Homeಕರ್ನಾಟಕಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ...!

ಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ…!

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ...

- Advertisement -
- Advertisement -

ದಿಢೀರ್ ಬೆಳವಣಿಗೆ ಅನಿಸುವಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಸಂಭವಿಸುತ್ತಿವೆ. ಮೊನ್ನೆ ಸರ್ಕಾರ ಬಿದ್ದಾಗ, ‘ಎಚ್ಚರಿಕೆಯ ಹೆಜ್ಜೆ ಇಡೋಣ’ ಎಂದು ಸಲಹೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಹಾಕಿದ್ದ ಬಿಜೆಪಿ ಹೈಕಮಾಂಡ್ ಈಗ 12 ಗಂಟೆ ಸುಮಾರಿಗೆ ‘ಎಚ್ಚರಿಕೆಯ ಹೆಜ್ಜೆ ಇಡಿ, ರಿಸ್ಕ್ ತೆಗೆದುಕೊಳ್ಳುವ ಪೂರ್ತಿ ಜವಾಬ್ದಾರಿ ನಿಮ್ಮದೇ’ ಎನ್ನುವ ಮೂಲಕ ಯಡಿಯೂರಪ್ಪನವರ ಬಂಡಾಯದ ಮುಂದೆ ಮಂಡಿಯೂರಿ ಬಿಟ್ಟಂತಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ ಅದೆಷ್ಟು ಡೋಲಾಯಮಾನವಾಗಿದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಅದಕ್ಕೆ ತಕ್ಕಂತೆ ಬಿಜೆಪಿ ಹೈಕಮಾಂಡ್ ಕೂಡ ಎಚ್ಚರ ವಹಿಸಿ ತಾಳ್ಮೆಯ ನಡೆಯ ಹಾದಿ ಆರಿಸಿಕೊಂಡಿತ್ತು. ಆದರೆ, ಮೊದಲೇ ಹತಾಶಗೊಂಡಿದ್ದ ಯಡಿಯೂರಪ್ಪ ನಿನ್ನೆ ರಾತ್ರಿ ಹೈಕಮಾಂಡಿಗೇ ಸವಾಲು ಎಸೆಯುವ ಮೂಲಕ ಹೈಕಮಾಂಡ್ ಅನ್ನು ತಮ್ಮ ಬೇಡಿಕೆಗೆ ಅಥವಾ ಆಗ್ರಹಕ್ಕೆ ಬಗ್ಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವತ್ತು ದೆಹಲಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸುವುದು ನಿಗದಿಯಾಗಿತ್ತು. ನಿನ್ನೆ ಸ್ಪೀಕರ್ ರಮೇಶಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಇನ್ನಷ್ಟು ಶಾಸಕರನ್ನು ಅನರ್ಹತೆಗೊಳಿಸುವ ಸೂಕ್ಷ್ಮ ಸೂಚನೆಯನ್ನು ಕೊಟ್ಟ ಮೇಲೆ ಎಚ್ಚರಗೊಂಡ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ದುಡುಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದು, ಅದನ್ನೇ ಇವತ್ತು ಕಾರ್ಯಾಧ್ಯಕ್ಷ ಛಡ್ಡಾ ಮೂಲಕ ಹೇಳಿಸುವ ಉದ್ದೇಶ ಹೊಂದಿತ್ತು.

