Homeಕರ್ನಾಟಕತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ!: ರಾಜ್ಯಾಧ್ಯಕ್ಷ ಸ್ಥಾನವೂ ಕಗ್ಗಂಟು

ತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಬಿಜೆಪಿ!: ರಾಜ್ಯಾಧ್ಯಕ್ಷ ಸ್ಥಾನವೂ ಕಗ್ಗಂಟು

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದು ತಿಂಗಳು ಕಳೆದಿದೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಸಚಿವ ಸಂಪುಟ, ಉಸ್ತುವಾರಿಗಳ ನೇಮಕ ಎಲ್ಲಾ ಮುಗಿಸಿ ಬಜೆಟ್ ಅಧಿವೇಶನಕ್ಕೆ ತಯಾರಿ ನಡೆಸುತ್ತಿದೆ. ಅಲ್ಲದೇ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೂ ಮುಂದಾಗಿದೆ. ಆದರೆ ಬಿಜೆಪಿ ಮಾತ್ರ ಇದುವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇನ್ನೂ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವೂ ನೆನೆಗುದಿಗೆ ಬಿದ್ದಿದೆ.

ಒಂದು ವಾರದ ಹಿಂದೆಯೇ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದ್ದೇವೆ ಎಂದು ಹೇಳಿದ್ದರು. ಆದರೆ ಒಂದು ವಾರ ಕಳೆದರೂ ಮಾಡಲಾಗಿಲ್ಲ. ಇನ್ನು ಬಿಜೆಪಿಯ ಕಾರ್ಯಕಾರಿಣಿ ಸಭೆಯಲ್ಲಿ ಆಯ್ಕೆ ನಡೆಯಲಿದೆ ಎನ್ನಲಾಗಿತ್ತು. ಆದರೆ ಸಭೆಯೆ ಅರ್ಧಬರ್ಧ ನಡೆದಿದೆ. ಈಗಾಗಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿ ಉಳಿದಿದೆ.

ಜುಲೈ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯನವರು ಸಿದ್ಧತೆ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಸಮರ್ಥ ವಿರೋಧ ಪಕ್ಷದ ನಾಯಕರಿರುವುದು ಅಗತ್ಯ. ಆದರೆ ಹೀನಾಯವಾಗಿ ಸೋತಿರುವ ಬಿಜೆಪಿಗೆ ವಿಪಕ್ಷ ನಾಯಕರಾಗುವ ಸಾಮರ್ಥ್ಯ ಯಾರಲ್ಲೂ ಇಲ್ಲವೇ ಎಂಬ ಮಾತುಗಳು ಕೇಳಿಬರುತ್ತಿವೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಬೊಮ್ಮಾಯಿಯವರ ಅಸಮರ್ಥತೆ ಮತ್ತು ಸರಿಯಾದ ಆಡಳಿತ ನಡೆಸದಿರುವುದು ಕಾರಣ ಎಂಬ ಮಾತಿದೆ. ಹಾಗಾಗಿ ಮತ್ತೆ ಅವರ ಮುಂದಾಳತ್ವದಲ್ಲಿ ಹೋಗಬೇಕೆ ಎಂಬುದು ಬಿಜೆಪಿಯನ್ನು ಕಾಡುತ್ತಿದೆ. ಇನ್ನು ಬಸನಗೌಡ ಪಾಟೀಲ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುವುದರಿಂದ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಬದಲಿಗೆ ವಿಪಕ್ಷ ಬಿಜೆಪಿಯೇ ಮುಜುಗರಕ್ಕೊಳಗಾಗಬಹುದು ಎಂಬ ಆತಂಕವಿದೆ. ಅರವಿಂದ್ ಬೆಲ್ಲದ್‌ ಮತ್ತು ಸುನೀಲ್‌ ಕುಮಾರ್‌ರವರಿಗೆ ರಾಜ್ಯದ ವಸ್ತುಸ್ಥಿತಿಯ ಅರಿವು ಮತ್ತು ಅನುಭವ ಸಾಲದು ಎನ್ನಲಾಗುತ್ತಿದೆ.

ಇನ್ನು ಬಿಜೆಪಿ ಹಿರಿಯ ನಾಯಕರು ನಿವೃತ್ತಿ ಘೋಷಿಸಿದ್ದಾರೆ. ಯಡಿಯೂರಪ್ಪ ಮಗನಿಗಾಗಿ ಹಿಂದೆ ಸರಿದರೆ, ಈಶ್ವರಪ್ಪನವರು ರಾಜಕೀಯ ನಿವೃತ್ತಿ ಘೋಷಿಸಿದರು. ಹಾಗಾಗಿ ಸದ್ಯ ಬಿಜೆಪಿ ಯಾರ ಮೊರೆ ಹೋಗಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಬದಲಾಗದ ರಾಜ್ಯಾಧ್ಯಕ್ಷ ಸ್ಥಾನ

ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿಯೇ ಕೊನೆಗೊಂಡಿದೆ. ವಿಧಾನಸಭಾ ಚುನಾವಣೆಯ ಕಾರಣದಿಂದ ಅವರ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ರಾಜ್ಯಾದ್ಯಂತ ಸುತ್ತಿ ಬಿಜೆಪಿ ಪಕ್ಷ ಬಲಪಡಿಸುವ ಮುಖ ಯಾರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ನಳೀನ್ ಕುಮಾರ್‌ರವರನ್ನೆ ಮತ್ತೊಂದು ಅವಧಿಗೆ ಮುಂದುವರೆಸುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ಈ ಹಿಂದೆ ವ್ಯಂಗ್ಯವಾಡಿತ್ತು.

ಇದನ್ನೂ ಓದಿ; 2024ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ದಸಂಸ ‘ಭೀಮ ಸಂಕಲ್ಪ’; ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...