Homeಮುಖಪುಟಮಹಾರಾಷ್ಟ್ರ: 12 ಬಿಜೆಪಿ ಶಾಸಕರ ಅಮಾನತಿಗೆ ಕೌಂಟರ್ ಅಸೆಂಬ್ಲಿ ನಡೆಸಿ ವಿಪಕ್ಷಗಳ ಆಕ್ರೋಶ

ಮಹಾರಾಷ್ಟ್ರ: 12 ಬಿಜೆಪಿ ಶಾಸಕರ ಅಮಾನತಿಗೆ ಕೌಂಟರ್ ಅಸೆಂಬ್ಲಿ ನಡೆಸಿ ವಿಪಕ್ಷಗಳ ಆಕ್ರೋಶ

ರಾಜ್ಯ ಸರ್ಕಾರ ಇಂತಹ ಅಶಿಸ್ತು ಮತ್ತು ಅವಿವೇಕವನ್ನು ಸಹಿಸಿಕೊಳ್ಳುವುದಿಲ್ಲ- ಶಿವಸೇನೆ ಸಂಸದ ಸಂಜಯ್ ರಾವತ್

- Advertisement -
- Advertisement -

ಮಹಾರಾಷ್ಟ್ರದ ಸ್ಪೀಕರ್ ಕಚೇರಿ ಅಧಿಕಾರಿ ಭಾಸ್ಕರ್ ಜಾದವ್ ಅವರನ್ನು ನಿಂದಿಸಿದ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿಯ 12 ಶಾಸಕರನ್ನು ಸೋಮವಾರ ಒಂದು ವರ್ಷದವರೆಗೆ ಸ್ಪೀಕರ್‌ ಅಮಾನತುಗೊಳಿಸಿದ್ದಾರೆ. ಇದಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಶಾಸಕರು, ದೇವೇಂದ್ರ ಫಡ್ನವೀಸ್ ಅವರ ನೇತೃತ್ವದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ “ಕೌಂಟರ್ ಅಸೆಂಬ್ಲಿ” ನಡೆಸಿ ಪ್ರತಿಭಟಿಸಿದ್ದಾರೆ.

ಹಲವಾರು ಬಿಜೆಪಿ ಶಾಸಕರು ವಿಧಾನಸೌಧದ  ಮೆಟ್ಟಿಲುಗಳ ಮೇಲೆ ಕುಳಿತು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್) ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್, ಬಿಜೆಪಿ ಶಾಸಕ ಕಾಳಿದಾಸ್ ಕೋಲಂಕರ್ ಅವರನ್ನು ಕೌಂಟರ್ ಸದನದ ಸ್ಪೀಕರ್ ಎಂದು ಘೋಷಿಸಿ ಚರ್ಚೆ ನಡೆಸಲು ಪ್ರಸ್ತಾಪಿಸಿದರು.

’ಪಕ್ಷದ 12 ಶಾಸಕರನ್ನು ಸುಳ್ಳು ಆರೋಪದ ಆಧಾರದ ಮೇಲೆ ಅಮಾನತುಗೊಳಿಸಲಾಗಿದೆ. ನಾನು ಇಲ್ಲಿ ಈ ಸರ್ಕಾರದ ವಿರುದ್ಧ ನಿರ್ಣಯವನ್ನು ಪ್ರಸ್ತಾಪಿಸುತ್ತೇನೆ ಮತ್ತು ಪ್ರಸ್ತಾವನೆಯ ಕುರಿತು ಚರ್ಚೆಯನ್ನು ಪ್ರಾರಂಭಿಸಲು ಸದಸ್ಯರನ್ನು ವಿನಂತಿಸುತ್ತೇನೆ’ ಎಂದು ಚರ್ಚೆ ಆರಂಭಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

“ಇದು ಪ್ರಜಾಪ್ರಭುತ್ವದ ಕೊಲೆ. ಬಿಜೆಪಿಯ ಎಲ್ಲಾ ಶಾಸಕರು ಈ ಸರ್ಕಾರದ ಕಾರ್ಯಚಟುವಟಿಕೆಯ ವಿರುದ್ಧ ಮಾತನಾಡಲು ಬಯಸುತ್ತಾರೆ. ಭ್ರಷ್ಟ ಸರ್ಕಾರವನ್ನು ಬಹಿರಂಗಪಡಿಸಲು ಬಯಸುತ್ತಾರೆ” ಎಂದು ವಿಪಕ್ಷ ನಾಯಕ ಸರ್ಕಾರದ ಮೇಲೆ ಕಿಡಿ ಕಾರಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಬಿಜೆಪಿ ಸದಸ್ಯರು ಧ್ವನಿವರ್ಧಕಗಳನ್ನು ಬಳಸದಂತೆ ಭದ್ರತಾ ಅಧಿಕಾರಿಗಳು ತಡೆದಿದ್ದಾರೆ.

ವಿಧಾನಸಭಾ ಭವನ ಮತ್ತು ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೂ, 12 ಶಾಸಕರನ್ನು ಅಮಾನತುಗೊಳಿಸಿರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಶಿವಸೇನೆ ಸಂಸದ ಸಂಜಯ್ ರಾವತ್, ರಾಜ್ಯ ಸರ್ಕಾರ ಇಂತಹ ಅಶಿಸ್ತು ಮತ್ತು ಅವಿವೇಕವನ್ನು ಸಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

“ಪ್ರತಿಪಕ್ಷದ ನಾಯಕರು ನನ್ನ ಕ್ಯಾಬಿನ್‌ಗೆ ಬಂದು ದೇವೇಂದ್ರ ಫಡ್ನವೀಸ್ ಮತ್ತು ಹಿರಿಯ ನಾಯಕ ಚಂದ್ರಕಾಂತ್ ಪಾಟೀಲ್ ಅವರ ಮುಂದೆಯೇ ಅಸಂಸದೀಯ ಭಾಷೆ ಬಳಸಿ ನನ್ನನ್ನು ನಿಂದಿಸಿದ್ದಾರೆ. ಕೆಲವು ನಾಯಕರು ನನ್ನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ” ಎಂದು ಅಧಿಕಾರಿ ಭಾಸ್ಕರ್ ಜಾಧವ್ ಮಾಧ್ಯಮಗಳಿಗೆ ತಿಳಿಸಿದರು.

ಸಂಜಯ್ ಕುಟೆ, ಆಶಿಸ್ ಶೆಲಾರ್. ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲಾವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟ್, ಯೋಗೇಶ್ ಸಾಗರ್, ಜಯ ಕುಮಾರ್ ರಾವತ್, ನಾರಾಯಣ್ ಕುಚೆ ಮತ್ತು ಕೀರ್ತಿಕುಮಾರ್ ಭಾಂಗ್ಡಿಯಾ ಅಮಾನತುಗೊಂಡ ಶಾಸಕರು.


ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...