Homeಮುಖಪುಟಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

ಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

- Advertisement -
- Advertisement -

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಸುಂಕವನ್ನು ಕಡಿಮೆ ಮಾಡುವಂತೆ ರಾಜ್ಯಗಳನ್ನು ಕೇಳಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ಅನ್ನು ತೆಗೆದುಹಾಕುವಂತೆ ಕೇಂದ್ರದ ಎನ್‌ಡಿಎ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಟಿಆರ್‌ಎಸ್ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್ ಹೆಚ್ಚಿಸಿಲ್ಲ, ಆದ್ದರಿಂದ ಇಳಿಕೆ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದಿದ್ದಾರೆ.

’ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಅನ್ನು ಹಿಂಪಡೆಯುವವರೆಗೆ ನಾವು ನಿಮಗೆ ವಿಶ್ರಾಂತಿ ತೆಗೆದುಕೊಳ್ಳಲು ಬಿಡುವುದಿಲ್ಲ. ತೆಲಂಗಾಣದಲ್ಲಿ ಬೆಳೆದ ಭತ್ತವನ್ನು ಕೇಂದ್ರವೇ ಸಂಪೂರ್ಣವಾಗಿ ಖರೀದಿಸಬೇಕು. ರಾಜ್ಯ ಬಿಜೆಪಿ ನಾಯಕರು ಪೊಳ್ಳು ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ, ಈ ಬೇಡಿಕೆಗಳನ್ನು ಕೇಂದ್ರವು ಒಪ್ಪುವಂತೆ ಮಾಡಬೇಕು’ ಎಂದು ಕೆಸಿಆರ್ ಹೇಳಿದರು.

‘ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಗಳು ಕಡಿಮೆ ಇದ್ದರೂ, ಕೇಂದ್ರವು ಸೆಸ್ ಹೆಸರಿನಲ್ಲಿ ಇಂಧನ ಬೆಲೆಗಳನ್ನು ಹೆಚ್ಚಿಸಿ ಸಾಮಾನ್ಯ ಜನರಿಗೆ ಹೊರೆಯಾಗಿದೆ. 2014 ರ ನಂತರ ಅಂತರರಾಷ್ಟ್ರೀಯ ಬೆಲೆಗಳು ಪ್ರತಿ ಬ್ಯಾರೆಲ್‌ಗೆ $ 105 ಅನ್ನು ಮುಟ್ಟಲಿಲ್ಲ, ಆದರೆ ಕೇಂದ್ರವು ಬೆಲೆಗಳನ್ನು ಹೆಚ್ಚಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

’ನಾವು ಸುಂಕವನ್ನು ಒಂದು ಪೈಸೆ ಕೂಡ ಹೆಚ್ಚಿಸಿಲ್ಲ. ಹಾಗಾಗಿ ಕಡಿತದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಟಿಆರ್‌ಎಸ್ ಸರ್ಕಾರ ಬಂದಾಗಿನಿಂದಲೂ ಸುಂಕ ಹೆಚ್ಚಿಸಿಲ್ಲ. ಯಾವ ಮೂರ್ಖ ನಮ್ಮನ್ನು ಸುಂಕ  ಕಡಿಮೆ ಮಾಡಲು ಕೇಳುತ್ತಾನೆ? ಯಾರು ಬೆಲೆ ಹೆಚ್ಚಿಸಿದರೋ ಅವರೇ ಅದನ್ನು ಕಡಿಮೆ ಮಾಡಬೇಕಾಗುತ್ತದೆ’ ಎಂದು ಕೆಸಿಆರ್ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

‘ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸಿರುವ ಒಟ್ಟು ಸೆಸ್ ಅನ್ನು ತೆಗೆದುಹಾಕುವಂತೆ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಏಕೆಂದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಸರ್ಕಾರವು ಅನಗತ್ಯವಾಗಿ ಸೆಸ್ ವಿಧಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಹೊರೆಯಾಗುತ್ತಿದೆ. ದೇಶದ ಬಡ ಜನರ ಬಗ್ಗೆ ಸರ್ಕಾರವು ಪ್ರಾಮಾಣಿಕವಾಗಿದ್ದರೆ, ಅದು ಒಟ್ಟು ಸೆಸ್ ಅನ್ನು ಹಿಂಪಡೆಯಬೇಕು… ’ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

