Homeಕರ್ನಾಟಕಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ...!

ಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ…!

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ...

- Advertisement -
- Advertisement -

ದಿಢೀರ್ ಬೆಳವಣಿಗೆ ಅನಿಸುವಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಸಂಭವಿಸುತ್ತಿವೆ. ಮೊನ್ನೆ ಸರ್ಕಾರ ಬಿದ್ದಾಗ, ‘ಎಚ್ಚರಿಕೆಯ ಹೆಜ್ಜೆ ಇಡೋಣ’ ಎಂದು ಸಲಹೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಹಾಕಿದ್ದ ಬಿಜೆಪಿ ಹೈಕಮಾಂಡ್ ಈಗ 12 ಗಂಟೆ ಸುಮಾರಿಗೆ ‘ಎಚ್ಚರಿಕೆಯ ಹೆಜ್ಜೆ ಇಡಿ, ರಿಸ್ಕ್ ತೆಗೆದುಕೊಳ್ಳುವ ಪೂರ್ತಿ ಜವಾಬ್ದಾರಿ ನಿಮ್ಮದೇ’ ಎನ್ನುವ ಮೂಲಕ ಯಡಿಯೂರಪ್ಪನವರ ಬಂಡಾಯದ ಮುಂದೆ ಮಂಡಿಯೂರಿ ಬಿಟ್ಟಂತಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ ಅದೆಷ್ಟು ಡೋಲಾಯಮಾನವಾಗಿದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಅದಕ್ಕೆ ತಕ್ಕಂತೆ ಬಿಜೆಪಿ ಹೈಕಮಾಂಡ್ ಕೂಡ ಎಚ್ಚರ ವಹಿಸಿ ತಾಳ್ಮೆಯ ನಡೆಯ ಹಾದಿ ಆರಿಸಿಕೊಂಡಿತ್ತು. ಆದರೆ, ಮೊದಲೇ ಹತಾಶಗೊಂಡಿದ್ದ ಯಡಿಯೂರಪ್ಪ ನಿನ್ನೆ ರಾತ್ರಿ ಹೈಕಮಾಂಡಿಗೇ ಸವಾಲು ಎಸೆಯುವ ಮೂಲಕ ಹೈಕಮಾಂಡ್ ಅನ್ನು ತಮ್ಮ ಬೇಡಿಕೆಗೆ ಅಥವಾ ಆಗ್ರಹಕ್ಕೆ ಬಗ್ಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವತ್ತು ದೆಹಲಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸುವುದು ನಿಗದಿಯಾಗಿತ್ತು. ನಿನ್ನೆ ಸ್ಪೀಕರ್ ರಮೇಶಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಇನ್ನಷ್ಟು ಶಾಸಕರನ್ನು ಅನರ್ಹತೆಗೊಳಿಸುವ ಸೂಕ್ಷ್ಮ ಸೂಚನೆಯನ್ನು ಕೊಟ್ಟ ಮೇಲೆ ಎಚ್ಚರಗೊಂಡ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ದುಡುಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದು, ಅದನ್ನೇ ಇವತ್ತು ಕಾರ್ಯಾಧ್ಯಕ್ಷ ಛಡ್ಡಾ ಮೂಲಕ ಹೇಳಿಸುವ ಉದ್ದೇಶ ಹೊಂದಿತ್ತು.

