Homeರಾಜಕೀಯ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ...’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

- Advertisement -
- Advertisement -

ಮೂರು ವರ್ಷಗಳಿಂದ ಪಕ್ಷದಿಂದ ಕಡೆಗಣಿಸಲಾಗುತ್ತಿದೆ ಎಂದು ದೂರುತ್ತಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಗುಜರಾತ್ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಬಿಜೆಪಿಯನ್ನು ಹೊಗಳುವ ಮೂಲಕ ತನ್ನ ಪಕ್ಷದ ಕೇಂದ್ರದ ನಾಯಕತ್ವಕ್ಕೆ ಆತಂಕಕಾರಿ ಸಂಕೇತಗಳನ್ನು ರವಾನಿಸಿದ್ದಾರೆ.

ರಾಜ್ಯದ ಪ್ರಮುಖ ಸಮುದಾಯವಾದ ‘ಪಾಟಿದಾರ್’ನ ನಾಯಕರಾದ ಅವರು ಮತ್ತೊಮ್ಮೆ ತಮ್ಮ ಪಕ್ಷ ಮತ್ತು ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿಯೊಂದಿಗೆ ತಾನು ಮಾತುಕತೆ ನಡೆಸುತ್ತಿದ್ದೇನೆ ಎಂಬ ವರದಿಗಳನ್ನು ಅವರು ನಿರಾಕರಿಸಿದ್ದಾರೆ. ಜೊತೆಗೆ, “ಬಿಜೆಪಿಯ ಬಗ್ಗೆ ಕೆಲವು ಒಳ್ಳೆಯ ವಿಷಯಗಳನ್ನು ನಾವು ಒಪ್ಪಿಕೊಳ್ಳಬೇಕು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜಕೀಯವಾಗಿ ಬಿಜೆಪಿ ತೆಗೆದುಕೊಂಡ ಇತ್ತೀಚಿನ ನಿರ್ಧಾರಗಳು, ಇಂತಹ ಕ್ರಮಗಳನ್ನು ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ ಎಂದು ನಾವು ಒಪ್ಪಿಕೊಳ್ಳಬೇಕು. ಅವರ ಪರವಾಗಿ ನಿಲ್ಲದೆ ಅಥವಾ ಅವರನ್ನು ಹೊಗಳದೆ, ನಾವು ಕನಿಷ್ಠ ಸತ್ಯವನ್ನು ಒಪ್ಪಿಕೊಳ್ಳಬಹುದು ಎಂದು ನಾನು ನಂಬುತ್ತೇನೆ. ಗುಜರಾತಿನಲ್ಲಿ ಕಾಂಗ್ರೆಸ್ ಬಲಿಷ್ಠವಾಗಬೇಕಾದರೆ, ನಾವು ನಮ್ಮ ನಿರ್ಧಾರ ತೆಗೆದುಕೊಳ್ಳುವ ಕೌಶಲ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ಸುಧಾರಿಸಿಕೊಳ್ಳಬೇಕು” ಎಂದು ಹಾರ್ದಿಕ್ ಪಟೇಲ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ಹಯ್ಯ, ಜಿಗ್ನೇಶ್ ಮತ್ತು ಹಾರ್ದಿಕ್‌ ಮೇಲೆ ‘ಬಿಹಾರ ಕಾಂಗ್ರೆಸ್‌‌’ಗೆ ನಂಬಿಕೆ – RJD ಜೊತೆ ಮೈತ್ರಿಗೆ ಬ್ರೇಕ್

2015 ರಲ್ಲಿ ಗುಜರಾತ್‌ನಲ್ಲಿ ಮೀಸಲಾತಿಗಾಗಿ ಪ್ರಬಲ “ಪಾಟಿದಾರ್” ಸಮುದಾಯದ ಆಂದೋಲನದ ನೇತೃತ್ವ ವಹಿಸಿದ್ದ ಹಾರ್ದಿಕ್ ಪಟೇಲ್, 2019 ರ ರಾಷ್ಟ್ರೀಯ ಚುನಾವಣೆಯ ಮೊದಲು ಕಾಂಗ್ರೆಸ್‌ಗೆ ಸೇರಿದ್ದರು. ಅವರ ರಾಜಕೀಯ ಪಾದಾರ್ಪಣೆಯ ನಂತರ ಅವರ ಜನಪ್ರಿಯತೆ ಕ್ಷೀಣಿಸಿತು ಎಂದು ಎನ್‌ಡಿಟವಿ ಉಲ್ಲೇಖಿಸಿದೆ.

2017 ರ ಗುಜರಾತ್ ಚುನಾವಣೆಯಲ್ಲಿ ಪಾಟಿದಾರ್‌ ಸಮುದಾಯದಿಂದ ಪಕ್ಷವು ಲಾಭ ಗಳಿಸಿದ್ದರೂ, ಸಮುದಾಯವು 2019 ರ ಚುನಾವಣೆ ಅಥವಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಲಿಲ್ಲ.

ಹಾರ್ದಿಕ್ ಪಟೇಲ್ ತಮ್ಮ ಪಕ್ಷದ ನಾಯಕತ್ವವು ತನ್ನನ್ನು ಬದಿಗಿಟ್ಟಿದೆ ಎಂದು ಆರೋಪಿಸಿದ್ದು, ಸಮುದಾಯದ ಇನ್ನೊಬ್ಬ ಪ್ರಮುಖ ನಾಯಕ ನರೇಶ್ ಪಟೇಲ್ ಅವರನ್ನು ಕಣಕ್ಕಿಳಿಸುವ ಕಾಂಗ್ರೆಸ್ ಯೋಜನೆ ಬಗ್ಗೆ ಅವರು ಅಸಮಾಧಾನಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...