Homeಮುಖಪುಟಬಿಜೆಪಿ ಹರಿಯಾಣದಲ್ಲಿ 'ನಿರುದ್ಯೋಗ ರೋಗ' ಹರಡಿದೆ | ರಾಹುಲ್ ಗಾಂಧಿ

ಬಿಜೆಪಿ ಹರಿಯಾಣದಲ್ಲಿ ‘ನಿರುದ್ಯೋಗ ರೋಗ’ ಹರಡಿದೆ | ರಾಹುಲ್ ಗಾಂಧಿ

- Advertisement -
- Advertisement -

ಬಿಜೆಪಿ ಹರಡುವ ನಿರುದ್ಯೋಗದ ರೋಗವು ಹರಿಯಾಣದ ಭದ್ರತೆ ಮತ್ತು ಯುವಕರ ಭವಿಷ್ಯವನ್ನು “ತೀವ್ರವಾಗಿ ಅಪಾಯ” ದಲ್ಲಿ ಸಿಲುಕಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಿಡಿದರೆ ಕಾಂಗ್ರೆಸ್ ಸರ್ಕಾರವು ಯುವಕರಿಗೆ ಉದ್ಯೋಗವನ್ನು ಹಿಂದಿರುಗಿಸುತ್ತದೆ ಎಂದು ಪ್ರತಿಪಾದಿಸಿದ ಅವರು, ಪ್ರತಿ ಕುಟುಂಬವು ರಾಜ್ಯದಲ್ಲಿ ಸಮೃದ್ಧವಾಗಲಿದೆ ಎಂದು ಹೇಳಿದ್ದಾರೆ.ಬಿಜೆಪಿ ಹರಿಯಾಣದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಇತ್ತೀಚಿನ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದ ಮಹಿಳೆಯರ ಗುಂಪಿನೊಂದಿಗೆ ನಡೆಸಿದ ಸಂವಾದದ ವೀಡಿಯೊವನ್ನು ಎಕ್ಸ್‌ನಲ್ಲಿ ರಾಹುಲ್ ಗಾಂಧಿಯವರು ಹಂಚಿಕೊಂಡಿದ್ದಾರೆ. ವೀಡಿಯೊ ಜೊತೆಗೆ ತಮ್ಮ ಪೋಸ್ಟ್‌ನಲ್ಲಿ, “ಬಿಜೆಪಿ ಹರಡುವ ನಿರುದ್ಯೋಗ ರೋಗವು ಹರಿಯಾಣದ ಬೇರುಗಳನ್ನು, ಯುವಕರ ಭವಿಷ್ಯ ಮತ್ತು ರಾಜ್ಯದ ಭದ್ರತೆಯನ್ನು ತೀವ್ರವಾಗಿ ಅಪಾಯದಲ್ಲಿ ಸಿಲುಕಿಸಿದೆ” ಎಂದು ಹೇಳಿದ್ದಾರೆ.

“ಹರಿಯಾಣದ ಕೆಲವು ಸಹೋದರಿಯರು ವಿಜಯ್ ಸಂಕಲ್ಪ ಯಾತ್ರೆಯ ಸಮಯದಲ್ಲಿ ನಮಗೆ ಆಶ್ರಯ ನೀಡಿದರು. ಮನೆಯ ರೊಟ್ಟಿಗಳನ್ನು ಬಹಳ ಪ್ರೀತಿಯಿಂದ ತಿನ್ನಿಸಿದರು ಮತ್ತು ರಾಜ್ಯದ ಸಂಕೀರ್ಣ ಸಮಸ್ಯೆಗಳನ್ನು ವಿವರಿಸಿದರು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿರುವ ರಾಜ್ಯವಾಗಿ ಹರಿಯಾಣ ಹೊರಹೊಮ್ಮಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಒಳ ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

”ಕಳೆದ ಒಂದು ದಶಕದಲ್ಲಿ ರಾಜ್ಯದ ಯುವಕರಿಗೆ ಉದ್ಯೋಗ ನೀಡುವ ಪ್ರತಿಯೊಂದು ವ್ಯವಸ್ಥೆಯ ಬೆನ್ನೆಲುಬನ್ನು ಬಿಜೆಪಿ ಮುರಿದಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೋಷಪೂರಿತ ಜಿಎಸ್‌ಟಿ ಮತ್ತು ನೋಟು ಅಮಾನ್ಯೀಕರಣದ ಮೂಲಕ ಬಿಜೆಪಿ ಸಣ್ಣ ಉದ್ಯಮಗಳ ಬೆನ್ನು ಮುರಿದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಜೊತೆಗೆ ಅಗ್ನಿವೀರ್‌ ತಂದು ಸೇನೆಗೆ ತಯಾರಿ ನಡೆಸುತ್ತಿರುವ ಯುವಕರ ಉತ್ಸಾಹವನ್ನು ಕೂಡಾ ಬಿಜೆಪಿ ಮುರಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿಜೆಪಿ ಹರಿಯಾಣದಲ್ಲಿ

ಕರಾಳ ಕಾನೂನುಗಳ ಮೂಲಕ ಕೃಷಿ ವ್ಯಾಪಾರ ಮಾಡುವವರ ಧೈರ್ಯವನ್ನು ಬಿಜೆಪಿ ಮುರಿದಿದೆ. ಬೆಂಬಲವನ್ನು ಕಸಿದುಕೊಳ್ಳುವ ಮೂಲಕ ಕ್ರೀಡಾಪಟುಗಳ ಕನಸುಗಳನ್ನು ಮುರಿದಿದೆ. ‘ಪರಿವಾರ ಪೆಹಚಾನ್ ಪತ್ರ’ದೊಂದಿಗೆ ಸರ್ಕಾರಿ ನೇಮಕಾತಿಯನ್ನು ನಿಲ್ಲಿಸುವ ಮೂಲಕ ಕುಟುಂಬಗಳನ್ನು ಒಡೆಯುವಂತೆ ಮಾಡಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

“ಬಿಜೆಪಿಯ ಕೃತ್ಯದ ಪರಿಣಾಮ, ಯುವ ಪ್ರತಿಭೆಗಳು ಮಾದಕ ದ್ರವ್ಯಗಳ ಹಿಡಿತದಲ್ಲಿ ವ್ಯರ್ಥವಾಗುತ್ತಿವೆ. ನಿರಾಶೆಗೊಂಡ ಯುವಕರು ಅಪರಾಧದ ಹಾದಿ ಹಿಡಿಯುತ್ತಿದ್ದಾರೆ. ಡಂಕಿಯಂತಹ ಅಪಾಯಗಳ ಪ್ರಯಾಣದಿಂದ ಕುಟುಂಬಗಳು ನಾಶವಾಗುತ್ತಿವೆ” ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಸರ್ಕಾರ 2 ಲಕ್ಷ ಖಾಯಂ ಉದ್ಯೋಗಗಳನ್ನು ನೇಮಕ ಮಾಡಿ ಹರಿಯಾಣವನ್ನು ಮಾದಕ ದ್ರವ್ಯ ಮುಕ್ತವನ್ನಾಗಿ ಮಾಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...