Homeಕರ್ನಾಟಕತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ!: ರಾಜ್ಯಾಧ್ಯಕ್ಷ ಸ್ಥಾನವೂ ಕಗ್ಗಂಟು

ತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ!: ರಾಜ್ಯಾಧ್ಯಕ್ಷ ಸ್ಥಾನವೂ ಕಗ್ಗಂಟು

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದು ತಿಂಗಳು ಕಳೆದಿದೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಸಚಿವ ಸಂಪುಟ, ಉಸ್ತುವಾರಿಗಳ ನೇಮಕ ಎಲ್ಲಾ ಮುಗಿಸಿ ಬಜೆಟ್ ಅಧಿವೇಶನಕ್ಕೆ ತಯಾರಿ ನಡೆಸುತ್ತಿದೆ. ಅಲ್ಲದೇ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೂ ಮುಂದಾಗಿದೆ. ಆದರೆ ಬಿಜೆಪಿ ಮಾತ್ರ ಇದುವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇನ್ನೂ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವೂ ನೆನೆಗುದಿಗೆ ಬಿದ್ದಿದೆ.

ಒಂದು ವಾರದ ಹಿಂದೆಯೇ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದ್ದೇವೆ ಎಂದು ಹೇಳಿದ್ದರು. ಆದರೆ ಒಂದು ವಾರ ಕಳೆದರೂ ಮಾಡಲಾಗಿಲ್ಲ. ಇನ್ನು ಬಿಜೆಪಿಯ ಕಾರ್ಯಕಾರಿಣಿ ಸಭೆಯಲ್ಲಿ ಆಯ್ಕೆ ನಡೆಯಲಿದೆ ಎನ್ನಲಾಗಿತ್ತು. ಆದರೆ ಸಭೆಯೆ ಅರ್ಧಬರ್ಧ ನಡೆದಿದೆ. ಈಗಾಗಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿ ಉಳಿದಿದೆ.

ಜುಲೈ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯನವರು ಸಿದ್ಧತೆ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಸಮರ್ಥ ವಿರೋಧ ಪಕ್ಷದ ನಾಯಕರಿರುವುದು ಅಗತ್ಯ. ಆದರೆ ಹೀನಾಯವಾಗಿ ಸೋತಿರುವ ಬಿಜೆಪಿಗೆ ವಿಪಕ್ಷ ನಾಯಕರಾಗುವ ಸಾಮರ್ಥ್ಯ ಯಾರಲ್ಲೂ ಇಲ್ಲವೇ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಬೊಮ್ಮಾಯಿಯವರ ಅಸಮರ್ಥತೆ ಮತ್ತು ಸರಿಯಾದ ಆಡಳಿತ ನಡೆಸದಿರುವುದು ಕಾರಣ ಎಂಬ ಮಾತಿದೆ. ಹಾಗಾಗಿ ಮತ್ತೆ ಅವರ ಮುಂದಾಳತ್ವದಲ್ಲಿ ಹೋಗಬೇಕೆ ಎಂಬುದು ಬಿಜೆಪಿಯನ್ನು ಕಾಡುತ್ತಿದೆ. ಇನ್ನು ಬಸನಗೌಡ ಪಾಟೀಲ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುವುದರಿಂದ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಬದಲಿಗೆ ವಿಪಕ್ಷ ಬಿಜೆಪಿಯೇ ಮುಜುಗರಕ್ಕೊಳಗಾಗಬಹುದು ಎಂಬ ಆತಂಕವಿದೆ. ಅರವಿಂದ್ ಬೆಲ್ಲದ್‌ ಮತ್ತು ಸುನೀಲ್‌ ಕುಮಾರ್‌ರವರಿಗೆ ರಾಜ್ಯದ ವಸ್ತುಸ್ಥಿತಿಯ ಅರಿವು ಮತ್ತು ಅನುಭವ ಸಾಲದು ಎನ್ನಲಾಗುತ್ತಿದೆ.

ಇನ್ನು ಬಿಜೆಪಿ ಹಿರಿಯ ನಾಯಕರು ನಿವೃತ್ತಿ ಘೋಷಿಸಿದ್ದಾರೆ. ಯಡಿಯೂರಪ್ಪ ಮಗನಿಗಾಗಿ ಹಿಂದೆ ಸರಿದರೆ, ಈಶ್ವರಪ್ಪನವರು ರಾಜಕೀಯ ನಿವೃತ್ತಿ ಘೋಷಿಸಿದರು. ಹಾಗಾಗಿ ಸದ್ಯ ಬಿಜೆಪಿ ಯಾರ ಮೊರೆ ಹೋಗಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಬದಲಾಗದ ರಾಜ್ಯಾಧ್ಯಕ್ಷ ಸ್ಥಾನ

ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿಯೇ ಕೊನೆಗೊಂಡಿದೆ. ವಿಧಾನಸಭಾ ಚುನಾವಣೆಯ ಕಾರಣದಿಂದ ಅವರ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ರಾಜ್ಯಾದ್ಯಂತ ಸುತ್ತಿ ಬಿಜೆಪಿ ಪಕ್ಷ ಬಲಪಡಿಸುವ ಮುಖ ಯಾರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ನಳೀನ್ ಕುಮಾರ್‌ರವರನ್ನೆ ಮತ್ತೊಂದು ಅವಧಿಗೆ ಮುಂದುವರೆಸುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ಈ ಹಿಂದೆ ವ್ಯಂಗ್ಯವಾಡಿತ್ತು.

ಇದನ್ನೂ ಓದಿ; 2024ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ದಸಂಸ ‘ಭೀಮ ಸಂಕಲ್ಪ’; ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...