Homeಕರ್ನಾಟಕಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ...!

ಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ…!

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ...

- Advertisement -
- Advertisement -

ದಿಢೀರ್ ಬೆಳವಣಿಗೆ ಅನಿಸುವಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಸಂಭವಿಸುತ್ತಿವೆ. ಮೊನ್ನೆ ಸರ್ಕಾರ ಬಿದ್ದಾಗ, ‘ಎಚ್ಚರಿಕೆಯ ಹೆಜ್ಜೆ ಇಡೋಣ’ ಎಂದು ಸಲಹೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಹಾಕಿದ್ದ ಬಿಜೆಪಿ ಹೈಕಮಾಂಡ್ ಈಗ 12 ಗಂಟೆ ಸುಮಾರಿಗೆ ‘ಎಚ್ಚರಿಕೆಯ ಹೆಜ್ಜೆ ಇಡಿ, ರಿಸ್ಕ್ ತೆಗೆದುಕೊಳ್ಳುವ ಪೂರ್ತಿ ಜವಾಬ್ದಾರಿ ನಿಮ್ಮದೇ’ ಎನ್ನುವ ಮೂಲಕ ಯಡಿಯೂರಪ್ಪನವರ ಬಂಡಾಯದ ಮುಂದೆ ಮಂಡಿಯೂರಿ ಬಿಟ್ಟಂತಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ ಅದೆಷ್ಟು ಡೋಲಾಯಮಾನವಾಗಿದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಅದಕ್ಕೆ ತಕ್ಕಂತೆ ಬಿಜೆಪಿ ಹೈಕಮಾಂಡ್ ಕೂಡ ಎಚ್ಚರ ವಹಿಸಿ ತಾಳ್ಮೆಯ ನಡೆಯ ಹಾದಿ ಆರಿಸಿಕೊಂಡಿತ್ತು. ಆದರೆ, ಮೊದಲೇ ಹತಾಶಗೊಂಡಿದ್ದ ಯಡಿಯೂರಪ್ಪ ನಿನ್ನೆ ರಾತ್ರಿ ಹೈಕಮಾಂಡಿಗೇ ಸವಾಲು ಎಸೆಯುವ ಮೂಲಕ ಹೈಕಮಾಂಡ್ ಅನ್ನು ತಮ್ಮ ಬೇಡಿಕೆಗೆ ಅಥವಾ ಆಗ್ರಹಕ್ಕೆ ಬಗ್ಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವತ್ತು ದೆಹಲಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸುವುದು ನಿಗದಿಯಾಗಿತ್ತು. ನಿನ್ನೆ ಸ್ಪೀಕರ್ ರಮೇಶಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಇನ್ನಷ್ಟು ಶಾಸಕರನ್ನು ಅನರ್ಹತೆಗೊಳಿಸುವ ಸೂಕ್ಷ್ಮ ಸೂಚನೆಯನ್ನು ಕೊಟ್ಟ ಮೇಲೆ ಎಚ್ಚರಗೊಂಡ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ದುಡುಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದು, ಅದನ್ನೇ ಇವತ್ತು ಕಾರ್ಯಾಧ್ಯಕ್ಷ ಛಡ್ಡಾ ಮೂಲಕ ಹೇಳಿಸುವ ಉದ್ದೇಶ ಹೊಂದಿತ್ತು.

