Homeಮುಖಪುಟಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

ಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

- Advertisement -
- Advertisement -

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಸುಂಕವನ್ನು ಕಡಿಮೆ ಮಾಡುವಂತೆ ರಾಜ್ಯಗಳನ್ನು ಕೇಳಲು ಬಿಜೆಪಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ಅನ್ನು ತೆಗೆದುಹಾಕುವಂತೆ ಕೇಂದ್ರದ ಎನ್‌ಡಿಎ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಟಿಆರ್‌ಎಸ್ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್ ಹೆಚ್ಚಿಸಿಲ್ಲ, ಆದ್ದರಿಂದ ಇಳಿಕೆ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದಿದ್ದಾರೆ.

’ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಅನ್ನು ಹಿಂಪಡೆಯುವವರೆಗೆ ನಾವು ನಿಮಗೆ ವಿಶ್ರಾಂತಿ ತೆಗೆದುಕೊಳ್ಳಲು ಬಿಡುವುದಿಲ್ಲ. ತೆಲಂಗಾಣದಲ್ಲಿ ಬೆಳೆದ ಭತ್ತವನ್ನು ಕೇಂದ್ರವೇ ಸಂಪೂರ್ಣವಾಗಿ ಖರೀದಿಸಬೇಕು. ರಾಜ್ಯ ಬಿಜೆಪಿ ನಾಯಕರು ಪೊಳ್ಳು ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ, ಈ ಬೇಡಿಕೆಗಳನ್ನು ಕೇಂದ್ರವು ಒಪ್ಪುವಂತೆ ಮಾಡಬೇಕು’ ಎಂದು ಕೆಸಿಆರ್ ಹೇಳಿದರು.

‘ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಗಳು ಕಡಿಮೆ ಇದ್ದರೂ, ಕೇಂದ್ರವು ಸೆಸ್ ಹೆಸರಿನಲ್ಲಿ ಇಂಧನ ಬೆಲೆಗಳನ್ನು ಹೆಚ್ಚಿಸಿ ಸಾಮಾನ್ಯ ಜನರಿಗೆ ಹೊರೆಯಾಗಿದೆ. 2014 ರ ನಂತರ ಅಂತರರಾಷ್ಟ್ರೀಯ ಬೆಲೆಗಳು ಪ್ರತಿ ಬ್ಯಾರೆಲ್‌ಗೆ $ 105 ಅನ್ನು ಮುಟ್ಟಲಿಲ್ಲ, ಆದರೆ ಕೇಂದ್ರವು ಬೆಲೆಗಳನ್ನು ಹೆಚ್ಚಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

’ನಾವು ಸುಂಕವನ್ನು ಒಂದು ಪೈಸೆ ಕೂಡ ಹೆಚ್ಚಿಸಿಲ್ಲ. ಹಾಗಾಗಿ ಕಡಿತದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಟಿಆರ್‌ಎಸ್ ಸರ್ಕಾರ ಬಂದಾಗಿನಿಂದಲೂ ಸುಂಕ ಹೆಚ್ಚಿಸಿಲ್ಲ. ಯಾವ ಮೂರ್ಖ ನಮ್ಮನ್ನು ಸುಂಕ  ಕಡಿಮೆ ಮಾಡಲು ಕೇಳುತ್ತಾನೆ? ಯಾರು ಬೆಲೆ ಹೆಚ್ಚಿಸಿದರೋ ಅವರೇ ಅದನ್ನು ಕಡಿಮೆ ಮಾಡಬೇಕಾಗುತ್ತದೆ’ ಎಂದು ಕೆಸಿಆರ್ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

‘ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸಿರುವ ಒಟ್ಟು ಸೆಸ್ ಅನ್ನು ತೆಗೆದುಹಾಕುವಂತೆ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಏಕೆಂದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಸರ್ಕಾರವು ಅನಗತ್ಯವಾಗಿ ಸೆಸ್ ವಿಧಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಹೊರೆಯಾಗುತ್ತಿದೆ. ದೇಶದ ಬಡ ಜನರ ಬಗ್ಗೆ ಸರ್ಕಾರವು ಪ್ರಾಮಾಣಿಕವಾಗಿದ್ದರೆ, ಅದು ಒಟ್ಟು ಸೆಸ್ ಅನ್ನು ಹಿಂಪಡೆಯಬೇಕು… ’ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

