Homeರಾಜಕೀಯ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ...’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

- Advertisement -
- Advertisement -

ಮೂರು ವರ್ಷಗಳಿಂದ ಪಕ್ಷದಿಂದ ಕಡೆಗಣಿಸಲಾಗುತ್ತಿದೆ ಎಂದು ದೂರುತ್ತಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಗುಜರಾತ್ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಜೆಪಿಯನ್ನು ಹೊಗಳುವ ಮೂಲಕ ತನ್ನ ಪಕ್ಷದ ಕೇಂದ್ರದ ನಾಯಕತ್ವಕ್ಕೆ ಆತಂಕಕಾರಿ ಸಂಕೇತಗಳನ್ನು ರವಾನಿಸಿದ್ದಾರೆ.

ರಾಜ್ಯದ ಪ್ರಮುಖ ಸಮುದಾಯವಾದ ‘ಪಾಟಿದಾರ್’ನ ನಾಯಕರಾದ ಅವರು ಮತ್ತೊಮ್ಮೆ ತಮ್ಮ ಪಕ್ಷ ಮತ್ತು ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿಯೊಂದಿಗೆ ತಾನು ಮಾತುಕತೆ ನಡೆಸುತ್ತಿದ್ದೇನೆ ಎಂಬ ವರದಿಗಳನ್ನು ಅವರು ನಿರಾಕರಿಸಿದ್ದಾರೆ. ಜೊತೆಗೆ, “ಬಿಜೆಪಿಯ ಬಗ್ಗೆ ಕೆಲವು ಒಳ್ಳೆಯ ವಿಷಯಗಳನ್ನು ನಾವು ಒಪ್ಪಿಕೊಳ್ಳಬೇಕು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜಕೀಯವಾಗಿ ಬಿಜೆಪಿ ತೆಗೆದುಕೊಂಡ ಇತ್ತೀಚಿನ ನಿರ್ಧಾರಗಳು, ಇಂತಹ ಕ್ರಮಗಳನ್ನು ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ ಎಂದು ನಾವು ಒಪ್ಪಿಕೊಳ್ಳಬೇಕು. ಅವರ ಪರವಾಗಿ ನಿಲ್ಲದೆ ಅಥವಾ ಅವರನ್ನು ಹೊಗಳದೆ, ನಾವು ಕನಿಷ್ಠ ಸತ್ಯವನ್ನು ಒಪ್ಪಿಕೊಳ್ಳಬಹುದು ಎಂದು ನಾನು ನಂಬುತ್ತೇನೆ. ಗುಜರಾತಿನಲ್ಲಿ ಕಾಂಗ್ರೆಸ್ ಬಲಿಷ್ಠವಾಗಬೇಕಾದರೆ, ನಾವು ನಮ್ಮ ನಿರ್ಧಾರ ತೆಗೆದುಕೊಳ್ಳುವ ಕೌಶಲ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ಸುಧಾರಿಸಿಕೊಳ್ಳಬೇಕು” ಎಂದು ಹಾರ್ದಿಕ್ ಪಟೇಲ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

2015 ರಲ್ಲಿ ಗುಜರಾತ್‌ನಲ್ಲಿ ಮೀಸಲಾತಿಗಾಗಿ ಪ್ರಬಲ “ಪಾಟಿದಾರ್” ಸಮುದಾಯದ ಆಂದೋಲನದ ನೇತೃತ್ವ ವಹಿಸಿದ್ದ ಹಾರ್ದಿಕ್ ಪಟೇಲ್, 2019 ರ ರಾಷ್ಟ್ರೀಯ ಚುನಾವಣೆಯ ಮೊದಲು ಕಾಂಗ್ರೆಸ್‌ಗೆ ಸೇರಿದ್ದರು. ಅವರ ರಾಜಕೀಯ ಪಾದಾರ್ಪಣೆಯ ನಂತರ ಅವರ ಜನಪ್ರಿಯತೆ ಕ್ಷೀಣಿಸಿತು ಎಂದು ಎನ್‌ಡಿಟವಿ ಉಲ್ಲೇಖಿಸಿದೆ.

2017 ರ ಗುಜರಾತ್ ಚುನಾವಣೆಯಲ್ಲಿ ಪಾಟಿದಾರ್‌ ಸಮುದಾಯದಿಂದ ಪಕ್ಷವು ಲಾಭ ಗಳಿಸಿದ್ದರೂ, ಸಮುದಾಯವು 2019 ರ ಚುನಾವಣೆ ಅಥವಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಲಿಲ್ಲ.

ಹಾರ್ದಿಕ್ ಪಟೇಲ್ ತಮ್ಮ ಪಕ್ಷದ ನಾಯಕತ್ವವು ತನ್ನನ್ನು ಬದಿಗಿಟ್ಟಿದೆ ಎಂದು ಆರೋಪಿಸಿದ್ದು, ಸಮುದಾಯದ ಇನ್ನೊಬ್ಬ ಪ್ರಮುಖ ನಾಯಕ ನರೇಶ್ ಪಟೇಲ್ ಅವರನ್ನು ಕಣಕ್ಕಿಳಿಸುವ ಕಾಂಗ್ರೆಸ್ ಯೋಜನೆ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...