Homeಕರ್ನಾಟಕಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ” ಎಂದು ಜೆಡಿಎಸ್‌ ಹರಿಹಾಯ್ದಿದೆ

- Advertisement -
- Advertisement -

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಚ್‌.ಡಿ.ದೇವೇಗೌಡ ಅವರನ್ನು ಆಹ್ವಾನಿಸಿಲ್ಲದಿರುವುದು ಟೀಕೆಗೆ ಗುರಿಯಾಗಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಾ.ದಳ (ಜೆಡಿಎಸ್‌), ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ” ಎಂದು ಹರಿಹಾಯ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಜೆಡಿಎಸ್ ಆಕ್ರೋಶ ಹೊರಹಾಕಿದೆ.

“ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ?” ಎಂದು ಪ್ರಶ್ನಿಸಿದೆ.

“ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ‘” ಎಂದು ಬೇಸರ ವ್ಯಕ್ತಪಡಿಸಿದೆ.

“ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ” ಎಂದು ಅಭಿಪ್ರಾಯಪಟ್ಟಿದೆ.

“ಸರ್ವಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

“ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ” ಎಂದು ಟೀಕಿಸಿದೆ.

“ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ಬರುವಾಗ ಎಷ್ಟೊಂದು ವಿಜೃಂಭಣೆಯಿಂದ ಅಲಂಕಾರ ಮಾಡಿದ್ದಾರೆ ನೋಡಿ ನೆಲಕ್ಕೆ ಕೆಂಪು ಕೆಂಪು ಕೆಂಪು ಕೆಂಪು ಕಾರ್ಪೆಟ್ ಹಾಸಿ ಹೇಗೆ ಅಲಂಕಾರಿಸಿದ್ದಾರೆ ನೋಡಿ ಆದರೆ ಅಲ್ಲಿ ಇದ್ದವರ ಜನರನ್ನು ಐಡೆಂಟಿ ಮಾಡಿ ಉನ್ನತ ವರ್ಗದವರು ಮಾತ್ರ ಕಾಣಿಸ್ತಿದ್ರು, ಹೆಚ್ಚಾಗಿ ಶೂದ್ರನೂ ದಲಿತನು ಗೌಡನು ಕಾಣಿಸಿಲ್ಲ ಅಥವಾ ಮಾಧ್ಯಮದವರು ತೋರಿಸುವುದೇ ಹಾಗೆಯೋ ಏನೋ ಗೊತ್ತಿಲ್ಲ ಆದರೆ ಅದಕ್ಕೆ ಸಾಕ್ಷಿಯಾಗಿ ನಿಜವಾಗಿ ಸನ್ಮಾನ್ಯ ದೇವೇಗೌಡರನ್ನು ಕರೆಯಲೇಬೇಕಿತ್ತು, ಕರಿಲಿಲ್ಲ ಅಂತಾರೆ ನಿಜವೋ ಗೊತ್ತಿಲ್ಲ, ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸುವವಾಗ ಹಿರಿಯ ತಲೆಯ ವ್ಯಕ್ತಿಯನ್ನ( ದೇವೇಗೌಡರು ) ಕರೆಯದೆ ಇದ್ದದ್ದು ಸರಕಾರದ ಕೋಮುವಾದಿತನವನ್ನು ತೋರಿಸುತ್ತದೆ .

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...