Homeಮುಖಪುಟಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

ಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

- Advertisement -
- Advertisement -

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಸುಂಕವನ್ನು ಕಡಿಮೆ ಮಾಡುವಂತೆ ರಾಜ್ಯಗಳನ್ನು ಕೇಳಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ಅನ್ನು ತೆಗೆದುಹಾಕುವಂತೆ ಕೇಂದ್ರದ ಎನ್‌ಡಿಎ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಟಿಆರ್‌ಎಸ್ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್ ಹೆಚ್ಚಿಸಿಲ್ಲ, ಆದ್ದರಿಂದ ಇಳಿಕೆ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದಿದ್ದಾರೆ.

’ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಅನ್ನು ಹಿಂಪಡೆಯುವವರೆಗೆ ನಾವು ನಿಮಗೆ ವಿಶ್ರಾಂತಿ ತೆಗೆದುಕೊಳ್ಳಲು ಬಿಡುವುದಿಲ್ಲ. ತೆಲಂಗಾಣದಲ್ಲಿ ಬೆಳೆದ ಭತ್ತವನ್ನು ಕೇಂದ್ರವೇ ಸಂಪೂರ್ಣವಾಗಿ ಖರೀದಿಸಬೇಕು. ರಾಜ್ಯ ಬಿಜೆಪಿ ನಾಯಕರು ಪೊಳ್ಳು ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ, ಈ ಬೇಡಿಕೆಗಳನ್ನು ಕೇಂದ್ರವು ಒಪ್ಪುವಂತೆ ಮಾಡಬೇಕು’ ಎಂದು ಕೆಸಿಆರ್ ಹೇಳಿದರು.

‘ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಗಳು ಕಡಿಮೆ ಇದ್ದರೂ, ಕೇಂದ್ರವು ಸೆಸ್ ಹೆಸರಿನಲ್ಲಿ ಇಂಧನ ಬೆಲೆಗಳನ್ನು ಹೆಚ್ಚಿಸಿ ಸಾಮಾನ್ಯ ಜನರಿಗೆ ಹೊರೆಯಾಗಿದೆ. 2014 ರ ನಂತರ ಅಂತರರಾಷ್ಟ್ರೀಯ ಬೆಲೆಗಳು ಪ್ರತಿ ಬ್ಯಾರೆಲ್‌ಗೆ $ 105 ಅನ್ನು ಮುಟ್ಟಲಿಲ್ಲ, ಆದರೆ ಕೇಂದ್ರವು ಬೆಲೆಗಳನ್ನು ಹೆಚ್ಚಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

’ನಾವು ಸುಂಕವನ್ನು ಒಂದು ಪೈಸೆ ಕೂಡ ಹೆಚ್ಚಿಸಿಲ್ಲ. ಹಾಗಾಗಿ ಕಡಿತದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಟಿಆರ್‌ಎಸ್ ಸರ್ಕಾರ ಬಂದಾಗಿನಿಂದಲೂ ಸುಂಕ ಹೆಚ್ಚಿಸಿಲ್ಲ. ಯಾವ ಮೂರ್ಖ ನಮ್ಮನ್ನು ಸುಂಕ  ಕಡಿಮೆ ಮಾಡಲು ಕೇಳುತ್ತಾನೆ? ಯಾರು ಬೆಲೆ ಹೆಚ್ಚಿಸಿದರೋ ಅವರೇ ಅದನ್ನು ಕಡಿಮೆ ಮಾಡಬೇಕಾಗುತ್ತದೆ’ ಎಂದು ಕೆಸಿಆರ್ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

‘ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸಿರುವ ಒಟ್ಟು ಸೆಸ್ ಅನ್ನು ತೆಗೆದುಹಾಕುವಂತೆ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಏಕೆಂದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಸರ್ಕಾರವು ಅನಗತ್ಯವಾಗಿ ಸೆಸ್ ವಿಧಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಹೊರೆಯಾಗುತ್ತಿದೆ. ದೇಶದ ಬಡ ಜನರ ಬಗ್ಗೆ ಸರ್ಕಾರವು ಪ್ರಾಮಾಣಿಕವಾಗಿದ್ದರೆ, ಅದು ಒಟ್ಟು ಸೆಸ್ ಅನ್ನು ಹಿಂಪಡೆಯಬೇಕು… ’ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

