Homeಕರ್ನಾಟಕಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ...!

ಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ…!

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ...

- Advertisement -
- Advertisement -

ದಿಢೀರ್ ಬೆಳವಣಿಗೆ ಅನಿಸುವಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಸಂಭವಿಸುತ್ತಿವೆ. ಮೊನ್ನೆ ಸರ್ಕಾರ ಬಿದ್ದಾಗ, ‘ಎಚ್ಚರಿಕೆಯ ಹೆಜ್ಜೆ ಇಡೋಣ’ ಎಂದು ಸಲಹೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಹಾಕಿದ್ದ ಬಿಜೆಪಿ ಹೈಕಮಾಂಡ್ ಈಗ 12 ಗಂಟೆ ಸುಮಾರಿಗೆ ‘ಎಚ್ಚರಿಕೆಯ ಹೆಜ್ಜೆ ಇಡಿ, ರಿಸ್ಕ್ ತೆಗೆದುಕೊಳ್ಳುವ ಪೂರ್ತಿ ಜವಾಬ್ದಾರಿ ನಿಮ್ಮದೇ’ ಎನ್ನುವ ಮೂಲಕ ಯಡಿಯೂರಪ್ಪನವರ ಬಂಡಾಯದ ಮುಂದೆ ಮಂಡಿಯೂರಿ ಬಿಟ್ಟಂತಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ ಅದೆಷ್ಟು ಡೋಲಾಯಮಾನವಾಗಿದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಅದಕ್ಕೆ ತಕ್ಕಂತೆ ಬಿಜೆಪಿ ಹೈಕಮಾಂಡ್ ಕೂಡ ಎಚ್ಚರ ವಹಿಸಿ ತಾಳ್ಮೆಯ ನಡೆಯ ಹಾದಿ ಆರಿಸಿಕೊಂಡಿತ್ತು. ಆದರೆ, ಮೊದಲೇ ಹತಾಶಗೊಂಡಿದ್ದ ಯಡಿಯೂರಪ್ಪ ನಿನ್ನೆ ರಾತ್ರಿ ಹೈಕಮಾಂಡಿಗೇ ಸವಾಲು ಎಸೆಯುವ ಮೂಲಕ ಹೈಕಮಾಂಡ್ ಅನ್ನು ತಮ್ಮ ಬೇಡಿಕೆಗೆ ಅಥವಾ ಆಗ್ರಹಕ್ಕೆ ಬಗ್ಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವತ್ತು ದೆಹಲಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸುವುದು ನಿಗದಿಯಾಗಿತ್ತು. ನಿನ್ನೆ ಸ್ಪೀಕರ್ ರಮೇಶಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಇನ್ನಷ್ಟು ಶಾಸಕರನ್ನು ಅನರ್ಹತೆಗೊಳಿಸುವ ಸೂಕ್ಷ್ಮ ಸೂಚನೆಯನ್ನು ಕೊಟ್ಟ ಮೇಲೆ ಎಚ್ಚರಗೊಂಡ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ದುಡುಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದು, ಅದನ್ನೇ ಇವತ್ತು ಕಾರ್ಯಾಧ್ಯಕ್ಷ ಛಡ್ಡಾ ಮೂಲಕ ಹೇಳಿಸುವ ಉದ್ದೇಶ ಹೊಂದಿತ್ತು.

