Homeಕರ್ನಾಟಕಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ...!

ಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ…!

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ...

- Advertisement -
- Advertisement -

ದಿಢೀರ್ ಬೆಳವಣಿಗೆ ಅನಿಸುವಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಸಂಭವಿಸುತ್ತಿವೆ. ಮೊನ್ನೆ ಸರ್ಕಾರ ಬಿದ್ದಾಗ, ‘ಎಚ್ಚರಿಕೆಯ ಹೆಜ್ಜೆ ಇಡೋಣ’ ಎಂದು ಸಲಹೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಹಾಕಿದ್ದ ಬಿಜೆಪಿ ಹೈಕಮಾಂಡ್ ಈಗ 12 ಗಂಟೆ ಸುಮಾರಿಗೆ ‘ಎಚ್ಚರಿಕೆಯ ಹೆಜ್ಜೆ ಇಡಿ, ರಿಸ್ಕ್ ತೆಗೆದುಕೊಳ್ಳುವ ಪೂರ್ತಿ ಜವಾಬ್ದಾರಿ ನಿಮ್ಮದೇ’ ಎನ್ನುವ ಮೂಲಕ ಯಡಿಯೂರಪ್ಪನವರ ಬಂಡಾಯದ ಮುಂದೆ ಮಂಡಿಯೂರಿ ಬಿಟ್ಟಂತಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ ಅದೆಷ್ಟು ಡೋಲಾಯಮಾನವಾಗಿದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಅದಕ್ಕೆ ತಕ್ಕಂತೆ ಬಿಜೆಪಿ ಹೈಕಮಾಂಡ್ ಕೂಡ ಎಚ್ಚರ ವಹಿಸಿ ತಾಳ್ಮೆಯ ನಡೆಯ ಹಾದಿ ಆರಿಸಿಕೊಂಡಿತ್ತು. ಆದರೆ, ಮೊದಲೇ ಹತಾಶಗೊಂಡಿದ್ದ ಯಡಿಯೂರಪ್ಪ ನಿನ್ನೆ ರಾತ್ರಿ ಹೈಕಮಾಂಡಿಗೇ ಸವಾಲು ಎಸೆಯುವ ಮೂಲಕ ಹೈಕಮಾಂಡ್ ಅನ್ನು ತಮ್ಮ ಬೇಡಿಕೆಗೆ ಅಥವಾ ಆಗ್ರಹಕ್ಕೆ ಬಗ್ಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವತ್ತು ದೆಹಲಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸುವುದು ನಿಗದಿಯಾಗಿತ್ತು. ನಿನ್ನೆ ಸ್ಪೀಕರ್ ರಮೇಶಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಇನ್ನಷ್ಟು ಶಾಸಕರನ್ನು ಅನರ್ಹತೆಗೊಳಿಸುವ ಸೂಕ್ಷ್ಮ ಸೂಚನೆಯನ್ನು ಕೊಟ್ಟ ಮೇಲೆ ಎಚ್ಚರಗೊಂಡ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ದುಡುಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದು, ಅದನ್ನೇ ಇವತ್ತು ಕಾರ್ಯಾಧ್ಯಕ್ಷ ಛಡ್ಡಾ ಮೂಲಕ ಹೇಳಿಸುವ ಉದ್ದೇಶ ಹೊಂದಿತ್ತು.

