Homeಮುಖಪುಟಬಿಜೆಪಿ ಹರಿಯಾಣದಲ್ಲಿ 'ನಿರುದ್ಯೋಗ ರೋಗ' ಹರಡಿದೆ | ರಾಹುಲ್ ಗಾಂಧಿ

ಬಿಜೆಪಿ ಹರಿಯಾಣದಲ್ಲಿ ‘ನಿರುದ್ಯೋಗ ರೋಗ’ ಹರಡಿದೆ | ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿ ಹರಡುವ ನಿರುದ್ಯೋಗದ ರೋಗವು ಹರಿಯಾಣದ ಭದ್ರತೆ ಮತ್ತು ಯುವಕರ ಭವಿಷ್ಯವನ್ನು “ತೀವ್ರವಾಗಿ ಅಪಾಯ” ದಲ್ಲಿ ಸಿಲುಕಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಿಡಿದರೆ ಕಾಂಗ್ರೆಸ್ ಸರ್ಕಾರವು ಯುವಕರಿಗೆ ಉದ್ಯೋಗವನ್ನು ಹಿಂದಿರುಗಿಸುತ್ತದೆ ಎಂದು ಪ್ರತಿಪಾದಿಸಿದ ಅವರು, ಪ್ರತಿ ಕುಟುಂಬವು ರಾಜ್ಯದಲ್ಲಿ ಸಮೃದ್ಧವಾಗಲಿದೆ ಎಂದು ಹೇಳಿದ್ದಾರೆ.ಬಿಜೆಪಿ ಹರಿಯಾಣದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಇತ್ತೀಚಿನ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದ ಮಹಿಳೆಯರ ಗುಂಪಿನೊಂದಿಗೆ ನಡೆಸಿದ ಸಂವಾದದ ವೀಡಿಯೊವನ್ನು ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ಹಂಚಿಕೊಂಡಿದ್ದಾರೆ. ವೀಡಿಯೊ ಜೊತೆಗೆ ತಮ್ಮ ಪೋಸ್ಟ್‌ನಲ್ಲಿ, “ಬಿಜೆಪಿ ಹರಡುವ ನಿರುದ್ಯೋಗ ರೋಗವು ಹರಿಯಾಣದ ಬೇರುಗಳನ್ನು, ಯುವಕರ ಭವಿಷ್ಯ ಮತ್ತು ರಾಜ್ಯದ ಭದ್ರತೆಯನ್ನು ತೀವ್ರವಾಗಿ ಅಪಾಯದಲ್ಲಿ ಸಿಲುಕಿಸಿದೆ” ಎಂದು ಹೇಳಿದ್ದಾರೆ.

“ಹರಿಯಾಣದ ಕೆಲವು ಸಹೋದರಿಯರು ವಿಜಯ್ ಸಂಕಲ್ಪ ಯಾತ್ರೆಯ ಸಮಯದಲ್ಲಿ ನಮಗೆ ಆಶ್ರಯ ನೀಡಿದರು. ಮನೆಯ ರೊಟ್ಟಿಗಳನ್ನು ಬಹಳ ಪ್ರೀತಿಯಿಂದ ತಿನ್ನಿಸಿದರು ಮತ್ತು ರಾಜ್ಯದ ಸಂಕೀರ್ಣ ಸಮಸ್ಯೆಗಳನ್ನು ವಿವರಿಸಿದರು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿರುವ ರಾಜ್ಯವಾಗಿ ಹರಿಯಾಣ ಹೊರಹೊಮ್ಮಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಒಳ ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

”ಕಳೆದ ಒಂದು ದಶಕದಲ್ಲಿ ರಾಜ್ಯದ ಯುವಕರಿಗೆ ಉದ್ಯೋಗ ನೀಡುವ ಪ್ರತಿಯೊಂದು ವ್ಯವಸ್ಥೆಯ ಬೆನ್ನೆಲುಬನ್ನು ಬಿಜೆಪಿ ಮುರಿದಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೋಷಪೂರಿತ ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಮೂಲಕ ಬಿಜೆಪಿ ಸಣ್ಣ ಉದ್ಯಮಗಳ ಬೆನ್ನು ಮುರಿದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಜೊತೆಗೆ ಅಗ್ನಿವೀರ್‌ ತಂದು ಸೇನೆಗೆ ತಯಾರಿ ನಡೆಸುತ್ತಿರುವ ಯುವಕರ ಉತ್ಸಾಹವನ್ನು ಕೂಡಾ ಬಿಜೆಪಿ ಮುರಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿಜೆಪಿ ಹರಿಯಾಣದಲ್ಲಿ

ಕರಾಳ ಕಾನೂನುಗಳ ಮೂಲಕ ಕೃಷಿ ವ್ಯಾಪಾರ ಮಾಡುವವರ ಧೈರ್ಯವನ್ನು ಬಿಜೆಪಿ ಮುರಿದಿದೆ. ಬೆಂಬಲವನ್ನು ಕಸಿದುಕೊಳ್ಳುವ ಮೂಲಕ ಕ್ರೀಡಾಪಟುಗಳ ಕನಸುಗಳನ್ನು ಮುರಿದಿದೆ. ‘ಪರಿವಾರ ಪೆಹಚಾನ್ ಪತ್ರ’ದೊಂದಿಗೆ ಸರ್ಕಾರಿ ನೇಮಕಾತಿಯನ್ನು ನಿಲ್ಲಿಸುವ ಮೂಲಕ ಕುಟುಂಬಗಳನ್ನು ಒಡೆಯುವಂತೆ ಮಾಡಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

“ಬಿಜೆಪಿಯ ಕೃತ್ಯದ ಪರಿಣಾಮ, ಯುವ ಪ್ರತಿಭೆಗಳು ಮಾದಕ ದ್ರವ್ಯಗಳ ಹಿಡಿತದಲ್ಲಿ ವ್ಯರ್ಥವಾಗುತ್ತಿವೆ. ನಿರಾಶೆಗೊಂಡ ಯುವಕರು ಅಪರಾಧದ ಹಾದಿ ಹಿಡಿಯುತ್ತಿದ್ದಾರೆ. ಡಂಕಿಯಂತಹ ಅಪಾಯಗಳ ಪ್ರಯಾಣದಿಂದ ಕುಟುಂಬಗಳು ನಾಶವಾಗುತ್ತಿವೆ” ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಸರ್ಕಾರ 2 ಲಕ್ಷ ಖಾಯಂ ಉದ್ಯೋಗಗಳನ್ನು ನೇಮಕ ಮಾಡಿ ಹರಿಯಾಣವನ್ನು ಮಾದಕ ದ್ರವ್ಯ ಮುಕ್ತವನ್ನಾಗಿ ಮಾಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...