2014 ರಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲ ಬ್ಯಾರೆಲ್‌ಗೆ 100 ಡಾಲರ್ ಮೇಲಿತ್ತು. ಆಗ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 9.48 ರೂ ಮತ್ತು ಡೀಸೆಲ್ ಮೇಲೆ 3.56 ರೂ ಅಬಕಾರಿ ಶುಂಕ ವಿಧಿಸುತ್ತಿತ್ತು. ಈಗ 2021 ಕಚ್ಚಾ ತೈಲದ ಬ್ಯಾರೆಲ್‌ಗೆ 80 ಡಾಲರ್ ಆಸುಪಾಸಿನಲ್ಲಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 32.90 ರೂ ಮತ್ತ ಡೀಸೆಲ್ ಮೇಲೆ 31.80 ರೂ ತೆರಿಗೆ ವಿಧಿಸುತ್ತಿದೆ. ದೀಪಾವಳಿ ದಿನ ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 5 ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ.

ತೆಲಂಗಾಣದಲ್ಲಿ ಭತ್ತದ ವಿವಾದ

ಕೇಂದ್ರವು ಭತ್ತವನ್ನು ಖರೀದಿಸಲು ಹಿಂದೇಟು ಹಾಕುತ್ತಿರುವುದರಿಂದ ತೆಲಂಗಾಣ ಸರ್ಕಾರವು ಕಳೆದ ಕೆಲವು ದಿನಗಳಿಂದ ಈ ಋತುವಿನಲ್ಲಿ ಭತ್ತದ ಕೃಷಿಗೆ ಮಾಡದಂತೆ ರೈತರನ್ನು ವಿನಂತಿಸುತ್ತಿದೆ.

ಹಿಂಗಾರು ಋತುವಿನಲ್ಲಿ ಭತ್ತದ ಕೃಷಿ ಮಾಡದಂತೆ ರಾಜ್ಯ ರೈತರನ್ನು ನಿರುತ್ಸಾಹಗೊಳಿಸುತ್ತಿರುವ ಟಿಆರ್‌ಎಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಆಂದೋಲನ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದ್ದರಿಂದ ರಾಜ್ಯದ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಕೆಸಿಆರ್‌, ‘ಕೇಂದ್ರವು ಭತ್ತವನ್ನು ಖರೀದಿಸಲು ಸಿದ್ದವಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂಸತ್ತಿನಲ್ಲಿ ಭತ್ತ ಸಂಗ್ರಹಣೆ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸುತ್ತೇವೆ. ಜಿಲ್ಲೆಗಳಲ್ಲಿ ಧರಣಿ ನಡೆಸುತ್ತೇವೆ. ಮತ್ತು ಅಗತ್ಯವಿದ್ದರೆ ಮುಖ್ಯಮಂತ್ರಿ ಸೇರಿದಂತೆ ತೆಲಂಗಾಣದ ಸಂಸದರು, ಶಾಸಕರು, ಎಂಎಲ್‌ಸಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಕೆಸಿಆರ್ ಹೇಳಿದರು.

‘ಕೇಂದ್ರದ ಮೂರು ಕೃಷಿ ಕಾನೂನುಗಳ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಕೆಆರ್‌ಎಸ್‌ ಪಕ್ಷವು ಬೆಂಬಲಿಸುತ್ತದೆ. ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವವರೆಗೂ ಕೇಂದ್ರವನ್ನು ವಿಶ್ರಾಂತಿ ಪಡೆಯಲು ಬಿಡುವುದಿಲ್ಲ’ ಎಂದರು.


ಇದನ್ನೂ ಓದಿ: ಪೆಟ್ರೋಲ್ ಬೆಲೆಯಲ್ಲಿ 10 ರೂ ಕಡಿತಗೊಳಿಸಿದ ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...