Homeಕರ್ನಾಟಕಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ...!

ಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ…!

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ...

- Advertisement -
- Advertisement -

ದಿಢೀರ್ ಬೆಳವಣಿಗೆ ಅನಿಸುವಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಸಂಭವಿಸುತ್ತಿವೆ. ಮೊನ್ನೆ ಸರ್ಕಾರ ಬಿದ್ದಾಗ, ‘ಎಚ್ಚರಿಕೆಯ ಹೆಜ್ಜೆ ಇಡೋಣ’ ಎಂದು ಸಲಹೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಹಾಕಿದ್ದ ಬಿಜೆಪಿ ಹೈಕಮಾಂಡ್ ಈಗ 12 ಗಂಟೆ ಸುಮಾರಿಗೆ ‘ಎಚ್ಚರಿಕೆಯ ಹೆಜ್ಜೆ ಇಡಿ, ರಿಸ್ಕ್ ತೆಗೆದುಕೊಳ್ಳುವ ಪೂರ್ತಿ ಜವಾಬ್ದಾರಿ ನಿಮ್ಮದೇ’ ಎನ್ನುವ ಮೂಲಕ ಯಡಿಯೂರಪ್ಪನವರ ಬಂಡಾಯದ ಮುಂದೆ ಮಂಡಿಯೂರಿ ಬಿಟ್ಟಂತಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ ಅದೆಷ್ಟು ಡೋಲಾಯಮಾನವಾಗಿದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಅದಕ್ಕೆ ತಕ್ಕಂತೆ ಬಿಜೆಪಿ ಹೈಕಮಾಂಡ್ ಕೂಡ ಎಚ್ಚರ ವಹಿಸಿ ತಾಳ್ಮೆಯ ನಡೆಯ ಹಾದಿ ಆರಿಸಿಕೊಂಡಿತ್ತು. ಆದರೆ, ಮೊದಲೇ ಹತಾಶಗೊಂಡಿದ್ದ ಯಡಿಯೂರಪ್ಪ ನಿನ್ನೆ ರಾತ್ರಿ ಹೈಕಮಾಂಡಿಗೇ ಸವಾಲು ಎಸೆಯುವ ಮೂಲಕ ಹೈಕಮಾಂಡ್ ಅನ್ನು ತಮ್ಮ ಬೇಡಿಕೆಗೆ ಅಥವಾ ಆಗ್ರಹಕ್ಕೆ ಬಗ್ಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವತ್ತು ದೆಹಲಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸುವುದು ನಿಗದಿಯಾಗಿತ್ತು. ನಿನ್ನೆ ಸ್ಪೀಕರ್ ರಮೇಶಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಇನ್ನಷ್ಟು ಶಾಸಕರನ್ನು ಅನರ್ಹತೆಗೊಳಿಸುವ ಸೂಕ್ಷ್ಮ ಸೂಚನೆಯನ್ನು ಕೊಟ್ಟ ಮೇಲೆ ಎಚ್ಚರಗೊಂಡ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ದುಡುಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದು, ಅದನ್ನೇ ಇವತ್ತು ಕಾರ್ಯಾಧ್ಯಕ್ಷ ಛಡ್ಡಾ ಮೂಲಕ ಹೇಳಿಸುವ ಉದ್ದೇಶ ಹೊಂದಿತ್ತು.

