Homeಮುಖಪುಟಮಹಾರಾಷ್ಟ್ರ: 12 ಬಿಜೆಪಿ ಶಾಸಕರ ಅಮಾನತಿಗೆ ಕೌಂಟರ್ ಅಸೆಂಬ್ಲಿ ನಡೆಸಿ ವಿಪಕ್ಷಗಳ ಆಕ್ರೋಶ

ಮಹಾರಾಷ್ಟ್ರ: 12 ಬಿಜೆಪಿ ಶಾಸಕರ ಅಮಾನತಿಗೆ ಕೌಂಟರ್ ಅಸೆಂಬ್ಲಿ ನಡೆಸಿ ವಿಪಕ್ಷಗಳ ಆಕ್ರೋಶ

ರಾಜ್ಯ ಸರ್ಕಾರ ಇಂತಹ ಅಶಿಸ್ತು ಮತ್ತು ಅವಿವೇಕವನ್ನು ಸಹಿಸಿಕೊಳ್ಳುವುದಿಲ್ಲ- ಶಿವಸೇನೆ ಸಂಸದ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ ಸ್ಪೀಕರ್ ಕಚೇರಿ ಅಧಿಕಾರಿ ಭಾಸ್ಕರ್ ಜಾದವ್ ಅವರನ್ನು ನಿಂದಿಸಿದ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿಯ 12 ಶಾಸಕರನ್ನು ಸೋಮವಾರ ಒಂದು ವರ್ಷದವರೆಗೆ ಸ್ಪೀಕರ್‌ ಅಮಾನತುಗೊಳಿಸಿದ್ದಾರೆ. ಇದಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಶಾಸಕರು, ದೇವೇಂದ್ರ ಫಡ್ನವೀಸ್ ಅವರ ನೇತೃತ್ವದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ “ಕೌಂಟರ್ ಅಸೆಂಬ್ಲಿ” ನಡೆಸಿ ಪ್ರತಿಭಟಿಸಿದ್ದಾರೆ.

ಹಲವಾರು ಬಿಜೆಪಿ ಶಾಸಕರು ವಿಧಾನಸೌಧದ  ಮೆಟ್ಟಿಲುಗಳ ಮೇಲೆ ಕುಳಿತು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್, ಬಿಜೆಪಿ ಶಾಸಕ ಕಾಳಿದಾಸ್ ಕೋಲಂಕರ್ ಅವರನ್ನು ಕೌಂಟರ್ ಸದನದ ಸ್ಪೀಕರ್ ಎಂದು ಘೋಷಿಸಿ ಚರ್ಚೆ ನಡೆಸಲು ಪ್ರಸ್ತಾಪಿಸಿದರು.

’ಪಕ್ಷದ 12 ಶಾಸಕರನ್ನು ಸುಳ್ಳು ಆರೋಪದ ಆಧಾರದ ಮೇಲೆ ಅಮಾನತುಗೊಳಿಸಲಾಗಿದೆ. ನಾನು ಇಲ್ಲಿ ಈ ಸರ್ಕಾರದ ವಿರುದ್ಧ ನಿರ್ಣಯವನ್ನು ಪ್ರಸ್ತಾಪಿಸುತ್ತೇನೆ ಮತ್ತು ಪ್ರಸ್ತಾವನೆಯ ಕುರಿತು ಚರ್ಚೆಯನ್ನು ಪ್ರಾರಂಭಿಸಲು ಸದಸ್ಯರನ್ನು ವಿನಂತಿಸುತ್ತೇನೆ’ ಎಂದು ಚರ್ಚೆ ಆರಂಭಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

“ಇದು ಪ್ರಜಾಪ್ರಭುತ್ವದ ಕೊಲೆ. ಬಿಜೆಪಿಯ ಎಲ್ಲಾ ಶಾಸಕರು ಈ ಸರ್ಕಾರದ ಕಾರ್ಯಚಟುವಟಿಕೆಯ ವಿರುದ್ಧ ಮಾತನಾಡಲು ಬಯಸುತ್ತಾರೆ. ಭ್ರಷ್ಟ ಸರ್ಕಾರವನ್ನು ಬಹಿರಂಗಪಡಿಸಲು ಬಯಸುತ್ತಾರೆ” ಎಂದು ವಿಪಕ್ಷ ನಾಯಕ ಸರ್ಕಾರದ ಮೇಲೆ ಕಿಡಿ ಕಾರಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಬಿಜೆಪಿ ಸದಸ್ಯರು ಧ್ವನಿವರ್ಧಕಗಳನ್ನು ಬಳಸದಂತೆ ಭದ್ರತಾ ಅಧಿಕಾರಿಗಳು ತಡೆದಿದ್ದಾರೆ.

ವಿಧಾನಸಭಾ ಭವನ ಮತ್ತು ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೂ, 12 ಶಾಸಕರನ್ನು ಅಮಾನತುಗೊಳಿಸಿರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಶಿವಸೇನೆ ಸಂಸದ ಸಂಜಯ್ ರಾವತ್, ರಾಜ್ಯ ಸರ್ಕಾರ ಇಂತಹ ಅಶಿಸ್ತು ಮತ್ತು ಅವಿವೇಕವನ್ನು ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

“ಪ್ರತಿಪಕ್ಷದ ನಾಯಕರು ನನ್ನ ಕ್ಯಾಬಿನ್‌ಗೆ ಬಂದು ದೇವೇಂದ್ರ ಫಡ್ನವೀಸ್ ಮತ್ತು ಹಿರಿಯ ನಾಯಕ ಚಂದ್ರಕಾಂತ್ ಪಾಟೀಲ್ ಅವರ ಮುಂದೆಯೇ ಅಸಂಸದೀಯ ಭಾಷೆ ಬಳಸಿ ನನ್ನನ್ನು ನಿಂದಿಸಿದ್ದಾರೆ. ಕೆಲವು ನಾಯಕರು ನನ್ನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ” ಎಂದು ಅಧಿಕಾರಿ ಭಾಸ್ಕರ್ ಜಾಧವ್ ಮಾಧ್ಯಮಗಳಿಗೆ ತಿಳಿಸಿದರು.

ಸಂಜಯ್ ಕುಟೆ, ಆಶಿಸ್ ಶೆಲಾರ್. ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲಾವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟ್, ಯೋಗೇಶ್ ಸಾಗರ್, ಜಯ ಕುಮಾರ್ ರಾವತ್, ನಾರಾಯಣ್ ಕುಚೆ ಮತ್ತು ಕೀರ್ತಿಕುಮಾರ್ ಭಾಂಗ್ಡಿಯಾ ಅಮಾನತುಗೊಂಡ ಶಾಸಕರು.


ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...