2014 ರಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲ ಬ್ಯಾರೆಲ್‌ಗೆ 100 ಡಾಲರ್ ಮೇಲಿತ್ತು. ಆಗ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 9.48 ರೂ ಮತ್ತು ಡೀಸೆಲ್ ಮೇಲೆ 3.56 ರೂ ಅಬಕಾರಿ ಶುಂಕ ವಿಧಿಸುತ್ತಿತ್ತು. ಈಗ 2021 ಕಚ್ಚಾ ತೈಲದ ಬ್ಯಾರೆಲ್‌ಗೆ 80 ಡಾಲರ್ ಆಸುಪಾಸಿನಲ್ಲಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 32.90 ರೂ ಮತ್ತ ಡೀಸೆಲ್ ಮೇಲೆ 31.80 ರೂ ತೆರಿಗೆ ವಿಧಿಸುತ್ತಿದೆ. ದೀಪಾವಳಿ ದಿನ ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 5 ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ.

ತೆಲಂಗಾಣದಲ್ಲಿ ಭತ್ತದ ವಿವಾದ

ಕೇಂದ್ರವು ಭತ್ತವನ್ನು ಖರೀದಿಸಲು ಹಿಂದೇಟು ಹಾಕುತ್ತಿರುವುದರಿಂದ ತೆಲಂಗಾಣ ಸರ್ಕಾರವು ಕಳೆದ ಕೆಲವು ದಿನಗಳಿಂದ ಈ ಋತುವಿನಲ್ಲಿ ಭತ್ತದ ಕೃಷಿಗೆ ಮಾಡದಂತೆ ರೈತರನ್ನು ವಿನಂತಿಸುತ್ತಿದೆ.

ಹಿಂಗಾರು ಋತುವಿನಲ್ಲಿ ಭತ್ತದ ಕೃಷಿ ಮಾಡದಂತೆ ರಾಜ್ಯ ರೈತರನ್ನು ನಿರುತ್ಸಾಹಗೊಳಿಸುತ್ತಿರುವ ಟಿಆರ್‌ಎಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಆಂದೋಲನ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದ್ದರಿಂದ ರಾಜ್ಯದ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಕೆಸಿಆರ್‌, ‘ಕೇಂದ್ರವು ಭತ್ತವನ್ನು ಖರೀದಿಸಲು ಸಿದ್ದವಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂಸತ್ತಿನಲ್ಲಿ ಭತ್ತ ಸಂಗ್ರಹಣೆ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸುತ್ತೇವೆ. ಜಿಲ್ಲೆಗಳಲ್ಲಿ ಧರಣಿ ನಡೆಸುತ್ತೇವೆ. ಮತ್ತು ಅಗತ್ಯವಿದ್ದರೆ ಮುಖ್ಯಮಂತ್ರಿ ಸೇರಿದಂತೆ ತೆಲಂಗಾಣದ ಸಂಸದರು, ಶಾಸಕರು, ಎಂಎಲ್‌ಸಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಕೆಸಿಆರ್ ಹೇಳಿದರು.

‘ಕೇಂದ್ರದ ಮೂರು ಕೃಷಿ ಕಾನೂನುಗಳ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಕೆಆರ್‌ಎಸ್‌ ಪಕ್ಷವು ಬೆಂಬಲಿಸುತ್ತದೆ. ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವವರೆಗೂ ಕೇಂದ್ರವನ್ನು ವಿಶ್ರಾಂತಿ ಪಡೆಯಲು ಬಿಡುವುದಿಲ್ಲ’ ಎಂದರು.


ಇದನ್ನೂ ಓದಿ: ಪೆಟ್ರೋಲ್ ಬೆಲೆಯಲ್ಲಿ 10 ರೂ ಕಡಿತಗೊಳಿಸಿದ ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....