Homeಮುಖಪುಟಚುನಾವಣಾ ಬಾಂಡ್‌ ಮೂಲಕ ಬಿಜೆಪಿ ದೇಣಿಗೆ ಪಡೆದುಕೊಂಡಿಲ್ಲ, ಸುಲಿಗೆ ಮಾಡಿದೆ: ಅಖಿಲೇಶ್ ಯಾದವ್

ಚುನಾವಣಾ ಬಾಂಡ್‌ ಮೂಲಕ ಬಿಜೆಪಿ ದೇಣಿಗೆ ಪಡೆದುಕೊಂಡಿಲ್ಲ, ಸುಲಿಗೆ ಮಾಡಿದೆ: ಅಖಿಲೇಶ್ ಯಾದವ್

- Advertisement -
- Advertisement -

ಚುನಾವಣಾ ಬಾಂಡ್‌ಗಳ ವಿಚಾರದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು,ಚುನಾವಣಾ ಬಾಂಡ್‌ ಮೂಲಕ ಆಡಳಿತ ಪಕ್ಷವು ದೇಣಿಗೆ ತೆಗೆದುಕೊಂಡಿಲ್ಲ, ಸುಲಿಗೆ ಮಾಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಜೆಪಿಯು ಸಿಬಿಐ, ಇಡಿ, ಆದಾಯ ತೆರಿಗೆ ಮತ್ತು ಇತರ ಸಂಸ್ಥೆಗಳನ್ನು ದೇಣಿಗೆ ತೆಗೆದುಕೊಳ್ಳದೆ ಸುಲಿಗೆ ಮಾಡಲು ಹೇಗೆ ಬಳಸಿಕೊಂಡಿದೆ ಎಂಬುವುದು ಈಗ ಜನರಿಗೆ ತಿಳಿದಿದೆ. ಚುನಾವಣಾ ಬಾಂಡ್‌ಗಳು ಬಿಜೆಪಿ ಹೆಸರನ್ನು ಕೆಡಿಸಿದೆ ಎಂದು ಹೇಳಿದ್ದಾರೆ.

ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಒತ್ತಡ ಹೇರಿದಾಗ ಬಿಜೆಪಿ ಖಾತೆಗೆ ಹಣ ಹೋಗಿರುವುದು ಹಲವು ಪ್ರಕರಣಗಳಲ್ಲಿ ಗಮನಕ್ಕೆ ಬಂದಿದೆ. ಅಧಿಕಾರದಲ್ಲಿರುವವರು ದೇಣಿಗೆ ತೆಗೆದುಕೊಳ್ಳದೆ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮದು ರಾಷ್ಟ್ರೀಯವಾದಿ ಪಕ್ಷ ಎಂದು ಹೇಳಿಕೊಂಡವರ ವಿರುದ್ಧವೇ ಚುನಾವಣಾ ಬಾಂಡ್‌ ಕುರಿತು ಆರೋಪ ಕೇಳಿ ಬಂದಿದೆ. ಈ ಬಗ್ಗೆ ಗಮನ ಬೇರೆಡೆ ಸೆಳೆಯಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ. ಅವರಿಗೆ ಮಾ.28ರವರೆಗೆ ಇಡಿ ಕಸ್ಟಡಿಯನ್ನು ನೀಡಲಾಗಿದೆ.

ಸುಪ್ರೀಂಕೋರ್ಟ್‌ ಆದೇಶದ ಬಳಿಕ ಎಸ್‌ಬಿಐ ಇತ್ತೀಚೆಗೆ ಚುನಾವಣಾ ಬಾಂಡ್‌ ಕುರಿತ ಮಾಹಿತಿಯನ್ನು ಬಹಿರಂಗಗೊಳಿಸಿತ್ತು. ಬಿಜೆಪಿ ಒಟ್ಟು ಚುನಾವಣಾ ಬಾಂಡ್‌ ದೇಣಿಗೆಯಲ್ಲಿ 50%ಕ್ಕಿಂತ ಹೆಚ್ಚು ಪಡೆದಿರುವುದು ಅಂಕಿ-ಅಂಶಗಳಲ್ಲಿ ಬಹಿರಂಗವಾಗಿತ್ತು. ಕೆಲವೊಂದು ಕಂಪೆನಿಗಳು ಇಡಿ, ಐಟಿ ದಾಳಿ ಬಳಿಕ ಚುನಾವಣಾ ಬಾಂಡ್‌ ಖರೀದಿಸಿದ್ದವು. ದೆಹಲಿ ಮಧ್ಯನೀತಿ ಹಗರಣದ ಪ್ರಮುಖ ಸಾಕ್ಷಿ ಶರತ್ ಚಂದ್ರ ರೆಡ್ಡಿಯಿಂದ ಕೂಡ ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ 60 ಕೋಟಿ ರೂ. ಹಣವನ್ನು ಪಡೆದಿದೆ ಎಂದು ಎಎಪಿ ದಾಖಲೆ ಬಿಡುಗಡೆ ಮಾಡಿತ್ತು.

ಇದನ್ನು ಓದಿ: ಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...