ಆದರೆ, ನಿನ್ನೆ ಸ್ಪೀಕರ್ ನಡೆ ನೋಡಿದ ಯಡಿಯೂರಪ್ಪ ತಮ್ಮ ಬೆಂಬಗಲಿಗರೊಂದಿಗೆ ಸಭೆ ನಡೆಸಿ, ‘ಇನ್ನು ಸುಮ್ಮನಿರಲಾಗಲ್ಲ, ಬಹುಮತ ಸಾಬೀತು ಮಾಡುವುದೇನೂ ದೊಡ್ಡ ಕೆಲಸವಲ್ಲ… ಹೀಗೇ ಬಿಟ್ಟರೆ ಈ ಹೈಕಮಾಂಡ್ ಇಲ್ಲಿ ರಾಷ್ಟ್ರಪತಿ ಆಡಳಿತವನ್ನೂ ಹೇರಬಹುದು. ಹಾಗಾಗಿ ಪ್ರಮಾಣವಚನ ತೆಗೆದುಕೊಳ್ಳುವುದೇ ಸೈ’ ಎಂಬ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅದರ ಪರಿಣಾಮವಾಗಿಯೇ ಅವರು ಸೀದಾ ಅಮಿತ್ ಶಾಗೆ ಫೋನ್ ಮಾಡಿ, ನಾಳೆ ಯಾವುದೇ ಪರಿಸ್ಥಿತಿಯಲ್ಲೂ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ. ನೀವು ಒಪ್ಪದಿದ್ದರೆ ನಾನು ಬಿಜೆಪಿಗೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಸಿದ್ದಾರೆ ಎಂಬ ಮಾಹಿತಿಯಿದೆ. ಇದನ್ನು ಕೇಳಿ ಬೆಚ್ಚಿಬಿದ್ದ ಅಮಿತ್ ಶಾ ಅನಿವಾರ್ಯವಾಗಿ ಯಡಿಯೂರಪ್ಪರ ನಿಲುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಆದರೆ, 221 ಸದಸ್ಯರ ಸದನದಲ್ಲಿ 111 ಸದಸ್ಯರ ಬೆಂಬಲ ಇರಬೇಕು. ಆದರೆ 105 ಸದಸ್ಯರ ಬಲ ಹೊಂದಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಆಶ್ಚರ್ಯದ ವಿಷಯವೇನೂ ಅಲ್ಲ. ಅವರು ಈ ಹಿಂದೆಯೂ ಬಿಜೆಪಿಗೆ ಬಹುಮತ ಇಲ್ಲದಾಗ್ಯೂ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಪತ್ರ ನೀಡಿದ್ದಾಗ್ಯೂ, ಯಡಿಯೂರಪ್ಪನವರನ್ನೇ ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಆದರೆ, ಈಗಿನ ಪರಿಸ್ಥಿತಿ ಬೇರೆ. ಈಗ ಸ್ಪೀಕರ್ ಮೂವರನ್ನು ಅನರ್ಹಗೊಳಿಸಿದ್ದಾರೆ, ಉಳಿದವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಒಬ್ಬ ಪಕ್ಷೇತರ, ಒಬ್ಬ ಬಿಎಸ್ಪಿ ಸದಸ್ಯರು ಬೆಂಬಲ ನೀಡಿದರೂ, 111 ಆಗಲ್ಲ.

ಇಲ್ಲಿ ಯಡಿಯೂರಪ್ಪ ಮತ್ತು ರಾಜ್ಯಪಾಲರು ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರಾ? ಅಥವಾ ಯಡಿಯೂರಪ್ಪ ವಿಶ್ವಾಸಮತದಲ್ಲಿ ಫೇಲಾದ ನಂತರ ಬಿಜೆಪಿಗೆ ಅನುಕಂಪದ ಅಲೆ ದೊರೆಯಬಹುದು, ರಾಷ್ಟ್ರಪತಿ ಆಡಳಿತ ಘೋಷಿಸಿ ಆಮೇಲೆ ಚುನಾವಣೆ ಎದುರಿಸುವ ಯೋಜನೆಯನ್ನು ಹೈಕಮಾಡ್ ಮಾಡಿಕೊಂಡಿದೆಯಾ?

ಇವರ ಈ ಎಲ್ಲ ಆಟಗಳು ಸುಲಭವಾಗಿ ನಡೆಯುತ್ತವಾ? ಬರಲಿರುವ ಸ್ಪೀಕರ್ ತೀರ್ಮಾನಗಳು ಮತ್ತು ಸುಪ್ರಿಂಕೋರ್ಟಿನ ಆದೇಶಗಳನ್ನೂ ನಾವು ಗಮನದಲ್ಲಿಟ್ಟು ನೋಡಿದಾಗ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...