2014 ರಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲ ಬ್ಯಾರೆಲ್‌ಗೆ 100 ಡಾಲರ್ ಮೇಲಿತ್ತು. ಆಗ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 9.48 ರೂ ಮತ್ತು ಡೀಸೆಲ್ ಮೇಲೆ 3.56 ರೂ ಅಬಕಾರಿ ಶುಂಕ ವಿಧಿಸುತ್ತಿತ್ತು. ಈಗ 2021 ಕಚ್ಚಾ ತೈಲದ ಬ್ಯಾರೆಲ್‌ಗೆ 80 ಡಾಲರ್ ಆಸುಪಾಸಿನಲ್ಲಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 32.90 ರೂ ಮತ್ತ ಡೀಸೆಲ್ ಮೇಲೆ 31.80 ರೂ ತೆರಿಗೆ ವಿಧಿಸುತ್ತಿದೆ. ದೀಪಾವಳಿ ದಿನ ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 5 ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ.

ತೆಲಂಗಾಣದಲ್ಲಿ ಭತ್ತದ ವಿವಾದ

ಕೇಂದ್ರವು ಭತ್ತವನ್ನು ಖರೀದಿಸಲು ಹಿಂದೇಟು ಹಾಕುತ್ತಿರುವುದರಿಂದ ತೆಲಂಗಾಣ ಸರ್ಕಾರವು ಕಳೆದ ಕೆಲವು ದಿನಗಳಿಂದ ಈ ಋತುವಿನಲ್ಲಿ ಭತ್ತದ ಕೃಷಿಗೆ ಮಾಡದಂತೆ ರೈತರನ್ನು ವಿನಂತಿಸುತ್ತಿದೆ.

ಹಿಂಗಾರು ಋತುವಿನಲ್ಲಿ ಭತ್ತದ ಕೃಷಿ ಮಾಡದಂತೆ ರಾಜ್ಯ ರೈತರನ್ನು ನಿರುತ್ಸಾಹಗೊಳಿಸುತ್ತಿರುವ ಟಿಆರ್‌ಎಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಆಂದೋಲನ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದ್ದರಿಂದ ರಾಜ್ಯದ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಕೆಸಿಆರ್‌, ‘ಕೇಂದ್ರವು ಭತ್ತವನ್ನು ಖರೀದಿಸಲು ಸಿದ್ದವಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂಸತ್ತಿನಲ್ಲಿ ಭತ್ತ ಸಂಗ್ರಹಣೆ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸುತ್ತೇವೆ. ಜಿಲ್ಲೆಗಳಲ್ಲಿ ಧರಣಿ ನಡೆಸುತ್ತೇವೆ. ಮತ್ತು ಅಗತ್ಯವಿದ್ದರೆ ಮುಖ್ಯಮಂತ್ರಿ ಸೇರಿದಂತೆ ತೆಲಂಗಾಣದ ಸಂಸದರು, ಶಾಸಕರು, ಎಂಎಲ್‌ಸಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಕೆಸಿಆರ್ ಹೇಳಿದರು.

‘ಕೇಂದ್ರದ ಮೂರು ಕೃಷಿ ಕಾನೂನುಗಳ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಕೆಆರ್‌ಎಸ್‌ ಪಕ್ಷವು ಬೆಂಬಲಿಸುತ್ತದೆ. ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವವರೆಗೂ ಕೇಂದ್ರವನ್ನು ವಿಶ್ರಾಂತಿ ಪಡೆಯಲು ಬಿಡುವುದಿಲ್ಲ’ ಎಂದರು.


ಇದನ್ನೂ ಓದಿ: ಪೆಟ್ರೋಲ್ ಬೆಲೆಯಲ್ಲಿ 10 ರೂ ಕಡಿತಗೊಳಿಸಿದ ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...