ಆದರೆ, ನಿನ್ನೆ ಸ್ಪೀಕರ್ ನಡೆ ನೋಡಿದ ಯಡಿಯೂರಪ್ಪ ತಮ್ಮ ಬೆಂಬಗಲಿಗರೊಂದಿಗೆ ಸಭೆ ನಡೆಸಿ, ‘ಇನ್ನು ಸುಮ್ಮನಿರಲಾಗಲ್ಲ, ಬಹುಮತ ಸಾಬೀತು ಮಾಡುವುದೇನೂ ದೊಡ್ಡ ಕೆಲಸವಲ್ಲ… ಹೀಗೇ ಬಿಟ್ಟರೆ ಈ ಹೈಕಮಾಂಡ್ ಇಲ್ಲಿ ರಾಷ್ಟ್ರಪತಿ ಆಡಳಿತವನ್ನೂ ಹೇರಬಹುದು. ಹಾಗಾಗಿ ಪ್ರಮಾಣವಚನ ತೆಗೆದುಕೊಳ್ಳುವುದೇ ಸೈ’ ಎಂಬ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅದರ ಪರಿಣಾಮವಾಗಿಯೇ ಅವರು ಸೀದಾ ಅಮಿತ್ ಶಾಗೆ ಫೋನ್ ಮಾಡಿ, ನಾಳೆ ಯಾವುದೇ ಪರಿಸ್ಥಿತಿಯಲ್ಲೂ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ. ನೀವು ಒಪ್ಪದಿದ್ದರೆ ನಾನು ಬಿಜೆಪಿಗೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಸಿದ್ದಾರೆ ಎಂಬ ಮಾಹಿತಿಯಿದೆ. ಇದನ್ನು ಕೇಳಿ ಬೆಚ್ಚಿಬಿದ್ದ ಅಮಿತ್ ಶಾ ಅನಿವಾರ್ಯವಾಗಿ ಯಡಿಯೂರಪ್ಪರ ನಿಲುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಆದರೆ, 221 ಸದಸ್ಯರ ಸದನದಲ್ಲಿ 111 ಸದಸ್ಯರ ಬೆಂಬಲ ಇರಬೇಕು. ಆದರೆ 105 ಸದಸ್ಯರ ಬಲ ಹೊಂದಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಆಶ್ಚರ್ಯದ ವಿಷಯವೇನೂ ಅಲ್ಲ. ಅವರು ಈ ಹಿಂದೆಯೂ ಬಿಜೆಪಿಗೆ ಬಹುಮತ ಇಲ್ಲದಾಗ್ಯೂ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಪತ್ರ ನೀಡಿದ್ದಾಗ್ಯೂ, ಯಡಿಯೂರಪ್ಪನವರನ್ನೇ ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಆದರೆ, ಈಗಿನ ಪರಿಸ್ಥಿತಿ ಬೇರೆ. ಈಗ ಸ್ಪೀಕರ್ ಮೂವರನ್ನು ಅನರ್ಹಗೊಳಿಸಿದ್ದಾರೆ, ಉಳಿದವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಒಬ್ಬ ಪಕ್ಷೇತರ, ಒಬ್ಬ ಬಿಎಸ್ಪಿ ಸದಸ್ಯರು ಬೆಂಬಲ ನೀಡಿದರೂ, 111 ಆಗಲ್ಲ.

ಇಲ್ಲಿ ಯಡಿಯೂರಪ್ಪ ಮತ್ತು ರಾಜ್ಯಪಾಲರು ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರಾ? ಅಥವಾ ಯಡಿಯೂರಪ್ಪ ವಿಶ್ವಾಸಮತದಲ್ಲಿ ಫೇಲಾದ ನಂತರ ಬಿಜೆಪಿಗೆ ಅನುಕಂಪದ ಅಲೆ ದೊರೆಯಬಹುದು, ರಾಷ್ಟ್ರಪತಿ ಆಡಳಿತ ಘೋಷಿಸಿ ಆಮೇಲೆ ಚುನಾವಣೆ ಎದುರಿಸುವ ಯೋಜನೆಯನ್ನು ಹೈಕಮಾಡ್ ಮಾಡಿಕೊಂಡಿದೆಯಾ?

ಇವರ ಈ ಎಲ್ಲ ಆಟಗಳು ಸುಲಭವಾಗಿ ನಡೆಯುತ್ತವಾ? ಬರಲಿರುವ ಸ್ಪೀಕರ್ ತೀರ್ಮಾನಗಳು ಮತ್ತು ಸುಪ್ರಿಂಕೋರ್ಟಿನ ಆದೇಶಗಳನ್ನೂ ನಾವು ಗಮನದಲ್ಲಿಟ್ಟು ನೋಡಿದಾಗ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...