ಆದರೆ, ನಿನ್ನೆ ಸ್ಪೀಕರ್ ನಡೆ ನೋಡಿದ ಯಡಿಯೂರಪ್ಪ ತಮ್ಮ ಬೆಂಬಗಲಿಗರೊಂದಿಗೆ ಸಭೆ ನಡೆಸಿ, ‘ಇನ್ನು ಸುಮ್ಮನಿರಲಾಗಲ್ಲ, ಬಹುಮತ ಸಾಬೀತು ಮಾಡುವುದೇನೂ ದೊಡ್ಡ ಕೆಲಸವಲ್ಲ… ಹೀಗೇ ಬಿಟ್ಟರೆ ಈ ಹೈಕಮಾಂಡ್ ಇಲ್ಲಿ ರಾಷ್ಟ್ರಪತಿ ಆಡಳಿತವನ್ನೂ ಹೇರಬಹುದು. ಹಾಗಾಗಿ ಪ್ರಮಾಣವಚನ ತೆಗೆದುಕೊಳ್ಳುವುದೇ ಸೈ’ ಎಂಬ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅದರ ಪರಿಣಾಮವಾಗಿಯೇ ಅವರು ಸೀದಾ ಅಮಿತ್ ಶಾಗೆ ಫೋನ್ ಮಾಡಿ, ನಾಳೆ ಯಾವುದೇ ಪರಿಸ್ಥಿತಿಯಲ್ಲೂ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ. ನೀವು ಒಪ್ಪದಿದ್ದರೆ ನಾನು ಬಿಜೆಪಿಗೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಸಿದ್ದಾರೆ ಎಂಬ ಮಾಹಿತಿಯಿದೆ. ಇದನ್ನು ಕೇಳಿ ಬೆಚ್ಚಿಬಿದ್ದ ಅಮಿತ್ ಶಾ ಅನಿವಾರ್ಯವಾಗಿ ಯಡಿಯೂರಪ್ಪರ ನಿಲುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಆದರೆ, 221 ಸದಸ್ಯರ ಸದನದಲ್ಲಿ 111 ಸದಸ್ಯರ ಬೆಂಬಲ ಇರಬೇಕು. ಆದರೆ 105 ಸದಸ್ಯರ ಬಲ ಹೊಂದಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಆಶ್ಚರ್ಯದ ವಿಷಯವೇನೂ ಅಲ್ಲ. ಅವರು ಈ ಹಿಂದೆಯೂ ಬಿಜೆಪಿಗೆ ಬಹುಮತ ಇಲ್ಲದಾಗ್ಯೂ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಪತ್ರ ನೀಡಿದ್ದಾಗ್ಯೂ, ಯಡಿಯೂರಪ್ಪನವರನ್ನೇ ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಆದರೆ, ಈಗಿನ ಪರಿಸ್ಥಿತಿ ಬೇರೆ. ಈಗ ಸ್ಪೀಕರ್ ಮೂವರನ್ನು ಅನರ್ಹಗೊಳಿಸಿದ್ದಾರೆ, ಉಳಿದವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಒಬ್ಬ ಪಕ್ಷೇತರ, ಒಬ್ಬ ಬಿಎಸ್ಪಿ ಸದಸ್ಯರು ಬೆಂಬಲ ನೀಡಿದರೂ, 111 ಆಗಲ್ಲ.

ಇಲ್ಲಿ ಯಡಿಯೂರಪ್ಪ ಮತ್ತು ರಾಜ್ಯಪಾಲರು ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರಾ? ಅಥವಾ ಯಡಿಯೂರಪ್ಪ ವಿಶ್ವಾಸಮತದಲ್ಲಿ ಫೇಲಾದ ನಂತರ ಬಿಜೆಪಿಗೆ ಅನುಕಂಪದ ಅಲೆ ದೊರೆಯಬಹುದು, ರಾಷ್ಟ್ರಪತಿ ಆಡಳಿತ ಘೋಷಿಸಿ ಆಮೇಲೆ ಚುನಾವಣೆ ಎದುರಿಸುವ ಯೋಜನೆಯನ್ನು ಹೈಕಮಾಡ್ ಮಾಡಿಕೊಂಡಿದೆಯಾ?

ಇವರ ಈ ಎಲ್ಲ ಆಟಗಳು ಸುಲಭವಾಗಿ ನಡೆಯುತ್ತವಾ? ಬರಲಿರುವ ಸ್ಪೀಕರ್ ತೀರ್ಮಾನಗಳು ಮತ್ತು ಸುಪ್ರಿಂಕೋರ್ಟಿನ ಆದೇಶಗಳನ್ನೂ ನಾವು ಗಮನದಲ್ಲಿಟ್ಟು ನೋಡಿದಾಗ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...