Homeಕರ್ನಾಟಕಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ” ಎಂದು ಜೆಡಿಎಸ್‌ ಹರಿಹಾಯ್ದಿದೆ

- Advertisement -
- Advertisement -

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಚ್‌.ಡಿ.ದೇವೇಗೌಡ ಅವರನ್ನು ಆಹ್ವಾನಿಸಿಲ್ಲದಿರುವುದು ಟೀಕೆಗೆ ಗುರಿಯಾಗಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಾ.ದಳ (ಜೆಡಿಎಸ್‌), ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ” ಎಂದು ಹರಿಹಾಯ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಜೆಡಿಎಸ್ ಆಕ್ರೋಶ ಹೊರಹಾಕಿದೆ.

“ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ?” ಎಂದು ಪ್ರಶ್ನಿಸಿದೆ.

“ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ‘” ಎಂದು ಬೇಸರ ವ್ಯಕ್ತಪಡಿಸಿದೆ.

“ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ” ಎಂದು ಅಭಿಪ್ರಾಯಪಟ್ಟಿದೆ.

“ಸರ್ವಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ” ಎಂದು ಎಚ್ಚರಿಸಿದೆ.

ಇದನ್ನೂ ಓದಿರಿ: ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

“ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ” ಎಂದು ಟೀಕಿಸಿದೆ.

“ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ಬರುವಾಗ ಎಷ್ಟೊಂದು ವಿಜೃಂಭಣೆಯಿಂದ ಅಲಂಕಾರ ಮಾಡಿದ್ದಾರೆ ನೋಡಿ ನೆಲಕ್ಕೆ ಕೆಂಪು ಕೆಂಪು ಕೆಂಪು ಕೆಂಪು ಕಾರ್ಪೆಟ್ ಹಾಸಿ ಹೇಗೆ ಅಲಂಕಾರಿಸಿದ್ದಾರೆ ನೋಡಿ ಆದರೆ ಅಲ್ಲಿ ಇದ್ದವರ ಜನರನ್ನು ಐಡೆಂಟಿ ಮಾಡಿ ಉನ್ನತ ವರ್ಗದವರು ಮಾತ್ರ ಕಾಣಿಸ್ತಿದ್ರು, ಹೆಚ್ಚಾಗಿ ಶೂದ್ರನೂ ದಲಿತನು ಗೌಡನು ಕಾಣಿಸಿಲ್ಲ ಅಥವಾ ಮಾಧ್ಯಮದವರು ತೋರಿಸುವುದೇ ಹಾಗೆಯೋ ಏನೋ ಗೊತ್ತಿಲ್ಲ ಆದರೆ ಅದಕ್ಕೆ ಸಾಕ್ಷಿಯಾಗಿ ನಿಜವಾಗಿ ಸನ್ಮಾನ್ಯ ದೇವೇಗೌಡರನ್ನು ಕರೆಯಲೇಬೇಕಿತ್ತು, ಕರಿಲಿಲ್ಲ ಅಂತಾರೆ ನಿಜವೋ ಗೊತ್ತಿಲ್ಲ, ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸುವವಾಗ ಹಿರಿಯ ತಲೆಯ ವ್ಯಕ್ತಿಯನ್ನ( ದೇವೇಗೌಡರು ) ಕರೆಯದೆ ಇದ್ದದ್ದು ಸರಕಾರದ ಕೋಮುವಾದಿತನವನ್ನು ತೋರಿಸುತ್ತದೆ .

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...