Homeಕರ್ನಾಟಕಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ...!

ಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ…!

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ...

- Advertisement -
- Advertisement -

ದಿಢೀರ್ ಬೆಳವಣಿಗೆ ಅನಿಸುವಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಸಂಭವಿಸುತ್ತಿವೆ. ಮೊನ್ನೆ ಸರ್ಕಾರ ಬಿದ್ದಾಗ, ‘ಎಚ್ಚರಿಕೆಯ ಹೆಜ್ಜೆ ಇಡೋಣ’ ಎಂದು ಸಲಹೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಹಾಕಿದ್ದ ಬಿಜೆಪಿ ಹೈಕಮಾಂಡ್ ಈಗ 12 ಗಂಟೆ ಸುಮಾರಿಗೆ ‘ಎಚ್ಚರಿಕೆಯ ಹೆಜ್ಜೆ ಇಡಿ, ರಿಸ್ಕ್ ತೆಗೆದುಕೊಳ್ಳುವ ಪೂರ್ತಿ ಜವಾಬ್ದಾರಿ ನಿಮ್ಮದೇ’ ಎನ್ನುವ ಮೂಲಕ ಯಡಿಯೂರಪ್ಪನವರ ಬಂಡಾಯದ ಮುಂದೆ ಮಂಡಿಯೂರಿ ಬಿಟ್ಟಂತಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ ಅದೆಷ್ಟು ಡೋಲಾಯಮಾನವಾಗಿದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಅದಕ್ಕೆ ತಕ್ಕಂತೆ ಬಿಜೆಪಿ ಹೈಕಮಾಂಡ್ ಕೂಡ ಎಚ್ಚರ ವಹಿಸಿ ತಾಳ್ಮೆಯ ನಡೆಯ ಹಾದಿ ಆರಿಸಿಕೊಂಡಿತ್ತು. ಆದರೆ, ಮೊದಲೇ ಹತಾಶಗೊಂಡಿದ್ದ ಯಡಿಯೂರಪ್ಪ ನಿನ್ನೆ ರಾತ್ರಿ ಹೈಕಮಾಂಡಿಗೇ ಸವಾಲು ಎಸೆಯುವ ಮೂಲಕ ಹೈಕಮಾಂಡ್ ಅನ್ನು ತಮ್ಮ ಬೇಡಿಕೆಗೆ ಅಥವಾ ಆಗ್ರಹಕ್ಕೆ ಬಗ್ಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವತ್ತು ದೆಹಲಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸುವುದು ನಿಗದಿಯಾಗಿತ್ತು. ನಿನ್ನೆ ಸ್ಪೀಕರ್ ರಮೇಶಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಇನ್ನಷ್ಟು ಶಾಸಕರನ್ನು ಅನರ್ಹತೆಗೊಳಿಸುವ ಸೂಕ್ಷ್ಮ ಸೂಚನೆಯನ್ನು ಕೊಟ್ಟ ಮೇಲೆ ಎಚ್ಚರಗೊಂಡ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ದುಡುಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದು, ಅದನ್ನೇ ಇವತ್ತು ಕಾರ್ಯಾಧ್ಯಕ್ಷ ಛಡ್ಡಾ ಮೂಲಕ ಹೇಳಿಸುವ ಉದ್ದೇಶ ಹೊಂದಿತ್ತು.