ಆದರೆ, ನಿನ್ನೆ ಸ್ಪೀಕರ್ ನಡೆ ನೋಡಿದ ಯಡಿಯೂರಪ್ಪ ತಮ್ಮ ಬೆಂಬಗಲಿಗರೊಂದಿಗೆ ಸಭೆ ನಡೆಸಿ, ‘ಇನ್ನು ಸುಮ್ಮನಿರಲಾಗಲ್ಲ, ಬಹುಮತ ಸಾಬೀತು ಮಾಡುವುದೇನೂ ದೊಡ್ಡ ಕೆಲಸವಲ್ಲ… ಹೀಗೇ ಬಿಟ್ಟರೆ ಈ ಹೈಕಮಾಂಡ್ ಇಲ್ಲಿ ರಾಷ್ಟ್ರಪತಿ ಆಡಳಿತವನ್ನೂ ಹೇರಬಹುದು. ಹಾಗಾಗಿ ಪ್ರಮಾಣವಚನ ತೆಗೆದುಕೊಳ್ಳುವುದೇ ಸೈ’ ಎಂಬ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅದರ ಪರಿಣಾಮವಾಗಿಯೇ ಅವರು ಸೀದಾ ಅಮಿತ್ ಶಾಗೆ ಫೋನ್ ಮಾಡಿ, ನಾಳೆ ಯಾವುದೇ ಪರಿಸ್ಥಿತಿಯಲ್ಲೂ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ. ನೀವು ಒಪ್ಪದಿದ್ದರೆ ನಾನು ಬಿಜೆಪಿಗೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಸಿದ್ದಾರೆ ಎಂಬ ಮಾಹಿತಿಯಿದೆ. ಇದನ್ನು ಕೇಳಿ ಬೆಚ್ಚಿಬಿದ್ದ ಅಮಿತ್ ಶಾ ಅನಿವಾರ್ಯವಾಗಿ ಯಡಿಯೂರಪ್ಪರ ನಿಲುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಆದರೆ, 221 ಸದಸ್ಯರ ಸದನದಲ್ಲಿ 111 ಸದಸ್ಯರ ಬೆಂಬಲ ಇರಬೇಕು. ಆದರೆ 105 ಸದಸ್ಯರ ಬಲ ಹೊಂದಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಆಶ್ಚರ್ಯದ ವಿಷಯವೇನೂ ಅಲ್ಲ. ಅವರು ಈ ಹಿಂದೆಯೂ ಬಿಜೆಪಿಗೆ ಬಹುಮತ ಇಲ್ಲದಾಗ್ಯೂ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಪತ್ರ ನೀಡಿದ್ದಾಗ್ಯೂ, ಯಡಿಯೂರಪ್ಪನವರನ್ನೇ ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಆದರೆ, ಈಗಿನ ಪರಿಸ್ಥಿತಿ ಬೇರೆ. ಈಗ ಸ್ಪೀಕರ್ ಮೂವರನ್ನು ಅನರ್ಹಗೊಳಿಸಿದ್ದಾರೆ, ಉಳಿದವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಒಬ್ಬ ಪಕ್ಷೇತರ, ಒಬ್ಬ ಬಿಎಸ್ಪಿ ಸದಸ್ಯರು ಬೆಂಬಲ ನೀಡಿದರೂ, 111 ಆಗಲ್ಲ.

ಇಲ್ಲಿ ಯಡಿಯೂರಪ್ಪ ಮತ್ತು ರಾಜ್ಯಪಾಲರು ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರಾ? ಅಥವಾ ಯಡಿಯೂರಪ್ಪ ವಿಶ್ವಾಸಮತದಲ್ಲಿ ಫೇಲಾದ ನಂತರ ಬಿಜೆಪಿಗೆ ಅನುಕಂಪದ ಅಲೆ ದೊರೆಯಬಹುದು, ರಾಷ್ಟ್ರಪತಿ ಆಡಳಿತ ಘೋಷಿಸಿ ಆಮೇಲೆ ಚುನಾವಣೆ ಎದುರಿಸುವ ಯೋಜನೆಯನ್ನು ಹೈಕಮಾಡ್ ಮಾಡಿಕೊಂಡಿದೆಯಾ?

ಇವರ ಈ ಎಲ್ಲ ಆಟಗಳು ಸುಲಭವಾಗಿ ನಡೆಯುತ್ತವಾ? ಬರಲಿರುವ ಸ್ಪೀಕರ್ ತೀರ್ಮಾನಗಳು ಮತ್ತು ಸುಪ್ರಿಂಕೋರ್ಟಿನ ಆದೇಶಗಳನ್ನೂ ನಾವು ಗಮನದಲ್ಲಿಟ್ಟು ನೋಡಿದಾಗ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...