Homeಕರ್ನಾಟಕವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ: ಜಗದೀಶ್ ಶೆಟ್ಟರ್

ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ: ಜಗದೀಶ್ ಶೆಟ್ಟರ್

- Advertisement -
- Advertisement -

ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ‌ ಹೆಸರು ಕೇಳಿ ಬರುತ್ತಿದ್ದು, ಯಾರು ಅಧ್ಯಕ್ಷರು ಎನ್ನುವುದು ಬಹಿರಂಗವಾಗಿ ಹೇಳುತ್ತಿಲ್ಲ. ದೆಹಲಿ ವರಿಷ್ಠರು ಒಂದು ಹೆಸರು ತೇಲಿಬಿಟ್ಟರು ಅದರ ಪ್ರತಿಕ್ರಿಯೆಗಳನ್ನು ನೋಡಿ ಅದು ಫೇಲ್ ಆಯಿತು. ಹಾಗಾಗಿ ಈಗ ಮತ್ತೆ ಬೇರೆ ಹೆಸರಿನ ಪ್ರಯೋಗ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಶೋಭಾ ಕರಂದ್ಲಾಜೆ ಊಹಾಪೋಹ ಅಂತ ಹೇಳಿದ್ದಾರೆ. ರಾಜ್ಯಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು” ಎಂದರು

”ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗುವುದಿಲ್ಲ. ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನದ ಭಾಗವಾಗಿ, ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಹೇಳುತ್ತಾ ಅವರಲ್ಲಿ ಆಶಾಭಾವನೆ ಮೂಡಿಸಸುವ ಪ್ರಯತ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತದೆ. 104 ಇದ್ದಾಗಾಲೇ ಏನು ಮಾಡಲು ಆಗಿಲ್ಲ ಈಗ ಏನು ಮಾಡಲು ಸಾಧ್ಯ? ಎಂದು ಶೆಟ್ಟರ್ ಸವಾಲು ಹಾಕಿದ್ದಾರೆ.

ಡಿಕೆಶಿ-ಹೆಚ್‌ಡಿಕೆ ನಡುವಿನ ಕಿತ್ತಾಡದ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ”ಬೆಂಗಳೂರು ಸಾಕಷ್ಟು ಬೆಳವಣಿಗೆ ಆಗಿದೆ. ನೂರಾರು ಹಳ್ಳಿಗಳು ಬೆಂಗಳೂರಿಗೆ ಸೇರುತ್ತಿವೆ. ಇದಕ್ಕೆ ಕನಕಪುರ ಹೊರತಾಗಿಲ್ಲ. ಕನಕಪುರ ಬೆಂಗಳೂರು ಗ್ರಾಮೀಣದ ಒಂದು ಭಾಗ. ಸಹಜವಾಗಿ ಕನಕಪುರ ಬೆಂಗಳೂರು ನಗರಕ್ಕೆ ಸೇರಿದೆ ಎನ್ನುವುದರಲ್ಲಿ ಆಶ್ಚರ್ಯಪಡುವಂತಹ ವಿಚಾರ ಏನಿದೆ. ಇದಕ್ಕೆ ವಿಶೇಷ ಕಾಮೆಂಟ್ ಮಾಡುವ ಅವಶ್ಯಕತೆ ಇಲ್ಲ. ಡಿಕೆಶಿ ಕನಕಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಹೊರತು ಜಿಲ್ಲೆಯ ಬಗ್ಗೆ ಹೇಳಿಲ್ಲ” ಎಂದರು.

”ಡಿಕೆಶಿ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ಅವರು ಅಭಿವೃದ್ಧಿಗೆ ಒತ್ತು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಎಲ್ಲವನ್ನೂ ರಾಜಕೀಯ ಮಾಡಲಾಗುತ್ತಿದೆ. ಇದನ್ನು ಬಿಟ್ಟು ಇಡೀ ವ್ಯವಸ್ಥೆಗೆ ಅನುಕೂಲ ಆಗುವುದನ್ನು ನೋಡಬೇಕು” ಎಂದು ಹೇಳಿದರು.

”ಕುಮಾರಸ್ವಾಮಿ ಏನೇ ಟಿಕೆ ಮಾಡಿದರು ಅದಕ್ಕೆ ಪುರಾವೆ ಇರಬೇಕು. ಜಾರ್ಜ್ ಮನೆಯಲ್ಲಿ ಸಿದ್ದರಾಮಯ್ಯ ಏನು ಮಾಡಿದರು ಅಂತ ಪ್ರಶ್ನೆ ಮಾಡಿದರೆ, ಅದು ಪ್ರಶ್ನೆಯಾಗಿಯೇ ಉಳಿಯಲಿದೆ. ಪೆನ್ ಡ್ರೈವ್ ವಿಚಾರದಲ್ಲಿಯೂ‌ ಇದೆ ಆಯಿತು. ಟೀಕೆ ಮಾಡುವ ಸಲುವಾಗಿ ಟ್ವೀಟ್ ಮಾಡಿದರೆ ಅದರಿಂದ ಏನು ಉಪಯೋಗ ಆಗುವುದಿಲ್ಲ. ಮಾಧ್ಯಮದಲ್ಲಿ ಚರ್ಚೆ ಆಗುತ್ತೆ ಹೊರೆತು ವಾಸ್ತವವಾಗಿ ಏನು ಗೊತ್ತಾಗುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ದೇವಾಲಯದ ಆವರಣದಲ್ಲಿ RSS ಚಟುವಟಿಕೆಗೆ ನಿಷೇಧ: ಕೇರಳ ಸರ್ಕಾರದ ಸುತ್ತೋಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...