Homeಕರ್ನಾಟಕನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

- Advertisement -
- Advertisement -

“ಹೆದರಿಸುವ ಸಲುವಾಗಿ ನನಗೆ ನೋಟಿಸ್ ನೀಡಲಾಗಿದೆ ಅಷ್ಟೆ, ಫೆಬ್ರವರಿ 21 ರ ನಂತರ ನೋಟಿಸ್ ಅನ್ನು ಹಿಂಪಡೆಯುತ್ತಾರೆ ಎಂದು ಸಚಿವರೊಬ್ಬರು ಹೇಳಿದ್ದಾರೆ” ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರದ ಶಾಸಕ ಯತ್ನಾಳ್, “ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಜೆಪಿ ಮುಖಂಡರು ನನಗೆ ನೋಟಿಸ್ ಕೊಟ್ಟಿರುವುದಾಗಿ ಹೇಳುತ್ತಿದ್ದಾರೆ. ಆದರೆ ಈವರೆಗೂ ನನಗೆ ನೋಟಿಸ್ ಬಂದಿಲ್ಲ. ನನಗೆ ನೋಟಿಸ್ ಬಂದಿರುವುದು ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಅವರಿಗೆ ಹೇಗೆ ಗೊತ್ತಾಯಿತು. ಯಾರ ಬಳಿಯೂ ನೋಟಿಸ್ ಪತ್ರ ಇಲ್ಲ. ನೋಟಿಸ್ ನೀಡಿರುವುದಾಗಿ ಹೇಳಿಕೆ ನೀಡಿ ಮೂರು ದಿನವಾಗಿದೆ. ಎಲ್ಲಿಯೂ ನೋಟಿಸ್ ಕಾಣಿಸುತ್ತಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹಣ ಎಲ್ಲಿಂದ ಬರುತ್ತದೆ? ಗುಜರಾತಿನ ವ್ಯಾಪಾರಿಗಳಿಂದ ಬರುತ್ತದೆ: ರಾಹುಲ್ ಗಾಂಧಿ ಹೀಗೆ ಹೇಳಿದ್ದೇಕೆ?

“ನಾನು ಯಾರ ಬೆದರಿಕೆಗೂ ಅಂಜುವುದಿಲ್ಲ. ‘ಹೆದರಿಸುವ ಸಲುವಾಗಿ ನೋಟಿಸ್ ಕೊಡಲಾಗಿದೆ. ಅದಕ್ಕೆ ತಲೆಕೆಡಿಸಿಕೊಳ್ಳಬೇಡಿ’ ಎಂದು ಸಚಿವರೊಬ್ಬರು ದೂರವಾಣಿ ಕರೆಮಾಡಿ ನನಗೆ ಹೇಳಿದ್ದಾರೆ. ಫೆ. 21ರ ನಂತರ ಕೇಂದ್ರ ನಾಯಕರು ನೋಟಿಸ್ ವಾಪಸ್ ಪಡೆಯುವುದಾಗಿ ಅವರು ತಿಳಿಸಿದ್ದಾರೆ” ಎಂದು ಹೇಳಿದರು.

“ವೀರಶೈವ ಲಿಂಗಾಯತ ಸ್ವಾಮೀಜಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ. ಯಾರೋ ಒಬ್ಬರು ವೀರಶೈವ ಲಿಂಗಾಯತ ಸಮುದಾಯವನ್ನು ಹೈಜಾಕ್ ಮಾಡುತ್ತಿರುವ ಉದ್ದೇಶವನ್ನು ಹೊಂದಿದ್ದಾರೆ ಎಂಬುದನ್ನು ಸ್ವಾಮೀಜಿಗಳು ಮನಗಂಡಿದ್ದಾರೆ. ಸಮುದಾಯವನ್ನು ತಮ್ಮ ಮಗನ ರಾಜಕೀಯ ಬೆಳವಣಿಗೆಗಾಗಿ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ” ಎಂದು ಯಡಿಯೂರಪ್ಪನವರ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಸಚಿವ ಮುರುಗೇಶ ನಿರಾಣಿ, ವಿಜಯೇಂದ್ರ ಸೇರಿ ಪಂಚಮಸಾಲಿ ಸಮುದಾಯವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ.‌ ಫೆಬ್ರವರಿ 21 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶ ಹಾಳುಮಾಡಿ, ವಿಫಲಗೊಳಿಸುವ ಷಡ್ಯಂತ್ರ ನಡೆದಿದೆ. ಆದರೆ ಈ ಕುತಂತ್ರ ನಡೆಯುವುದಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ಪದೇ ಪದೇ ವಾಗ್ದಾಳಿ ಮಾಡುತ್ತಿದ್ದ ಬಸನಗೌಡ ಯತ್ನಾಳ್‌ ಅವರಿಗೆ ಹೈಕಮಾಂಡ್ ನೋಟಿಸ್ ನೀಡಿದೆ ಎಂದು ಹೇಳಲಾಗುತ್ತಿತ್ತು. ಇದನ್ನು ಕೆಲವರು ಕಣ್ಣೊರೆಸುವ ತಂತ್ರ ಎಂದೂ ಹೇಳಿದ್ದರು. ಆದರೆ ಈಗ ಅದು ಯತ್ನಾಳ್ ಅವರಿಂದಲೇ ಸಾಬೀತಾಗಿದೆ.


ಇದನ್ನೂ ಓದಿ: ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ, ಮೂರೂ ಕ್ಷೇತ್ರದ ಉಪಚುನಾವಣೆಯಲ್ಲೂ ಸ್ಪರ್ಧೆ: ನಿರ್ಧಾರ ಬದಲಿಸಿದ HDK

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...