕೆ ಸುಪ್ರೀಂಕೋರ್ಟ್‌‌ಗೆ ನ್ಯಾಯಕ್ಕಾಗಿ ಮೊರೆ ಹೋಗಿದ್ದಾರೆ. ಇತ್ತ ಕಾಂಗ್ರೆಸ್‌ ಕೂಡ ನ್ಯಾಯ ಬೇಕೆಂದು ಕೇಳುತ್ತಿದೆ. ಇದು ಅನರ್ಹ ಶಾಸಕರು ಮತ್ತು ಕಾಂಗ್ರೆಸ್‌ ನಡುವಿನ ತಿಕ್ಕಾಟ ಮತ್ತು ವ್ಯಾಜ್ಯ. ಇದಕ್ಕೂ ನಮಗೂ ಸಂಬಂಧವಿಲ್ಲ. ಇದಕ್ಕೆ ನಾವ್ಯಾಕೆ ಉತ್ತರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಇಲ್ಲಿಯವರೆಗೂ ಬಿಜೆಪಿಗೂ ಮತ್ತು ಅನರ್ಹ ಶಾಸಕರಿಗೂ ಸಂಬಂಧವಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಹೇಳಿದ್ದು, ಎಲ್ಲರ ಗಮನ ಸೆಳೆದಿದೆ. ಅಧಿಕಾರಕ್ಕಾಗಿ ನಡೆದ ಹಗ್ಗಜಗ್ಗಾಟದಲ್ಲಿ ಅನರ್ಹ ಶಾಸಕರ ಸ್ಥಿತಿ ಅತಂತ್ರವಾಗಿದ್ದು, ಈಗ ಡಿಸಿಎಂ ಸವದಿ ಹೇಳಿಕೆ ಅನರ್ಹ ಶಾಸಕರಿಗೆ ಶಾಕ್‌ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮಗೆ ಬಂದಿರುವ ಅಧಿಕಾರ ಅನರ್ಹ ಶಾಸಕರ ಆಶಿರ್ವಾದ ಹೊರತು ಬಿಜೆಪಿ ಪಕ್ಷದ
    ಯೋಗ್ಯತೆಯಲ್ಲ,,ಸ್ವಲ್ಪ ದಿನ ಕಾಯಿರಿ ಅವರ ನಿಮ್ಮ ಸಂಬಂಧ ಎನು ಎನ್ನುವುದು ಬಯಲಾಗುತ್ತದೆ….

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...