ಆದರೆ, ನಿನ್ನೆ ಸ್ಪೀಕರ್ ನಡೆ ನೋಡಿದ ಯಡಿಯೂರಪ್ಪ ತಮ್ಮ ಬೆಂಬಗಲಿಗರೊಂದಿಗೆ ಸಭೆ ನಡೆಸಿ, ‘ಇನ್ನು ಸುಮ್ಮನಿರಲಾಗಲ್ಲ, ಬಹುಮತ ಸಾಬೀತು ಮಾಡುವುದೇನೂ ದೊಡ್ಡ ಕೆಲಸವಲ್ಲ… ಹೀಗೇ ಬಿಟ್ಟರೆ ಈ ಹೈಕಮಾಂಡ್ ಇಲ್ಲಿ ರಾಷ್ಟ್ರಪತಿ ಆಡಳಿತವನ್ನೂ ಹೇರಬಹುದು. ಹಾಗಾಗಿ ಪ್ರಮಾಣವಚನ ತೆಗೆದುಕೊಳ್ಳುವುದೇ ಸೈ’ ಎಂಬ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅದರ ಪರಿಣಾಮವಾಗಿಯೇ ಅವರು ಸೀದಾ ಅಮಿತ್ ಶಾಗೆ ಫೋನ್ ಮಾಡಿ, ನಾಳೆ ಯಾವುದೇ ಪರಿಸ್ಥಿತಿಯಲ್ಲೂ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ. ನೀವು ಒಪ್ಪದಿದ್ದರೆ ನಾನು ಬಿಜೆಪಿಗೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಸಿದ್ದಾರೆ ಎಂಬ ಮಾಹಿತಿಯಿದೆ. ಇದನ್ನು ಕೇಳಿ ಬೆಚ್ಚಿಬಿದ್ದ ಅಮಿತ್ ಶಾ ಅನಿವಾರ್ಯವಾಗಿ ಯಡಿಯೂರಪ್ಪರ ನಿಲುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಆದರೆ, 221 ಸದಸ್ಯರ ಸದನದಲ್ಲಿ 111 ಸದಸ್ಯರ ಬೆಂಬಲ ಇರಬೇಕು. ಆದರೆ 105 ಸದಸ್ಯರ ಬಲ ಹೊಂದಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಆಶ್ಚರ್ಯದ ವಿಷಯವೇನೂ ಅಲ್ಲ. ಅವರು ಈ ಹಿಂದೆಯೂ ಬಿಜೆಪಿಗೆ ಬಹುಮತ ಇಲ್ಲದಾಗ್ಯೂ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಪತ್ರ ನೀಡಿದ್ದಾಗ್ಯೂ, ಯಡಿಯೂರಪ್ಪನವರನ್ನೇ ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಆದರೆ, ಈಗಿನ ಪರಿಸ್ಥಿತಿ ಬೇರೆ. ಈಗ ಸ್ಪೀಕರ್ ಮೂವರನ್ನು ಅನರ್ಹಗೊಳಿಸಿದ್ದಾರೆ, ಉಳಿದವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಒಬ್ಬ ಪಕ್ಷೇತರ, ಒಬ್ಬ ಬಿಎಸ್ಪಿ ಸದಸ್ಯರು ಬೆಂಬಲ ನೀಡಿದರೂ, 111 ಆಗಲ್ಲ.

ಇಲ್ಲಿ ಯಡಿಯೂರಪ್ಪ ಮತ್ತು ರಾಜ್ಯಪಾಲರು ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರಾ? ಅಥವಾ ಯಡಿಯೂರಪ್ಪ ವಿಶ್ವಾಸಮತದಲ್ಲಿ ಫೇಲಾದ ನಂತರ ಬಿಜೆಪಿಗೆ ಅನುಕಂಪದ ಅಲೆ ದೊರೆಯಬಹುದು, ರಾಷ್ಟ್ರಪತಿ ಆಡಳಿತ ಘೋಷಿಸಿ ಆಮೇಲೆ ಚುನಾವಣೆ ಎದುರಿಸುವ ಯೋಜನೆಯನ್ನು ಹೈಕಮಾಡ್ ಮಾಡಿಕೊಂಡಿದೆಯಾ?

ಇವರ ಈ ಎಲ್ಲ ಆಟಗಳು ಸುಲಭವಾಗಿ ನಡೆಯುತ್ತವಾ? ಬರಲಿರುವ ಸ್ಪೀಕರ್ ತೀರ್ಮಾನಗಳು ಮತ್ತು ಸುಪ್ರಿಂಕೋರ್ಟಿನ ಆದೇಶಗಳನ್ನೂ ನಾವು ಗಮನದಲ್ಲಿಟ್ಟು ನೋಡಿದಾಗ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...