ಆದರೆ, ನಿನ್ನೆ ಸ್ಪೀಕರ್ ನಡೆ ನೋಡಿದ ಯಡಿಯೂರಪ್ಪ ತಮ್ಮ ಬೆಂಬಗಲಿಗರೊಂದಿಗೆ ಸಭೆ ನಡೆಸಿ, ‘ಇನ್ನು ಸುಮ್ಮನಿರಲಾಗಲ್ಲ, ಬಹುಮತ ಸಾಬೀತು ಮಾಡುವುದೇನೂ ದೊಡ್ಡ ಕೆಲಸವಲ್ಲ… ಹೀಗೇ ಬಿಟ್ಟರೆ ಈ ಹೈಕಮಾಂಡ್ ಇಲ್ಲಿ ರಾಷ್ಟ್ರಪತಿ ಆಡಳಿತವನ್ನೂ ಹೇರಬಹುದು. ಹಾಗಾಗಿ ಪ್ರಮಾಣವಚನ ತೆಗೆದುಕೊಳ್ಳುವುದೇ ಸೈ’ ಎಂಬ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅದರ ಪರಿಣಾಮವಾಗಿಯೇ ಅವರು ಸೀದಾ ಅಮಿತ್ ಶಾಗೆ ಫೋನ್ ಮಾಡಿ, ನಾಳೆ ಯಾವುದೇ ಪರಿಸ್ಥಿತಿಯಲ್ಲೂ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ. ನೀವು ಒಪ್ಪದಿದ್ದರೆ ನಾನು ಬಿಜೆಪಿಗೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಸಿದ್ದಾರೆ ಎಂಬ ಮಾಹಿತಿಯಿದೆ. ಇದನ್ನು ಕೇಳಿ ಬೆಚ್ಚಿಬಿದ್ದ ಅಮಿತ್ ಶಾ ಅನಿವಾರ್ಯವಾಗಿ ಯಡಿಯೂರಪ್ಪರ ನಿಲುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಆದರೆ, 221 ಸದಸ್ಯರ ಸದನದಲ್ಲಿ 111 ಸದಸ್ಯರ ಬೆಂಬಲ ಇರಬೇಕು. ಆದರೆ 105 ಸದಸ್ಯರ ಬಲ ಹೊಂದಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಆಶ್ಚರ್ಯದ ವಿಷಯವೇನೂ ಅಲ್ಲ. ಅವರು ಈ ಹಿಂದೆಯೂ ಬಿಜೆಪಿಗೆ ಬಹುಮತ ಇಲ್ಲದಾಗ್ಯೂ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಪತ್ರ ನೀಡಿದ್ದಾಗ್ಯೂ, ಯಡಿಯೂರಪ್ಪನವರನ್ನೇ ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಆದರೆ, ಈಗಿನ ಪರಿಸ್ಥಿತಿ ಬೇರೆ. ಈಗ ಸ್ಪೀಕರ್ ಮೂವರನ್ನು ಅನರ್ಹಗೊಳಿಸಿದ್ದಾರೆ, ಉಳಿದವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಒಬ್ಬ ಪಕ್ಷೇತರ, ಒಬ್ಬ ಬಿಎಸ್ಪಿ ಸದಸ್ಯರು ಬೆಂಬಲ ನೀಡಿದರೂ, 111 ಆಗಲ್ಲ.

ಇಲ್ಲಿ ಯಡಿಯೂರಪ್ಪ ಮತ್ತು ರಾಜ್ಯಪಾಲರು ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರಾ? ಅಥವಾ ಯಡಿಯೂರಪ್ಪ ವಿಶ್ವಾಸಮತದಲ್ಲಿ ಫೇಲಾದ ನಂತರ ಬಿಜೆಪಿಗೆ ಅನುಕಂಪದ ಅಲೆ ದೊರೆಯಬಹುದು, ರಾಷ್ಟ್ರಪತಿ ಆಡಳಿತ ಘೋಷಿಸಿ ಆಮೇಲೆ ಚುನಾವಣೆ ಎದುರಿಸುವ ಯೋಜನೆಯನ್ನು ಹೈಕಮಾಡ್ ಮಾಡಿಕೊಂಡಿದೆಯಾ?

ಇವರ ಈ ಎಲ್ಲ ಆಟಗಳು ಸುಲಭವಾಗಿ ನಡೆಯುತ್ತವಾ? ಬರಲಿರುವ ಸ್ಪೀಕರ್ ತೀರ್ಮಾನಗಳು ಮತ್ತು ಸುಪ್ರಿಂಕೋರ್ಟಿನ ಆದೇಶಗಳನ್ನೂ ನಾವು ಗಮನದಲ್ಲಿಟ್ಟು ನೋಡಿದಾಗ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...