ಆದರೆ, ನಿನ್ನೆ ಸ್ಪೀಕರ್ ನಡೆ ನೋಡಿದ ಯಡಿಯೂರಪ್ಪ ತಮ್ಮ ಬೆಂಬಗಲಿಗರೊಂದಿಗೆ ಸಭೆ ನಡೆಸಿ, ‘ಇನ್ನು ಸುಮ್ಮನಿರಲಾಗಲ್ಲ, ಬಹುಮತ ಸಾಬೀತು ಮಾಡುವುದೇನೂ ದೊಡ್ಡ ಕೆಲಸವಲ್ಲ… ಹೀಗೇ ಬಿಟ್ಟರೆ ಈ ಹೈಕಮಾಂಡ್ ಇಲ್ಲಿ ರಾಷ್ಟ್ರಪತಿ ಆಡಳಿತವನ್ನೂ ಹೇರಬಹುದು. ಹಾಗಾಗಿ ಪ್ರಮಾಣವಚನ ತೆಗೆದುಕೊಳ್ಳುವುದೇ ಸೈ’ ಎಂಬ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅದರ ಪರಿಣಾಮವಾಗಿಯೇ ಅವರು ಸೀದಾ ಅಮಿತ್ ಶಾಗೆ ಫೋನ್ ಮಾಡಿ, ನಾಳೆ ಯಾವುದೇ ಪರಿಸ್ಥಿತಿಯಲ್ಲೂ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ. ನೀವು ಒಪ್ಪದಿದ್ದರೆ ನಾನು ಬಿಜೆಪಿಗೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಸಿದ್ದಾರೆ ಎಂಬ ಮಾಹಿತಿಯಿದೆ. ಇದನ್ನು ಕೇಳಿ ಬೆಚ್ಚಿಬಿದ್ದ ಅಮಿತ್ ಶಾ ಅನಿವಾರ್ಯವಾಗಿ ಯಡಿಯೂರಪ್ಪರ ನಿಲುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಆದರೆ, 221 ಸದಸ್ಯರ ಸದನದಲ್ಲಿ 111 ಸದಸ್ಯರ ಬೆಂಬಲ ಇರಬೇಕು. ಆದರೆ 105 ಸದಸ್ಯರ ಬಲ ಹೊಂದಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಆಶ್ಚರ್ಯದ ವಿಷಯವೇನೂ ಅಲ್ಲ. ಅವರು ಈ ಹಿಂದೆಯೂ ಬಿಜೆಪಿಗೆ ಬಹುಮತ ಇಲ್ಲದಾಗ್ಯೂ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಪತ್ರ ನೀಡಿದ್ದಾಗ್ಯೂ, ಯಡಿಯೂರಪ್ಪನವರನ್ನೇ ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಆದರೆ, ಈಗಿನ ಪರಿಸ್ಥಿತಿ ಬೇರೆ. ಈಗ ಸ್ಪೀಕರ್ ಮೂವರನ್ನು ಅನರ್ಹಗೊಳಿಸಿದ್ದಾರೆ, ಉಳಿದವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಒಬ್ಬ ಪಕ್ಷೇತರ, ಒಬ್ಬ ಬಿಎಸ್ಪಿ ಸದಸ್ಯರು ಬೆಂಬಲ ನೀಡಿದರೂ, 111 ಆಗಲ್ಲ.

ಇಲ್ಲಿ ಯಡಿಯೂರಪ್ಪ ಮತ್ತು ರಾಜ್ಯಪಾಲರು ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರಾ? ಅಥವಾ ಯಡಿಯೂರಪ್ಪ ವಿಶ್ವಾಸಮತದಲ್ಲಿ ಫೇಲಾದ ನಂತರ ಬಿಜೆಪಿಗೆ ಅನುಕಂಪದ ಅಲೆ ದೊರೆಯಬಹುದು, ರಾಷ್ಟ್ರಪತಿ ಆಡಳಿತ ಘೋಷಿಸಿ ಆಮೇಲೆ ಚುನಾವಣೆ ಎದುರಿಸುವ ಯೋಜನೆಯನ್ನು ಹೈಕಮಾಡ್ ಮಾಡಿಕೊಂಡಿದೆಯಾ?

ಇವರ ಈ ಎಲ್ಲ ಆಟಗಳು ಸುಲಭವಾಗಿ ನಡೆಯುತ್ತವಾ? ಬರಲಿರುವ ಸ್ಪೀಕರ್ ತೀರ್ಮಾನಗಳು ಮತ್ತು ಸುಪ್ರಿಂಕೋರ್ಟಿನ ಆದೇಶಗಳನ್ನೂ ನಾವು ಗಮನದಲ್ಲಿಟ್ಟು ನೋಡಿದಾಗ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...